Homeಅಂಕಣಗಳುಪುಟಕ್ಕಿಟ್ಟ ಪುಟಗಳುಪುಟಕ್ಕಿಟ್ಟ ಪುಟಗಳು: ಲಿಯೋ ಟಾಲ್ಸ್‌ಟಾಯ್‌ರವರ ಯುದ್ಧ ಮತ್ತು ಶಾಂತಿ

ಪುಟಕ್ಕಿಟ್ಟ ಪುಟಗಳು: ಲಿಯೋ ಟಾಲ್ಸ್‌ಟಾಯ್‌ರವರ ಯುದ್ಧ ಮತ್ತು ಶಾಂತಿ

ಯುದ್ಧಾಸ್ತ್ರಗಳು ಹೇರಳವಾಗಿ ವ್ಯಾಪಾರದ ಸರಕಾದ ಮೇಲೆ, ಹೂಡಿದ ಬಂಡವಾಳಕ್ಕೆ ಲಾಭ ತರಲು ಯುದ್ಧಗಳನ್ನು ಒಲ್ಲೆ ಒಲ್ಲೆ ಎನ್ನುತ್ತಲೇ ಕಾರಣಗಳನ್ನು ಸೃಷ್ಟಿಸುತ್ತಾರೆ ಬಲಿಷ್ಟ ರಾಷ್ಟ್ರದ ಬಂಡವಾಳದ ಕೈಗಳು.

- Advertisement -
- Advertisement -

ಲಿಯೋ ಟಾಲ್ಸ್‌ಟಾಯ್ ಅವರ ಕಾದಂಬರಿ ‘ವಾರ್ ಅಂಡ್ ಪೀಸ್’ ನಾನಾ ಕಾರಣಗಳಿಂದ ಬಹು ಪ್ರಖ್ಯಾತವಾದದ್ದು. ಆದರೆ ಟಾಲ್ಸ್‌ಟಾಯ್ ಅದನ್ನು ಕಾದಂಬರಿ ಎನ್ನದೇ ‘ಹೇಳಬೇಕೆಂದರೆ ಅದೊಂದು ಕಾವ್ಯ, ಇನ್ನೂ ಹೇಳಬೇಕೆಂದರೆ ಅದು ಚರಿತ್ರೆಯ ಕಾಲಾನುಕ್ರಮಣಿಕೆ’ ಎನ್ನುತ್ತಾರೆ. ಕಾದಂಬರಿಯಲ್ಲಿ ಬಹುಪಾಲು ತಾತ್ವಿಕ ಚರ್ಚೆಗಳು ಮತ್ತು ಸಂವಾದಗಳಿದ್ದು ಕಾದಂಬರಿಯ ವ್ಯಾಪ್ತಿಗೆ ಸೇರುವಂತಹ ವಿವರ ಪ್ರವರಗಳಿಂದ ಹೊರತಾಗಿದೆ.

ಸ್ಥೂಲವಾಗಿ ‘ಯುದ್ಧ ಮತ್ತು ಶಾಂತಿ’ಯ ಭೂಮಿಕೆಯನ್ನು ಗುರುತಿಸುವುದಾದರೆ ನೆಪೋಲಿಯನ್ ರಶಿಯಾದ ಮೇಲೆ 1812ರಲ್ಲಿ ಮಾಡಿದ ದಾಳಿಯ ಕಥನವದು. ಆದರೆ ಆ ಸನ್ನಿವೇಶದಲ್ಲಿ ಜಮೀನುದಾರನೊಬ್ಬನ ಅಕ್ರಮ ಸಂತಾನದ ಫಲವಾದ ಪಿಯರೆ ಬೆಜುಕೋವ್ ತನ್ನ ಸ್ವಾಮಿತ್ವಕ್ಕಾಗಿ ಹೋರಾಡುತ್ತಾ ತನ್ನ ತಾತ್ವಿಕ ಸಾರ್ಥಕತೆಗಾಗಿ ಹೆಣಗಾಡುವ ಕಥೆ ಇದಾಗಿದೆ. ಹಾಗಂತ ಒಂದು ವ್ಯಕ್ತಿಯ ಸುತ್ತಲಿನ ಕತೆಯಲ್ಲವಿದು. ನೂರಾರು ಪಾತ್ರಗಳನ್ನು ಹೊಂದಿರುವ ಈ ಕಥನದಲ್ಲಿ ಯುದ್ಧ, ಶಾಂತಿ, ಮುದಿತನ, ಯೌವನ, ಸಾವು, ಮದುವೆ, ಭಿನ್ನಸ್ತರಗಳ ಬದುಕುಗಳನ್ನೆಲ್ಲಾ ಚರ್ಚಿಸುತ್ತಾ ಹೋಗುವುದರಿಂದ, ರಶಿಯಾದ ಸಾಮಾಜಿಕ ಪ್ರಭಾವಗಳು ವಿವಿಧ ವರ್ಗ ಮತ್ತು ಕ್ಷೇತ್ರಗಳ ವ್ಯಕ್ತಿಗಳ ಮೇಲೆ ಎಂತೆಂತಹ ಪ್ರಭಾವಗಳನ್ನು ಬೀರಿದ್ದವು ಎಂಬುದರ ಅನಾವರಣವಾಗುತ್ತದೆ. ಎಲ್ಲದಕ್ಕಿಂತ ಮುಖ್ಯವಾಗಿ ವಿಷಯಗಳನ್ನು ನಿಷ್ಟುರವಾಗಿ, ಪ್ರಾಮಾಣಿಕವಾಗಿ ಮತ್ತು ಪಕ್ಷಪಾತರಹಿತವಾಗಿ ನೋಡುವುದು.

ಈ ಕಾದಂಬರಿಯ ಸೌಂದರ್ಯವೇ ಅದು. ವಸ್ತುವಿಷಯಗಳನ್ನು ಯಥಾಸ್ಥಿತಿಯಲ್ಲಿ ಸಾಕ್ಷೀಕರಿಸುವುದು. ಆದರೆ ಯಥಾಸ್ಥಿತಿವಾದವನ್ನು ಖಂಡಿಸುವುದು. ಅಥವಾ ಪುರೋಗಾಮಿತನವನ್ನು ಬಯಸುವುದು. ರಾಜಕುಮಾರ ಆಂಡ್ರೀ ಬೊಲ್ಕೊನ್ಸ್ಕಿ ತನ್ನ ಕುಟುಂಬವನ್ನು ಬಿಟ್ಟು ನೆಪೋಲಿಯನ್ ವಿರುದ್ಧವಾಗಿ ಯುದ್ಧಕ್ಕಾಗಿ ತೆರಳುವನು. ಅವನ ಮತ್ತು ನಟಾಶ ರೊಸ್ತೋವ್, ಕುಲೀನ ಮನೆತನದ ಸುಂದರವಾದ ಹುಡುಗಿಯ ನಡುವಿನ ಪ್ರಸಂಗಗಳು, ವ್ಯಕ್ತಿಗತವಾದ ಸೆಳೆತಗಳು, ಕುಟುಂಬದ ಘನತೆ ಮತ್ತು ಸಾಂದರ್ಭಿಕ ಅನಿವಾರ್ಯತೆಗಳ ತಾಕಲಾಟಗಳು ಅನಾವರಣಗೊಳ್ಳುತ್ತಾ ಹೋಗುತ್ತವೆ. ಅವಳಿಗೆ ಪ್ರೇಮ, ಕಾಮ, ವ್ಯಾಮೋಹ ಎಲ್ಲವೂ ಒಂದೇ ಆಗಿದ್ದು ಎಲ್ಲದರಿಂದ ಹೊರತಾಗುವಂತಹ ಸ್ಥಿತಿಯೂ ಕೂಡಾ ಒಂದು ಪ್ರತಿಮಾ ಸಂದೇಶವೇ ಆಗಿದೆ.

ರಾಜಕೀಯ ಸಂಘರ್ಷದ ಕಾರಣಕ್ಕೆ ಯುದ್ಧವೆಂಬುದು ನಡೆದರೂ ಅದು ಅಷ್ಟಕ್ಕೇ ಸೀಮಿತಗೊಳ್ಳುವುದಿಲ್ಲ. ರೈತರು, ಕುಲೀನರು, ನಾಗರಿಕರು, ಸೈನಿಕರು ಎಲ್ಲರೂ ಸಮಸ್ಯೆಗಳನ್ನು ಅನುಭವಿಸುವತ್ತಾರೆ. ಅವರ ಕಾಲಘಟ್ಟದಲ್ಲಿ ಮತ್ತು ಗತಿಸಿದ ಚರಿತ್ರೆಯಲ್ಲಿಯೇ ಎದುರಿಸದಂತಹ ಸಂಕಟಗಳಿಂದ ಬಳಲಬೇಕು. ಅದೇ ಯುದ್ಧ ಮತ್ತು ಶಾಂತಿಯಲ್ಲಿಯೂ ಆಗುವುದು. ಟಾಲ್ಸ್ಟಾಯ್ ಈ ಹಿನ್ನೆಲೆಗಳ ಎಲ್ಲಾ ಪ್ರತಿನಿಧಿಗಳನ್ನು ಪಾತ್ರಗಳನ್ನಾಗಿಸಿ ಮಾನುಷವಾಗಿ ಚಿತ್ರಿಸುತ್ತಾಹೋಗುತ್ತಾರೆ. ಮನುಷ್ಯ ಹೃದಯದ ಸಂವೇದನೆಯುಳ್ಳವರಿಗೆಲ್ಲಾ ಸ್ಪಂದಿಸುವ ದುಃಖ ದುಮ್ಮಾನಗಳು – ಭಾವುಕತೆಗೂ ಮತ್ತು ತಾತ್ವಿಕತೆಗೂ ಭಿನ್ನಬೇಧಗಳನ್ನು ಕಾಣಲಾಗದು.

ಟಾಲ್ಸ್‌ಟಾಯ್ ಅವರ ಕಾಲಘಟ್ಟಕ್ಕೆ 60 ವರ್ಷಗಳ ಮುನ್ನದ ಕತೆಯ ಭೂಮಿಕೆಯಾದರೂ ಅವರಲ್ಲಿ ಫ್ರಾನ್ಸ್ ಮಾಡಿದ ಯುದ್ಧದ ಛಾಯೆ ಪೂರ್ತಿ ಕರಗಿಹೋಗಿರಲಿಲ್ಲ. ಯುದ್ಧವೇ ಹಾಗೆ. ಯಾವುದೇ ಕಾರಣದಿಂದ ಅದು ನಡೆದರೂ ಸಾಮಾಜಿಕ ಮತ್ತು ರಾಜತಾಂತ್ರಿಕ ವ್ಯವಸ್ಥೆ ಹದಗೆಡುತ್ತದೆ. ಜನತೆಗಾಗಿಯೇ ಆ ವ್ಯವಸ್ಥೆ ಇರುವುದಾದರೂ, ಅದಕ್ಕೆ ಬೀಳುವ ಏಟಿನಿಂದ ಉಂಟಾಗುವ ಅವ್ಯವಸ್ಥೆಯಿಂದ ಯಾವುದೇ ತಪ್ಪನ್ನು ಮಾಡಿರದ ಜನರು ಶಿಕ್ಷೆ ಅನುಭವಿಸುತ್ತಾರೆ. ತಮ್ಮ ಹಿತರಕ್ಷಣೆಗಾಗಿ ವ್ಯವಸ್ಥೆ ಎಂದು ನಂಬಿರುವ ಜನರು ಎದುರುನೋಡದ ತೊಂದರೆಗಳಿಗೆ ಎದೆಯೊಡ್ಡಬೇಕಾಗುತ್ತದೆ. ಶಿಕ್ಷಣದ ಸಮಸ್ಯೆ, ಉದ್ಯೋಗದಿಂದಲೇ ಅನ್ನವನ್ನು ಗಳಿಸಿಕೊಳ್ಳುವರ ಸಮಸ್ಯೆ, ವೈದ್ಯಕೀಯ ಸೌಲಭ್ಯಗಳಲ್ಲಿ ವ್ಯತ್ಯಯವುಂಟಾಗುವ ಸಮಸ್ಯೆ, ಗಮನವು ಯುದ್ಧದ ಕಡೆ ಹರಿಯುವುದರಿಂದ ಆಂತರಿಕವಾಗಿ ಸಡಿಲವಾಗುವ ಭದ್ರತಾ ವ್ಯವಸ್ಥೆ; ಹೀಗೆ ಅನೇಕಾನೇಕ ಸಮಸ್ಯೆಗಳು ಯುದ್ಧದ ಕಾರಣಗಳಿಂದಾಗುತ್ತವೆ.

ಯುದ್ಧವೆಂಬುದು ರೋಮಾಂಚನ. ಅದೊಂದು ಉನ್ಮತ್ತವಾದ ಭ್ರಾಮಕವಾದ ಆನಂದ. ಅದು ಕುಲೀನರ, ರಾಜಕಾರಣದ ಮತ್ತು ಆರ್ಥಿಕತೆಯ ಉತ್ತುಂಗದಲ್ಲಿರುವವರು ಬಲಿಪಶುಗಳನ್ನಾಗಿಸುವವರಿಗೆ ಮಾತ್ರವೇ ಬೇಕು. ದುಡಿಯುವವರಿಗಲ್ಲ, ಶ್ರಮಿಕರಿಗಲ್ಲ, ಮನೆಯಲ್ಲಿ ಮಕ್ಕಳನ್ನು ಸಲಹುವ ಮತ್ತು ಕುಟುಂಬವನ್ನು ನಿರ್ವಹಣೆ ಮಾಡುವ ಮಹಿಳೆಯರಿಗಲ್ಲ. ಆದರೆ ಇವರೆಲ್ಲರ ಸಮೂಹದ ಪ್ರತಿನಿಧಿಯಂತಿರುವ ರಾಜಕಾರಣ ವ್ಯವಸ್ಥೆಯನ್ನು ಯುದ್ಧಕ್ಕೆಳೆಯುವುದು ಮತ್ತು ಯುದ್ಧವನ್ನು ಎದುರಿಸುವಂತೆ ಮಾಡುವುದು, ಏನೇ ಆದರೂ ಯುದ್ಧದ ರೋಮಾಂಚನ ಒಲ್ಲದ, ಬದುಕಿನ ಉಸುರಿಗೆ ಹಾತೊರೆಯುವವರ ನರಳಾಟಕ್ಕೆ ಕಾರಣವಾಗುತ್ತದೆ.

‘ಯುದ್ಧ ಮತ್ತು ಶಾಂತಿಯ’ಲ್ಲಿ ಅನೇಕ ಕತೆಗಳಿವೆ, ಅನೇಕ ಬದುಕುಗಳಿವೆ. ನಾಯಕ ಎಂದೋ, ನಾಯಕಿ ಎಂದೋ ಯಾರೂ ಇಲ್ಲ. ಸಿದ್ಧಸೂತ್ರದ ನಾಯಕ ಮತ್ತು ನಾಯಕಿಯ ಪಾತ್ರವನ್ನು ನಿರೀಕ್ಷಿಸುವವರಿಗೆ ಯಾರೂ ಸಿಗುವುದಿಲ್ಲ. ಹಾಗೆಂದು ಇದು ಐತಿಹಾಸಿಕ ಕಾದಂಬರಿಯೂ ಅಲ್ಲ. ಕಲಾವಿದನಾಗಿ ಟಾಲ್ಸ್‌ಟಾಯ್ ಒಮ್ಮೆ ಕಂಡರೆ, ಮತ್ತೊಮ್ಮೆ ಬೋಧನೆಗಳನ್ನು ಮಾಡುವ ಋಷಿಯಾಗಿ ಬದಲಾಗುತ್ತಾರೆ. ಮತ್ತೊಮ್ಮೆ ಕ್ರಾಂತಿಕಾರಿಯಾಗಿ ವ್ಯವಸ್ಥೆಯೊಳಗಿನ ತಿದಿಗಳಿಗೆ ಕೆರಳುತ್ತಾರೆ.

ಮನುಷ್ಯನ ತಿಕ್ಕಲುತನದ ಉನ್ಮತ್ತತೆಗೆ ಶಾಂತಿಯ ಅವಧಿಯೂ ಕೂಡಾ ಯುದ್ಧದ ಸಿದ್ಧತೆಯೇ ಆಗಿರುತ್ತದೆ. ಯುದ್ಧಾಸ್ತ್ರಗಳು ಹೇರಳವಾಗಿ ವ್ಯಾಪಾರದ ಸರಕಾದ ಮೇಲೆ, ಹೂಡಿದ ಬಂಡವಾಳಕ್ಕೆ ಲಾಭ ತರಲು ಯುದ್ಧಗಳನ್ನು ಒಲ್ಲೆ ಒಲ್ಲೆ ಎನ್ನುತ್ತಲೇ ಕಾರಣಗಳನ್ನು ಸೃಷ್ಟಿಸುತ್ತಾರೆ ಬಲಿಷ್ಟ ರಾಷ್ಟ್ರದ ಬಂಡವಾಳದ ಕೈಗಳು.

ಸುಮಾರು 1225 ಪುಟಗಳನ್ನು ಹೊಂದಿರುವ ‘ಯುದ್ಧ ಮತ್ತು ಶಾಂತಿ’ಯ ಕಾದಂಬರಿಯನ್ನು ಪರಿಚಯಿಸಲು ಸಾಧ್ಯವಾಗದ ಈ ಲೇಖನ ಅದು ಯುದ್ಧದ ಬಗ್ಗೆ ಹೊಂದಿರುವ ಧೋರಣೆಯ ಒಂದು ಮುಖವನ್ನು ಮಾತ್ರ ಧ್ವನಿಸುತ್ತದೆ. ಆದರೆ ಅದನ್ನು ಓದುವಾಗ ಯುದ್ಧದ ನೆರಳಿನಲ್ಲಿರುವ ಎಲ್ಲಾ ದೇಶಗಳೂ ನಮ್ಮ ಕಣ್ಪಟಲದ ಮುಂದೆ ಹಾದುಹೋಗುವಂತೆ ಮಾಡುವುದು ಈ ಕಾದಂಬರಿಯ ಶಕ್ತಿ.


ಇದನ್ನು ಓದಿ: ವಿಶೇಷ ಲೇಖನ: ಹೊಸ ತಲೆಮಾರಿಗೆ ಗೊತ್ತಿಲ್ಲದ ಡಾ.ಎಚ್ಚೆನ್ ಅವರ ‘ಹೋರಾಟದ ಹಾದಿ’ಯ ಕುರಿತು ಡಾ.ಸಿಎನ್ಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....