Homeಅಂಕಣಗಳುಪುಟಕ್ಕಿಟ್ಟ ಪುಟಗಳುಪುಟಕ್ಕಿಟ್ಟ ಪುಟಗಳು: ಲಿಯೋ ಟಾಲ್ಸ್‌ಟಾಯ್‌ರವರ ಯುದ್ಧ ಮತ್ತು ಶಾಂತಿ

ಪುಟಕ್ಕಿಟ್ಟ ಪುಟಗಳು: ಲಿಯೋ ಟಾಲ್ಸ್‌ಟಾಯ್‌ರವರ ಯುದ್ಧ ಮತ್ತು ಶಾಂತಿ

ಯುದ್ಧಾಸ್ತ್ರಗಳು ಹೇರಳವಾಗಿ ವ್ಯಾಪಾರದ ಸರಕಾದ ಮೇಲೆ, ಹೂಡಿದ ಬಂಡವಾಳಕ್ಕೆ ಲಾಭ ತರಲು ಯುದ್ಧಗಳನ್ನು ಒಲ್ಲೆ ಒಲ್ಲೆ ಎನ್ನುತ್ತಲೇ ಕಾರಣಗಳನ್ನು ಸೃಷ್ಟಿಸುತ್ತಾರೆ ಬಲಿಷ್ಟ ರಾಷ್ಟ್ರದ ಬಂಡವಾಳದ ಕೈಗಳು.

- Advertisement -
- Advertisement -

ಲಿಯೋ ಟಾಲ್ಸ್‌ಟಾಯ್ ಅವರ ಕಾದಂಬರಿ ‘ವಾರ್ ಅಂಡ್ ಪೀಸ್’ ನಾನಾ ಕಾರಣಗಳಿಂದ ಬಹು ಪ್ರಖ್ಯಾತವಾದದ್ದು. ಆದರೆ ಟಾಲ್ಸ್‌ಟಾಯ್ ಅದನ್ನು ಕಾದಂಬರಿ ಎನ್ನದೇ ‘ಹೇಳಬೇಕೆಂದರೆ ಅದೊಂದು ಕಾವ್ಯ, ಇನ್ನೂ ಹೇಳಬೇಕೆಂದರೆ ಅದು ಚರಿತ್ರೆಯ ಕಾಲಾನುಕ್ರಮಣಿಕೆ’ ಎನ್ನುತ್ತಾರೆ. ಕಾದಂಬರಿಯಲ್ಲಿ ಬಹುಪಾಲು ತಾತ್ವಿಕ ಚರ್ಚೆಗಳು ಮತ್ತು ಸಂವಾದಗಳಿದ್ದು ಕಾದಂಬರಿಯ ವ್ಯಾಪ್ತಿಗೆ ಸೇರುವಂತಹ ವಿವರ ಪ್ರವರಗಳಿಂದ ಹೊರತಾಗಿದೆ.

ಸ್ಥೂಲವಾಗಿ ‘ಯುದ್ಧ ಮತ್ತು ಶಾಂತಿ’ಯ ಭೂಮಿಕೆಯನ್ನು ಗುರುತಿಸುವುದಾದರೆ ನೆಪೋಲಿಯನ್ ರಶಿಯಾದ ಮೇಲೆ 1812ರಲ್ಲಿ ಮಾಡಿದ ದಾಳಿಯ ಕಥನವದು. ಆದರೆ ಆ ಸನ್ನಿವೇಶದಲ್ಲಿ ಜಮೀನುದಾರನೊಬ್ಬನ ಅಕ್ರಮ ಸಂತಾನದ ಫಲವಾದ ಪಿಯರೆ ಬೆಜುಕೋವ್ ತನ್ನ ಸ್ವಾಮಿತ್ವಕ್ಕಾಗಿ ಹೋರಾಡುತ್ತಾ ತನ್ನ ತಾತ್ವಿಕ ಸಾರ್ಥಕತೆಗಾಗಿ ಹೆಣಗಾಡುವ ಕಥೆ ಇದಾಗಿದೆ. ಹಾಗಂತ ಒಂದು ವ್ಯಕ್ತಿಯ ಸುತ್ತಲಿನ ಕತೆಯಲ್ಲವಿದು. ನೂರಾರು ಪಾತ್ರಗಳನ್ನು ಹೊಂದಿರುವ ಈ ಕಥನದಲ್ಲಿ ಯುದ್ಧ, ಶಾಂತಿ, ಮುದಿತನ, ಯೌವನ, ಸಾವು, ಮದುವೆ, ಭಿನ್ನಸ್ತರಗಳ ಬದುಕುಗಳನ್ನೆಲ್ಲಾ ಚರ್ಚಿಸುತ್ತಾ ಹೋಗುವುದರಿಂದ, ರಶಿಯಾದ ಸಾಮಾಜಿಕ ಪ್ರಭಾವಗಳು ವಿವಿಧ ವರ್ಗ ಮತ್ತು ಕ್ಷೇತ್ರಗಳ ವ್ಯಕ್ತಿಗಳ ಮೇಲೆ ಎಂತೆಂತಹ ಪ್ರಭಾವಗಳನ್ನು ಬೀರಿದ್ದವು ಎಂಬುದರ ಅನಾವರಣವಾಗುತ್ತದೆ. ಎಲ್ಲದಕ್ಕಿಂತ ಮುಖ್ಯವಾಗಿ ವಿಷಯಗಳನ್ನು ನಿಷ್ಟುರವಾಗಿ, ಪ್ರಾಮಾಣಿಕವಾಗಿ ಮತ್ತು ಪಕ್ಷಪಾತರಹಿತವಾಗಿ ನೋಡುವುದು.

ಈ ಕಾದಂಬರಿಯ ಸೌಂದರ್ಯವೇ ಅದು. ವಸ್ತುವಿಷಯಗಳನ್ನು ಯಥಾಸ್ಥಿತಿಯಲ್ಲಿ ಸಾಕ್ಷೀಕರಿಸುವುದು. ಆದರೆ ಯಥಾಸ್ಥಿತಿವಾದವನ್ನು ಖಂಡಿಸುವುದು. ಅಥವಾ ಪುರೋಗಾಮಿತನವನ್ನು ಬಯಸುವುದು. ರಾಜಕುಮಾರ ಆಂಡ್ರೀ ಬೊಲ್ಕೊನ್ಸ್ಕಿ ತನ್ನ ಕುಟುಂಬವನ್ನು ಬಿಟ್ಟು ನೆಪೋಲಿಯನ್ ವಿರುದ್ಧವಾಗಿ ಯುದ್ಧಕ್ಕಾಗಿ ತೆರಳುವನು. ಅವನ ಮತ್ತು ನಟಾಶ ರೊಸ್ತೋವ್, ಕುಲೀನ ಮನೆತನದ ಸುಂದರವಾದ ಹುಡುಗಿಯ ನಡುವಿನ ಪ್ರಸಂಗಗಳು, ವ್ಯಕ್ತಿಗತವಾದ ಸೆಳೆತಗಳು, ಕುಟುಂಬದ ಘನತೆ ಮತ್ತು ಸಾಂದರ್ಭಿಕ ಅನಿವಾರ್ಯತೆಗಳ ತಾಕಲಾಟಗಳು ಅನಾವರಣಗೊಳ್ಳುತ್ತಾ ಹೋಗುತ್ತವೆ. ಅವಳಿಗೆ ಪ್ರೇಮ, ಕಾಮ, ವ್ಯಾಮೋಹ ಎಲ್ಲವೂ ಒಂದೇ ಆಗಿದ್ದು ಎಲ್ಲದರಿಂದ ಹೊರತಾಗುವಂತಹ ಸ್ಥಿತಿಯೂ ಕೂಡಾ ಒಂದು ಪ್ರತಿಮಾ ಸಂದೇಶವೇ ಆಗಿದೆ.

ರಾಜಕೀಯ ಸಂಘರ್ಷದ ಕಾರಣಕ್ಕೆ ಯುದ್ಧವೆಂಬುದು ನಡೆದರೂ ಅದು ಅಷ್ಟಕ್ಕೇ ಸೀಮಿತಗೊಳ್ಳುವುದಿಲ್ಲ. ರೈತರು, ಕುಲೀನರು, ನಾಗರಿಕರು, ಸೈನಿಕರು ಎಲ್ಲರೂ ಸಮಸ್ಯೆಗಳನ್ನು ಅನುಭವಿಸುವತ್ತಾರೆ. ಅವರ ಕಾಲಘಟ್ಟದಲ್ಲಿ ಮತ್ತು ಗತಿಸಿದ ಚರಿತ್ರೆಯಲ್ಲಿಯೇ ಎದುರಿಸದಂತಹ ಸಂಕಟಗಳಿಂದ ಬಳಲಬೇಕು. ಅದೇ ಯುದ್ಧ ಮತ್ತು ಶಾಂತಿಯಲ್ಲಿಯೂ ಆಗುವುದು. ಟಾಲ್ಸ್ಟಾಯ್ ಈ ಹಿನ್ನೆಲೆಗಳ ಎಲ್ಲಾ ಪ್ರತಿನಿಧಿಗಳನ್ನು ಪಾತ್ರಗಳನ್ನಾಗಿಸಿ ಮಾನುಷವಾಗಿ ಚಿತ್ರಿಸುತ್ತಾಹೋಗುತ್ತಾರೆ. ಮನುಷ್ಯ ಹೃದಯದ ಸಂವೇದನೆಯುಳ್ಳವರಿಗೆಲ್ಲಾ ಸ್ಪಂದಿಸುವ ದುಃಖ ದುಮ್ಮಾನಗಳು – ಭಾವುಕತೆಗೂ ಮತ್ತು ತಾತ್ವಿಕತೆಗೂ ಭಿನ್ನಬೇಧಗಳನ್ನು ಕಾಣಲಾಗದು.

ಟಾಲ್ಸ್‌ಟಾಯ್ ಅವರ ಕಾಲಘಟ್ಟಕ್ಕೆ 60 ವರ್ಷಗಳ ಮುನ್ನದ ಕತೆಯ ಭೂಮಿಕೆಯಾದರೂ ಅವರಲ್ಲಿ ಫ್ರಾನ್ಸ್ ಮಾಡಿದ ಯುದ್ಧದ ಛಾಯೆ ಪೂರ್ತಿ ಕರಗಿಹೋಗಿರಲಿಲ್ಲ. ಯುದ್ಧವೇ ಹಾಗೆ. ಯಾವುದೇ ಕಾರಣದಿಂದ ಅದು ನಡೆದರೂ ಸಾಮಾಜಿಕ ಮತ್ತು ರಾಜತಾಂತ್ರಿಕ ವ್ಯವಸ್ಥೆ ಹದಗೆಡುತ್ತದೆ. ಜನತೆಗಾಗಿಯೇ ಆ ವ್ಯವಸ್ಥೆ ಇರುವುದಾದರೂ, ಅದಕ್ಕೆ ಬೀಳುವ ಏಟಿನಿಂದ ಉಂಟಾಗುವ ಅವ್ಯವಸ್ಥೆಯಿಂದ ಯಾವುದೇ ತಪ್ಪನ್ನು ಮಾಡಿರದ ಜನರು ಶಿಕ್ಷೆ ಅನುಭವಿಸುತ್ತಾರೆ. ತಮ್ಮ ಹಿತರಕ್ಷಣೆಗಾಗಿ ವ್ಯವಸ್ಥೆ ಎಂದು ನಂಬಿರುವ ಜನರು ಎದುರುನೋಡದ ತೊಂದರೆಗಳಿಗೆ ಎದೆಯೊಡ್ಡಬೇಕಾಗುತ್ತದೆ. ಶಿಕ್ಷಣದ ಸಮಸ್ಯೆ, ಉದ್ಯೋಗದಿಂದಲೇ ಅನ್ನವನ್ನು ಗಳಿಸಿಕೊಳ್ಳುವರ ಸಮಸ್ಯೆ, ವೈದ್ಯಕೀಯ ಸೌಲಭ್ಯಗಳಲ್ಲಿ ವ್ಯತ್ಯಯವುಂಟಾಗುವ ಸಮಸ್ಯೆ, ಗಮನವು ಯುದ್ಧದ ಕಡೆ ಹರಿಯುವುದರಿಂದ ಆಂತರಿಕವಾಗಿ ಸಡಿಲವಾಗುವ ಭದ್ರತಾ ವ್ಯವಸ್ಥೆ; ಹೀಗೆ ಅನೇಕಾನೇಕ ಸಮಸ್ಯೆಗಳು ಯುದ್ಧದ ಕಾರಣಗಳಿಂದಾಗುತ್ತವೆ.

ಯುದ್ಧವೆಂಬುದು ರೋಮಾಂಚನ. ಅದೊಂದು ಉನ್ಮತ್ತವಾದ ಭ್ರಾಮಕವಾದ ಆನಂದ. ಅದು ಕುಲೀನರ, ರಾಜಕಾರಣದ ಮತ್ತು ಆರ್ಥಿಕತೆಯ ಉತ್ತುಂಗದಲ್ಲಿರುವವರು ಬಲಿಪಶುಗಳನ್ನಾಗಿಸುವವರಿಗೆ ಮಾತ್ರವೇ ಬೇಕು. ದುಡಿಯುವವರಿಗಲ್ಲ, ಶ್ರಮಿಕರಿಗಲ್ಲ, ಮನೆಯಲ್ಲಿ ಮಕ್ಕಳನ್ನು ಸಲಹುವ ಮತ್ತು ಕುಟುಂಬವನ್ನು ನಿರ್ವಹಣೆ ಮಾಡುವ ಮಹಿಳೆಯರಿಗಲ್ಲ. ಆದರೆ ಇವರೆಲ್ಲರ ಸಮೂಹದ ಪ್ರತಿನಿಧಿಯಂತಿರುವ ರಾಜಕಾರಣ ವ್ಯವಸ್ಥೆಯನ್ನು ಯುದ್ಧಕ್ಕೆಳೆಯುವುದು ಮತ್ತು ಯುದ್ಧವನ್ನು ಎದುರಿಸುವಂತೆ ಮಾಡುವುದು, ಏನೇ ಆದರೂ ಯುದ್ಧದ ರೋಮಾಂಚನ ಒಲ್ಲದ, ಬದುಕಿನ ಉಸುರಿಗೆ ಹಾತೊರೆಯುವವರ ನರಳಾಟಕ್ಕೆ ಕಾರಣವಾಗುತ್ತದೆ.

‘ಯುದ್ಧ ಮತ್ತು ಶಾಂತಿಯ’ಲ್ಲಿ ಅನೇಕ ಕತೆಗಳಿವೆ, ಅನೇಕ ಬದುಕುಗಳಿವೆ. ನಾಯಕ ಎಂದೋ, ನಾಯಕಿ ಎಂದೋ ಯಾರೂ ಇಲ್ಲ. ಸಿದ್ಧಸೂತ್ರದ ನಾಯಕ ಮತ್ತು ನಾಯಕಿಯ ಪಾತ್ರವನ್ನು ನಿರೀಕ್ಷಿಸುವವರಿಗೆ ಯಾರೂ ಸಿಗುವುದಿಲ್ಲ. ಹಾಗೆಂದು ಇದು ಐತಿಹಾಸಿಕ ಕಾದಂಬರಿಯೂ ಅಲ್ಲ. ಕಲಾವಿದನಾಗಿ ಟಾಲ್ಸ್‌ಟಾಯ್ ಒಮ್ಮೆ ಕಂಡರೆ, ಮತ್ತೊಮ್ಮೆ ಬೋಧನೆಗಳನ್ನು ಮಾಡುವ ಋಷಿಯಾಗಿ ಬದಲಾಗುತ್ತಾರೆ. ಮತ್ತೊಮ್ಮೆ ಕ್ರಾಂತಿಕಾರಿಯಾಗಿ ವ್ಯವಸ್ಥೆಯೊಳಗಿನ ತಿದಿಗಳಿಗೆ ಕೆರಳುತ್ತಾರೆ.

ಮನುಷ್ಯನ ತಿಕ್ಕಲುತನದ ಉನ್ಮತ್ತತೆಗೆ ಶಾಂತಿಯ ಅವಧಿಯೂ ಕೂಡಾ ಯುದ್ಧದ ಸಿದ್ಧತೆಯೇ ಆಗಿರುತ್ತದೆ. ಯುದ್ಧಾಸ್ತ್ರಗಳು ಹೇರಳವಾಗಿ ವ್ಯಾಪಾರದ ಸರಕಾದ ಮೇಲೆ, ಹೂಡಿದ ಬಂಡವಾಳಕ್ಕೆ ಲಾಭ ತರಲು ಯುದ್ಧಗಳನ್ನು ಒಲ್ಲೆ ಒಲ್ಲೆ ಎನ್ನುತ್ತಲೇ ಕಾರಣಗಳನ್ನು ಸೃಷ್ಟಿಸುತ್ತಾರೆ ಬಲಿಷ್ಟ ರಾಷ್ಟ್ರದ ಬಂಡವಾಳದ ಕೈಗಳು.

ಸುಮಾರು 1225 ಪುಟಗಳನ್ನು ಹೊಂದಿರುವ ‘ಯುದ್ಧ ಮತ್ತು ಶಾಂತಿ’ಯ ಕಾದಂಬರಿಯನ್ನು ಪರಿಚಯಿಸಲು ಸಾಧ್ಯವಾಗದ ಈ ಲೇಖನ ಅದು ಯುದ್ಧದ ಬಗ್ಗೆ ಹೊಂದಿರುವ ಧೋರಣೆಯ ಒಂದು ಮುಖವನ್ನು ಮಾತ್ರ ಧ್ವನಿಸುತ್ತದೆ. ಆದರೆ ಅದನ್ನು ಓದುವಾಗ ಯುದ್ಧದ ನೆರಳಿನಲ್ಲಿರುವ ಎಲ್ಲಾ ದೇಶಗಳೂ ನಮ್ಮ ಕಣ್ಪಟಲದ ಮುಂದೆ ಹಾದುಹೋಗುವಂತೆ ಮಾಡುವುದು ಈ ಕಾದಂಬರಿಯ ಶಕ್ತಿ.


ಇದನ್ನು ಓದಿ: ವಿಶೇಷ ಲೇಖನ: ಹೊಸ ತಲೆಮಾರಿಗೆ ಗೊತ್ತಿಲ್ಲದ ಡಾ.ಎಚ್ಚೆನ್ ಅವರ ‘ಹೋರಾಟದ ಹಾದಿ’ಯ ಕುರಿತು ಡಾ.ಸಿಎನ್ಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...