Homeಅಂತರಾಷ್ಟ್ರೀಯಇರಾನ್- ಅಮೆರಿಕ ಯುದ್ಧದಲ್ಲಿ ಅಮೆರಿಕದ ಕಾಲಾಳು ಆಗಲು ಹೊರಟ ಭಾರತ

ಇರಾನ್- ಅಮೆರಿಕ ಯುದ್ಧದಲ್ಲಿ ಅಮೆರಿಕದ ಕಾಲಾಳು ಆಗಲು ಹೊರಟ ಭಾರತ

ಭಾರತವು ಜೂನ್ 21ರಂದು ತನ್ನ ಯುದ್ಧ ನೌಕೆಗಳಾದ ಚೆನ್ನೈ ಮತ್ತು ಸುನೈನಾವನ್ನು ಪರ್ಶಿಯನ್ ಕೊಲ್ಲಿಗೆ ಕಳುಹಿಸಲು ನಿರ್ಧರಿಸಿದೆ. ಈ ಕಾರ್ಯಾಚರಣೆಗೆ ‘ಆಪರೇಶನ್ ಸಂಕಲ್ಪ್’ ಎಂದು ಹೆಸರಿಡಲಾಗಿದೆ

- Advertisement -
- Advertisement -

| ಭರತ್ ಹೆಬ್ಬಾಳ್ |

ದಶಕಗಳಿಂದ ಒಂದಲ್ಲಾ ಒಂದು ರೀತಿಯ ನಿರಂತರ ಯುದ್ಧಗಳಿಂದ ತತ್ತರಿಸುತ್ತಿರುವ ಮಧ್ಯಪ್ರಾಚ್ಯ ಏಶಿಯಾದಲ್ಲಿ ಮತ್ತೊಮ್ಮೆ ಯುದ್ದದ ಕಾರ್ಮೋಡಗಳು ಆವರಿಸುತ್ತಿವೆ. 2015ರ ಜುಲೈ ತಿಂಗಳಲ್ಲಿ ಆರು ರಾಷ್ಟ್ರಗಳ ಸಂಧಾನ ಮಾತುಕತೆಗಳ ನಂತರ ಅಸ್ತಿತ್ವಕ್ಕೆ ಬಂದಿದ್ದ Joint Comprehensive Plan of Action (JCPOA) ಒಪ್ಪಂದವನ್ನು ಮೇ 2018ರಲ್ಲಿ ಟ್ರಂಪ್ ಆಡಳಿತ ಏಕಪಕ್ಷೀಯವಾಗಿ ಮುರಿದು ಹಾಕಿತ್ತು. ಇದರ ನಂತರದ ಮಾತುಕತೆಗಳಲ್ಲಿ ಇರಾನಿನ ಸಂಪೂರ್ಣ ಶರಣಾಗತಿಯನ್ನು ಬಯಸುತ್ತಿರುವ ಅಮೆರಿಕ, ಕಳೆದೆರಡು ತಿಂಗಳುಗಳಿಂದ ಪರ್ಶಿಯನ್ ಕೊಲ್ಲಿಯಲ್ಲಿ ನಡೆಯುತ್ತಿರುವ ಪಾಶ್ಚಾತ್ಯ ಕಚ್ಚಾ ತೈಲ ಟ್ಯಾಂಕರ್‍ಗಳ ಹಡಗುಗಳ ಮೇಲಿನ ಅಜ್ಞಾತ ದಾಳಿಗಳನ್ನು ಇರಾನಿನ ಮೇಲೆ ಕಟ್ಟಿತ್ತು.

ಅಮೆರಿಕ ಈ ರೀತಿಯ ತಂತ್ರಗಳನ್ನು ಇತಿಹಾಸದಲ್ಲಿ ಬಹಳಷ್ಟು ಮಾಡಿದೆ. ಉದಾಹರಣೆಗೆ ವಿಯೆಟ್ನಾಮ್ ಯುದ್ಧಕ್ಕೆ ನೆಪ ಮಾಡಿಕೊಂಡಿದ್ದು, ಇದೇ ರೀತಿಯ ತನ್ನ ಹಡಗುಗಳ ಮೇಲೆ ನಡೆದಿದೆ ಎನ್ನಲಾದ ಅಜ್ಞಾತ ದಾಳಿ (ಟೊಂಕಿನ್ ಕೊಲ್ಲಿಯ ಘಟನೆ). ಈ ದಾಳಿಗಳನ್ನು ಇರಾನ್ ನಿರಾಕರಿಸುತ್ತಲೇ ಬಂದಿದೆ ಮತ್ತು ಇದು ಯುದ್ಧಕ್ಕಾಗಿ ಅಮೆರಿಕ ಮಾಡುತ್ತಿರುವ ಷಡ್ಯಂತ್ರ ಎಂದು ಆರೋಪಿಸಿತ್ತು. ಇದರ ಮುಂದುವರೆದ ಭಾಗವಾಗಿಯೇ ಇರಾನ್, ಜೂನ್ 20ರಂದು ಅಮೆರಿಕಾದ ಮಾನವರಹಿತ ಗೂಢಚಾರಿ ವಿಮಾನವನ್ನು (RQ-4A Global Hawk Drone) ತನ್ನ ಸಯ್ಯದ್-2ಸಿ ಕ್ಷಿಪಣಿ ಉಪಯೋಗಿಸಿ ಹೊಡೆದುರುಳಿಸಿದೆ. ಈಗಾಗಲೇ ಅಮೆರಿಕಾದ ‘ಗರಿಷ್ಠ ಒತ್ತಡ’ ತಂತ್ರಗಾರಿಕೆಯ ಭಾಗವಾದ ತೀವ್ರ ಆರ್ಥಿಕ ನಿಬರ್ಂಧಗಳನ್ನು (ಭಯೋತ್ಪಾದನೆ) ಎದುರಿಸುತ್ತಿರುವ ಇರಾನ್ ಈಗ ‘ಗರಿಷ್ಠ ಪ್ರತಿ-ಒತ್ತಡ’ ಪ್ರದರ್ಶಿಸಲು ಸಜ್ಜಾಗುತ್ತಿದೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ತನ್ನ ವಾಯುಪ್ರದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಡ್ರೋನ್ ಹೊಡೆದು ಉರುಳಿಸಲಾಯಿತು ಎಂದು ಇರಾನ್ ಹೇಳಿಕೆ ಕೊಟ್ಟಿದೆ. ಅಮೆರಿಕ ಇದು ಅಂತರ್ರಾಷ್ಟ್ರೀಯ ನೀರಿಗೆ (International Waters) ಸೇರಿದ ಜಾಗ ಎಂದು ಹೇಳಿಕೆ ಕೊಟ್ಟಿದೆ. ವಾಸ್ತವದಲ್ಲಿ ಆ ಪ್ರದೇಶದಲ್ಲಿ ಅಂತರ್ರಾಷ್ಟ್ರೀಯ ನೀರಿನ ಜಾಗ ಆಗಿರುವುದು ಸಾಧ್ಯವೇ ಇಲ್ಲ. ಪರ್ಶಿಯನ್ ಕೊಲ್ಲಿಯಲ್ಲಿ ಹಾದುಹೋಗಬೇಕಾದರೆ ಅಲ್ಲಿರುವ ಕೊಲ್ಲಿಯ ಅತಿ ಸಣ್ಣ ಜಾಗ ಇರುವುದೇ 39 ಕಿಲೋಮೀಟರ್‍ಗಳ ಉದ್ದಗಲ. ಅದರ ಒಂದು ಭಾಗ ಇರಾನಿನದ್ದು, ಇನ್ನೊಂದು ಭಾಗ ಒಮಾನ್ ರಾಷ್ಟ್ರದ್ದು! ವಿಶ್ವದ 33% ಕಚ್ಚಾ ತೈಲ ಪರ್ಶಿಯನ್ ಕೊಲ್ಲಿಯಿಂದಲೇ ಹಾದುಹೋಗಬೇಕು.

ಈಗಾಗಲೇ ಇರಾನ್ ರಾಷ್ಟ್ರದಿಂದ ಕಚ್ಚಾ ತೈಲ ಆಮದು ನಿಲ್ಲಿಸುವಂತೆ ಎಲ್ಲಾ ದೇಶಗಳಿಗೂ ಅಮೆರಿಕ ಆದೇಶಿಸಿದೆ. ಆದೇಶ ಮೀರಿದರೆ ಆರ್ಥಿಕ ನಿಬರ್ಂಧಗಳನ್ನು ವಿಧಿಸುವುದಾಗಿ ಎಚ್ಚರಿಕೆಯನ್ನು ನೀಡಿದೆ. ತನ್ನನ್ನು ಕಚ್ಚಾ ತೈಲದ ಮಾರುಕಟ್ಟೆಯಿಂದ ನಿಬರ್ಂಧಿಸಿದರೆ ಪರ್ಶಿಯನ್ ಕೊಲ್ಲಿಯಲ್ಲಿ ಬೇರೆಯವರ ಕಚ್ಚಾ ತೈಲ ಹಾದುಹೋಗುವದಕ್ಕೆ ನಾವು ಬಿಡುವುದಿಲ್ಲ ಎಂದು ಇರಾನ್ ಕೂಡ ಎಚ್ಚರಿಸುತ್ತಲೇ ಬಂದಿದೆ. ಘಟನೆಯ ನಂತರ ಇರಾನಿನ ಮೇಜರ್ ಜನರಲ್ ಮೊಹಮ್ಮದ್ ಬಕೇರಿ ‘ಇರಾನ್ ಯಾವುದೇ ದೇಶದೊಂದಿಗೆ ಯುದ್ಧವನ್ನು ಬಯಸುತ್ತಿಲ್ಲ, ಆದರೆ ಇರಾನ್ ಅನ್ನು ರಕ್ಷಿಸಿಕೊಳ್ಳಲು ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ, ಇರಾನ್ ಕೊಲ್ಲಿಯಿಂದ ತೈಲ ರಫ್ತು ಮಾಡುವುದನ್ನು ತಡೆಯಲು ನಿರ್ಧರಿಸಿದರೆ, ಆ ನಿರ್ಣಯವನ್ನು ದೇಶ ಹಾಗೂ ಸಶಸ್ತ್ರ ಪಡೆಗಳು ಪೂರ್ಣವಾಗಿ ಸಾಕಾರಗೊಳಿಸಿ ಸಾರ್ವಜನಿಕವಾಗಿ ಘೋಷಿಸಲಾಗುವುದು’ ಎಂಬ ಹೇಳಿಕೆ ಕೊಟ್ಟಿದ್ದಾರೆ.

ಈ ಘಟನೆಯ ನಂತರ ದೊಡ್ಡಣ್ಣ ಟ್ರಂಪ್ ‘ಇರಾನ್ ಬಹಳ ದೊಡ್ಡ ತಪ್ಪು’ ಮಾಡಿದೆ ಎಂದು ಟ್ವೀಟ್ ಮಾಡಿದ್ದರು. ನಂತರ ಇರಾನಿನ ಮೇಲೆ ದಾಳಿ ಮಾಡಲು ಆದೇಶಿಸಿ, ಆ ಆದೇಶವನ್ನು ಹಿಂಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಆದೇಶ ಹಿಂಪಡೆಯುವುದರ ಹಿಂದೆ ಅಮೆರಿಕಾದ ಚುನಾವಣೆ ಕಾರಣ ಎಂದು ಹೇಳಲಾಗುತ್ತಿದ್ದರೂ, ಪರ್ಶಿಯನ್ ಕೊಲ್ಲಿಯನ್ನು ಇರಾನ್ ಮುಚ್ಚಿದರೆ ಅಮೆರಿಕಾದ ಆರ್ಥಿಕತೆ ಮತ್ತು ವಿಶ್ವದ ಆರ್ಥಿಕತೆ ಕುಸಿಯುವ ಭಯ ಇದರ ಹಿಂದಿರುವ ನಿಜವಾದ ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ. ಈ ಕೊಲ್ಲಿಯ ಮಾರ್ಗ ಮುಚ್ಚಿದರೆ ಪ್ರಪಂಚದ 1.2 ದಶಲಕ್ಷ ಕೋಟಿ ಡರ್ರೈವೇಟಿವ್ಸ್ ಮಾರುಕಟ್ಟೆಯ ವಹಿವಾಟು ಅಂತಃಸ್ಫೋಟಗೊಂಡು ಪ್ರಪಂಚದ ಬ್ಯಾಂಕಿಂಗ್ ವ್ಯವಸ್ಥೆಯೇ ಕುಸಿದು ಬೀಳುತ್ತದೆ ಮತ್ತು ಪ್ರಪಂಚದ 80 ಟ್ರಿಲಿಯನ್ ಜಿಡಿಪಿ ಪ್ರಪಾತಕ್ಕೆ ಕುಸಿದು, ಕಂಡು ಕೇಳರಿಯದ ಆರ್ಥಿಕ ಹಿನ್ನಡೆ ಆಗುತ್ತದೆ ಎಂಬ ಸುಳಿವು ಸಿಕ್ಕ ನಂತರ ದಾಳಿ ನಡೆಸಲುದ್ದೇಶಿಸಿದ್ದ 10 ನಿಮಿಷದ ಮುಂಚೆ ಟ್ರಂಪ್ ತನ್ನ ಆದೇಶವನ್ನು ಹಿಂಪಡೆದುಕೊಂಡಿದ್ದಾರೆ. ಈ ಕೊಲ್ಲಿಯನ್ನು ಮುಚ್ಚಲು ಇರಾನ್ ತನ್ನ ಪಾಶ್ಚಾತ್ಯ ಗಡಿಯ ಉದ್ದಗಲಕ್ಕೂ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಸಿದ್ಧಪಡಿಸಿಕೊಂಡಿದೆ ಮತ್ತು ಸಮಯ ಬಂದರೆ ಕೊಲ್ಲಿಯನ್ನು ಮುಚ್ಚುವುದಾಗಿಯೂ ಎಚ್ಚರಿಕೆ ನೀಡಿದೆ.

ಈ ಪರಿಸ್ಥಿತಿಯಲ್ಲಿ ಅನಾವರಣಗೊಳ್ಳುತ್ತಿರುವ ಬಿಕ್ಕಟ್ಟಿನ ಒಂದು ಅತ್ಯಂತ ಕಳವಳಕಾರಿ ಬೆಳೆವಣಿಗೆಯೆಂದರೆ ಭಾರತದ ನಿಗೂಢ ನಡೆ. ಭಾರತವು ಜೂನ್ 21ರಂದು ತನ್ನ ಯುದ್ಧ ನೌಕೆಗಳಾದ ಚೆನ್ನೈ ಮತ್ತು ಸುನೈನಾವನ್ನು ಪರ್ಶಿಯನ್ ಕೊಲ್ಲಿಗೆ ಕಳುಹಿಸಲು ನಿರ್ಧರಿಸಿದೆ. ಈ ಕಾರ್ಯಾಚರಣೆಗೆ ‘ಆಪರೇಶನ್ ಸಂಕಲ್ಪ್’ ಎಂದು ಹೆಸರಿಡಲಾಗಿದೆ ಹಾಗೂ ಯುದ್ಧ ನೌಕೆಗಳು ಓಮೆನ್ ಭಾಗದ ನೀರಿನಲ್ಲಿ ನಿಯೋಜಿಸಲ್ಪಟ್ಟಿರುತ್ತದೆ ಎಂದು ವಿವರಿಸಲಾಗಿದೆ. ತೀಕ್ಷ್ಣಗೊಳ್ಳುತ್ತಿರುವ ಜಾಗತಿಕ ರಾಜಕೀಯದಲ್ಲಿ ರಶಿಯ, ಸಿರಿಯ, ಚೀನಾ, ಇರಾನ್ ಒಂದು ಕಡೆಯಾದರೆ, ಅಮೆರಿಕ, ಯುರೋಪಿಯನ್ ಯೂನಿಯನ್‍ನ ಕೆಲವು ಮುಖ್ಯ ರಾಷ್ಟ್ರಗಳು, ಬ್ರಿಟನ್, ಇಸ್ರೇಲ್ ಸೌದಿ ಮತ್ತದರ ಹಿಂಬಾಲಕ ಅರಬ್ ರಾಷ್ಟ್ರಗಳು ಇನ್ನೊಂದು ಕಡೆ.

ಪಾಕಿಸ್ತಾನ ರಶಿಯ ಮತ್ತು ಚೀನಾಗೆ ಹತ್ತಿರವಾಗುತ್ತಿದ್ದರೆ, ಭಾರತ ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಒಂದು ವಿಚಿತ್ರ ಡಬಲ್ ಗೇಮ್ ಆಟದಲ್ಲಿ ತೊಡಗಿದೆ. ಹಿಂದಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದ ಈ ದೇಶಗಳ ಮಧ್ಯೆ ಆರ್ಥಿಕ ನಿರ್ಬಂಧಗಳಾಚೆಗೂ ವ್ಯಾಪಾರ ವಹಿವಾಟು ವಿವಿಧ ವಿನಿಮಯಗಳನ್ನು ಬಳಸಿ ನಡೆಸಲಾಗುತ್ತಿತ್ತು. ಆದರೆ ಕಳೆದ ಮೇ ತಿಂಗಳಿನಿಂದ ಇರಾನ್‍ನಿಂದ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿರುವ ಭಾರತವು ಇರಾನಿನ ಕಟು ವೈರಿಗಳಾದ ಇಸ್ರೇಲ್ ಮತ್ತು ಯುದ್ಧಕೋರ ಅಮೆರಿಕ ಜೊತೆಗೂಡಿ ಅಮೆರಿಕ ಕೇಂದ್ರಿತ ಏಕ ಧ್ರುವಿ ಪ್ರಪಂಚದ ದೃಷ್ಟಿಕೋನದಲ್ಲಿ ಏಶಿಯಾ ಖಂಡದ ಪಾಳೆಗಾರನಾಗಲು ಹೊರಟಿದೆ. ಸ್ವಾತಂತ್ರ್ಯದ ನಂತರದ ಶೀತಲ ಸಮರದಲ್ಲಿ ಆಲಿಪ್ತ ಚಳುವಳಿಯನ್ನು ಸೃಷ್ಟಿಸುವಲ್ಲಿ ಮುಖ್ಯ ಪಾತ್ರ ವಹಿಸಿ ಚಳವಳಿಯನ್ನು ಮುನ್ನಡೆಸುತ್ತಿದ್ದ ಭಾರತ ಈಗ ಅಮೆರಿಕದ ಕಾಲಾಳು ಆಗಲು ಹೊರಟಿದೆ.

ಮೋದಿ ಅಧಿಕಾರಕ್ಕೆ ಬಂದ ನಂತರ ಅಮೆರಿಕ ಜೊತೆ ಮಾಡಿಕೊಂಡಿರುವ ಎರಡು ಒಪ್ಪಂದಗಳು (LEMOA and COMCASA) ಇದಕ್ಕೆ ಸಾಕ್ಷಿ. LEMOA ಒಪ್ಪಂದ ಅಮೆರಿಕಾಗೆ ಭಾರತದ ಸೇನಾ ಸೌಕರ್ಯಗಳನ್ನು ಉಪಯೋಗಿಸಿಕೊಳ್ಳುವ ಹಕ್ಕು ನೀಡುತ್ತದೆ ಮತ್ತು COMCASA ಅತಿ ಸೂಕ್ಷ್ಮ ಮಿಲಿಟರಿ ಗುಪ್ತಚರ ವಿವರಗಳನ್ನು ಹಂಚಿಕೊಳ್ಳುವ ಒಪ್ಪಂದವಾಗಿದೆ. ಬಹುಮುಖ್ಯವಾಗಿ ಇದು ಮೋದಿ ಮತ್ತೆ ಅಧಿಕಾರಕ್ಕೆ ಬಂದ ನಂತರ ಭಾರತ ಎಸಗುತ್ತಿರುವ ಚಾರಿತ್ರಿಕ ದ್ರೋಹ ಎಂದು ದಾಖಲಾಗುತ್ತದೆ. ಏಕೆಂದರೆ ಇನ್ನು ಮುಂದೆ ನಮ್ಮ ವಿದೇಶಾಂಗ ನೀತಿಯು ಅಮೆರಿಕದ ವ್ಯೂಹದ ಭಾಗವಾಗಿರುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...