Homeಅಂತರಾಷ್ಟ್ರೀಯಇರಾನ್- ಅಮೆರಿಕ ಯುದ್ಧದಲ್ಲಿ ಅಮೆರಿಕದ ಕಾಲಾಳು ಆಗಲು ಹೊರಟ ಭಾರತ

ಇರಾನ್- ಅಮೆರಿಕ ಯುದ್ಧದಲ್ಲಿ ಅಮೆರಿಕದ ಕಾಲಾಳು ಆಗಲು ಹೊರಟ ಭಾರತ

ಭಾರತವು ಜೂನ್ 21ರಂದು ತನ್ನ ಯುದ್ಧ ನೌಕೆಗಳಾದ ಚೆನ್ನೈ ಮತ್ತು ಸುನೈನಾವನ್ನು ಪರ್ಶಿಯನ್ ಕೊಲ್ಲಿಗೆ ಕಳುಹಿಸಲು ನಿರ್ಧರಿಸಿದೆ. ಈ ಕಾರ್ಯಾಚರಣೆಗೆ ‘ಆಪರೇಶನ್ ಸಂಕಲ್ಪ್’ ಎಂದು ಹೆಸರಿಡಲಾಗಿದೆ

- Advertisement -
- Advertisement -

| ಭರತ್ ಹೆಬ್ಬಾಳ್ |

ದಶಕಗಳಿಂದ ಒಂದಲ್ಲಾ ಒಂದು ರೀತಿಯ ನಿರಂತರ ಯುದ್ಧಗಳಿಂದ ತತ್ತರಿಸುತ್ತಿರುವ ಮಧ್ಯಪ್ರಾಚ್ಯ ಏಶಿಯಾದಲ್ಲಿ ಮತ್ತೊಮ್ಮೆ ಯುದ್ದದ ಕಾರ್ಮೋಡಗಳು ಆವರಿಸುತ್ತಿವೆ. 2015ರ ಜುಲೈ ತಿಂಗಳಲ್ಲಿ ಆರು ರಾಷ್ಟ್ರಗಳ ಸಂಧಾನ ಮಾತುಕತೆಗಳ ನಂತರ ಅಸ್ತಿತ್ವಕ್ಕೆ ಬಂದಿದ್ದ Joint Comprehensive Plan of Action (JCPOA) ಒಪ್ಪಂದವನ್ನು ಮೇ 2018ರಲ್ಲಿ ಟ್ರಂಪ್ ಆಡಳಿತ ಏಕಪಕ್ಷೀಯವಾಗಿ ಮುರಿದು ಹಾಕಿತ್ತು. ಇದರ ನಂತರದ ಮಾತುಕತೆಗಳಲ್ಲಿ ಇರಾನಿನ ಸಂಪೂರ್ಣ ಶರಣಾಗತಿಯನ್ನು ಬಯಸುತ್ತಿರುವ ಅಮೆರಿಕ, ಕಳೆದೆರಡು ತಿಂಗಳುಗಳಿಂದ ಪರ್ಶಿಯನ್ ಕೊಲ್ಲಿಯಲ್ಲಿ ನಡೆಯುತ್ತಿರುವ ಪಾಶ್ಚಾತ್ಯ ಕಚ್ಚಾ ತೈಲ ಟ್ಯಾಂಕರ್‍ಗಳ ಹಡಗುಗಳ ಮೇಲಿನ ಅಜ್ಞಾತ ದಾಳಿಗಳನ್ನು ಇರಾನಿನ ಮೇಲೆ ಕಟ್ಟಿತ್ತು.

ಅಮೆರಿಕ ಈ ರೀತಿಯ ತಂತ್ರಗಳನ್ನು ಇತಿಹಾಸದಲ್ಲಿ ಬಹಳಷ್ಟು ಮಾಡಿದೆ. ಉದಾಹರಣೆಗೆ ವಿಯೆಟ್ನಾಮ್ ಯುದ್ಧಕ್ಕೆ ನೆಪ ಮಾಡಿಕೊಂಡಿದ್ದು, ಇದೇ ರೀತಿಯ ತನ್ನ ಹಡಗುಗಳ ಮೇಲೆ ನಡೆದಿದೆ ಎನ್ನಲಾದ ಅಜ್ಞಾತ ದಾಳಿ (ಟೊಂಕಿನ್ ಕೊಲ್ಲಿಯ ಘಟನೆ). ಈ ದಾಳಿಗಳನ್ನು ಇರಾನ್ ನಿರಾಕರಿಸುತ್ತಲೇ ಬಂದಿದೆ ಮತ್ತು ಇದು ಯುದ್ಧಕ್ಕಾಗಿ ಅಮೆರಿಕ ಮಾಡುತ್ತಿರುವ ಷಡ್ಯಂತ್ರ ಎಂದು ಆರೋಪಿಸಿತ್ತು. ಇದರ ಮುಂದುವರೆದ ಭಾಗವಾಗಿಯೇ ಇರಾನ್, ಜೂನ್ 20ರಂದು ಅಮೆರಿಕಾದ ಮಾನವರಹಿತ ಗೂಢಚಾರಿ ವಿಮಾನವನ್ನು (RQ-4A Global Hawk Drone) ತನ್ನ ಸಯ್ಯದ್-2ಸಿ ಕ್ಷಿಪಣಿ ಉಪಯೋಗಿಸಿ ಹೊಡೆದುರುಳಿಸಿದೆ. ಈಗಾಗಲೇ ಅಮೆರಿಕಾದ ‘ಗರಿಷ್ಠ ಒತ್ತಡ’ ತಂತ್ರಗಾರಿಕೆಯ ಭಾಗವಾದ ತೀವ್ರ ಆರ್ಥಿಕ ನಿಬರ್ಂಧಗಳನ್ನು (ಭಯೋತ್ಪಾದನೆ) ಎದುರಿಸುತ್ತಿರುವ ಇರಾನ್ ಈಗ ‘ಗರಿಷ್ಠ ಪ್ರತಿ-ಒತ್ತಡ’ ಪ್ರದರ್ಶಿಸಲು ಸಜ್ಜಾಗುತ್ತಿದೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ.

ತನ್ನ ವಾಯುಪ್ರದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಡ್ರೋನ್ ಹೊಡೆದು ಉರುಳಿಸಲಾಯಿತು ಎಂದು ಇರಾನ್ ಹೇಳಿಕೆ ಕೊಟ್ಟಿದೆ. ಅಮೆರಿಕ ಇದು ಅಂತರ್ರಾಷ್ಟ್ರೀಯ ನೀರಿಗೆ (International Waters) ಸೇರಿದ ಜಾಗ ಎಂದು ಹೇಳಿಕೆ ಕೊಟ್ಟಿದೆ. ವಾಸ್ತವದಲ್ಲಿ ಆ ಪ್ರದೇಶದಲ್ಲಿ ಅಂತರ್ರಾಷ್ಟ್ರೀಯ ನೀರಿನ ಜಾಗ ಆಗಿರುವುದು ಸಾಧ್ಯವೇ ಇಲ್ಲ. ಪರ್ಶಿಯನ್ ಕೊಲ್ಲಿಯಲ್ಲಿ ಹಾದುಹೋಗಬೇಕಾದರೆ ಅಲ್ಲಿರುವ ಕೊಲ್ಲಿಯ ಅತಿ ಸಣ್ಣ ಜಾಗ ಇರುವುದೇ 39 ಕಿಲೋಮೀಟರ್‍ಗಳ ಉದ್ದಗಲ. ಅದರ ಒಂದು ಭಾಗ ಇರಾನಿನದ್ದು, ಇನ್ನೊಂದು ಭಾಗ ಒಮಾನ್ ರಾಷ್ಟ್ರದ್ದು! ವಿಶ್ವದ 33% ಕಚ್ಚಾ ತೈಲ ಪರ್ಶಿಯನ್ ಕೊಲ್ಲಿಯಿಂದಲೇ ಹಾದುಹೋಗಬೇಕು.

ಈಗಾಗಲೇ ಇರಾನ್ ರಾಷ್ಟ್ರದಿಂದ ಕಚ್ಚಾ ತೈಲ ಆಮದು ನಿಲ್ಲಿಸುವಂತೆ ಎಲ್ಲಾ ದೇಶಗಳಿಗೂ ಅಮೆರಿಕ ಆದೇಶಿಸಿದೆ. ಆದೇಶ ಮೀರಿದರೆ ಆರ್ಥಿಕ ನಿಬರ್ಂಧಗಳನ್ನು ವಿಧಿಸುವುದಾಗಿ ಎಚ್ಚರಿಕೆಯನ್ನು ನೀಡಿದೆ. ತನ್ನನ್ನು ಕಚ್ಚಾ ತೈಲದ ಮಾರುಕಟ್ಟೆಯಿಂದ ನಿಬರ್ಂಧಿಸಿದರೆ ಪರ್ಶಿಯನ್ ಕೊಲ್ಲಿಯಲ್ಲಿ ಬೇರೆಯವರ ಕಚ್ಚಾ ತೈಲ ಹಾದುಹೋಗುವದಕ್ಕೆ ನಾವು ಬಿಡುವುದಿಲ್ಲ ಎಂದು ಇರಾನ್ ಕೂಡ ಎಚ್ಚರಿಸುತ್ತಲೇ ಬಂದಿದೆ. ಘಟನೆಯ ನಂತರ ಇರಾನಿನ ಮೇಜರ್ ಜನರಲ್ ಮೊಹಮ್ಮದ್ ಬಕೇರಿ ‘ಇರಾನ್ ಯಾವುದೇ ದೇಶದೊಂದಿಗೆ ಯುದ್ಧವನ್ನು ಬಯಸುತ್ತಿಲ್ಲ, ಆದರೆ ಇರಾನ್ ಅನ್ನು ರಕ್ಷಿಸಿಕೊಳ್ಳಲು ನಾವು ಸಂಪೂರ್ಣವಾಗಿ ಸಿದ್ಧರಿದ್ದೇವೆ, ಇರಾನ್ ಕೊಲ್ಲಿಯಿಂದ ತೈಲ ರಫ್ತು ಮಾಡುವುದನ್ನು ತಡೆಯಲು ನಿರ್ಧರಿಸಿದರೆ, ಆ ನಿರ್ಣಯವನ್ನು ದೇಶ ಹಾಗೂ ಸಶಸ್ತ್ರ ಪಡೆಗಳು ಪೂರ್ಣವಾಗಿ ಸಾಕಾರಗೊಳಿಸಿ ಸಾರ್ವಜನಿಕವಾಗಿ ಘೋಷಿಸಲಾಗುವುದು’ ಎಂಬ ಹೇಳಿಕೆ ಕೊಟ್ಟಿದ್ದಾರೆ.

ಈ ಘಟನೆಯ ನಂತರ ದೊಡ್ಡಣ್ಣ ಟ್ರಂಪ್ ‘ಇರಾನ್ ಬಹಳ ದೊಡ್ಡ ತಪ್ಪು’ ಮಾಡಿದೆ ಎಂದು ಟ್ವೀಟ್ ಮಾಡಿದ್ದರು. ನಂತರ ಇರಾನಿನ ಮೇಲೆ ದಾಳಿ ಮಾಡಲು ಆದೇಶಿಸಿ, ಆ ಆದೇಶವನ್ನು ಹಿಂಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಆದೇಶ ಹಿಂಪಡೆಯುವುದರ ಹಿಂದೆ ಅಮೆರಿಕಾದ ಚುನಾವಣೆ ಕಾರಣ ಎಂದು ಹೇಳಲಾಗುತ್ತಿದ್ದರೂ, ಪರ್ಶಿಯನ್ ಕೊಲ್ಲಿಯನ್ನು ಇರಾನ್ ಮುಚ್ಚಿದರೆ ಅಮೆರಿಕಾದ ಆರ್ಥಿಕತೆ ಮತ್ತು ವಿಶ್ವದ ಆರ್ಥಿಕತೆ ಕುಸಿಯುವ ಭಯ ಇದರ ಹಿಂದಿರುವ ನಿಜವಾದ ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ. ಈ ಕೊಲ್ಲಿಯ ಮಾರ್ಗ ಮುಚ್ಚಿದರೆ ಪ್ರಪಂಚದ 1.2 ದಶಲಕ್ಷ ಕೋಟಿ ಡರ್ರೈವೇಟಿವ್ಸ್ ಮಾರುಕಟ್ಟೆಯ ವಹಿವಾಟು ಅಂತಃಸ್ಫೋಟಗೊಂಡು ಪ್ರಪಂಚದ ಬ್ಯಾಂಕಿಂಗ್ ವ್ಯವಸ್ಥೆಯೇ ಕುಸಿದು ಬೀಳುತ್ತದೆ ಮತ್ತು ಪ್ರಪಂಚದ 80 ಟ್ರಿಲಿಯನ್ ಜಿಡಿಪಿ ಪ್ರಪಾತಕ್ಕೆ ಕುಸಿದು, ಕಂಡು ಕೇಳರಿಯದ ಆರ್ಥಿಕ ಹಿನ್ನಡೆ ಆಗುತ್ತದೆ ಎಂಬ ಸುಳಿವು ಸಿಕ್ಕ ನಂತರ ದಾಳಿ ನಡೆಸಲುದ್ದೇಶಿಸಿದ್ದ 10 ನಿಮಿಷದ ಮುಂಚೆ ಟ್ರಂಪ್ ತನ್ನ ಆದೇಶವನ್ನು ಹಿಂಪಡೆದುಕೊಂಡಿದ್ದಾರೆ. ಈ ಕೊಲ್ಲಿಯನ್ನು ಮುಚ್ಚಲು ಇರಾನ್ ತನ್ನ ಪಾಶ್ಚಾತ್ಯ ಗಡಿಯ ಉದ್ದಗಲಕ್ಕೂ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಸಿದ್ಧಪಡಿಸಿಕೊಂಡಿದೆ ಮತ್ತು ಸಮಯ ಬಂದರೆ ಕೊಲ್ಲಿಯನ್ನು ಮುಚ್ಚುವುದಾಗಿಯೂ ಎಚ್ಚರಿಕೆ ನೀಡಿದೆ.

ಈ ಪರಿಸ್ಥಿತಿಯಲ್ಲಿ ಅನಾವರಣಗೊಳ್ಳುತ್ತಿರುವ ಬಿಕ್ಕಟ್ಟಿನ ಒಂದು ಅತ್ಯಂತ ಕಳವಳಕಾರಿ ಬೆಳೆವಣಿಗೆಯೆಂದರೆ ಭಾರತದ ನಿಗೂಢ ನಡೆ. ಭಾರತವು ಜೂನ್ 21ರಂದು ತನ್ನ ಯುದ್ಧ ನೌಕೆಗಳಾದ ಚೆನ್ನೈ ಮತ್ತು ಸುನೈನಾವನ್ನು ಪರ್ಶಿಯನ್ ಕೊಲ್ಲಿಗೆ ಕಳುಹಿಸಲು ನಿರ್ಧರಿಸಿದೆ. ಈ ಕಾರ್ಯಾಚರಣೆಗೆ ‘ಆಪರೇಶನ್ ಸಂಕಲ್ಪ್’ ಎಂದು ಹೆಸರಿಡಲಾಗಿದೆ ಹಾಗೂ ಯುದ್ಧ ನೌಕೆಗಳು ಓಮೆನ್ ಭಾಗದ ನೀರಿನಲ್ಲಿ ನಿಯೋಜಿಸಲ್ಪಟ್ಟಿರುತ್ತದೆ ಎಂದು ವಿವರಿಸಲಾಗಿದೆ. ತೀಕ್ಷ್ಣಗೊಳ್ಳುತ್ತಿರುವ ಜಾಗತಿಕ ರಾಜಕೀಯದಲ್ಲಿ ರಶಿಯ, ಸಿರಿಯ, ಚೀನಾ, ಇರಾನ್ ಒಂದು ಕಡೆಯಾದರೆ, ಅಮೆರಿಕ, ಯುರೋಪಿಯನ್ ಯೂನಿಯನ್‍ನ ಕೆಲವು ಮುಖ್ಯ ರಾಷ್ಟ್ರಗಳು, ಬ್ರಿಟನ್, ಇಸ್ರೇಲ್ ಸೌದಿ ಮತ್ತದರ ಹಿಂಬಾಲಕ ಅರಬ್ ರಾಷ್ಟ್ರಗಳು ಇನ್ನೊಂದು ಕಡೆ.

ಪಾಕಿಸ್ತಾನ ರಶಿಯ ಮತ್ತು ಚೀನಾಗೆ ಹತ್ತಿರವಾಗುತ್ತಿದ್ದರೆ, ಭಾರತ ಅಮೆರಿಕ ಮತ್ತು ಇಸ್ರೇಲ್ ಜೊತೆಗೂಡಿ ಒಂದು ವಿಚಿತ್ರ ಡಬಲ್ ಗೇಮ್ ಆಟದಲ್ಲಿ ತೊಡಗಿದೆ. ಹಿಂದಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದ ಈ ದೇಶಗಳ ಮಧ್ಯೆ ಆರ್ಥಿಕ ನಿರ್ಬಂಧಗಳಾಚೆಗೂ ವ್ಯಾಪಾರ ವಹಿವಾಟು ವಿವಿಧ ವಿನಿಮಯಗಳನ್ನು ಬಳಸಿ ನಡೆಸಲಾಗುತ್ತಿತ್ತು. ಆದರೆ ಕಳೆದ ಮೇ ತಿಂಗಳಿನಿಂದ ಇರಾನ್‍ನಿಂದ ಕಚ್ಚಾ ತೈಲ ಖರೀದಿಸುವುದನ್ನು ನಿಲ್ಲಿಸಿರುವ ಭಾರತವು ಇರಾನಿನ ಕಟು ವೈರಿಗಳಾದ ಇಸ್ರೇಲ್ ಮತ್ತು ಯುದ್ಧಕೋರ ಅಮೆರಿಕ ಜೊತೆಗೂಡಿ ಅಮೆರಿಕ ಕೇಂದ್ರಿತ ಏಕ ಧ್ರುವಿ ಪ್ರಪಂಚದ ದೃಷ್ಟಿಕೋನದಲ್ಲಿ ಏಶಿಯಾ ಖಂಡದ ಪಾಳೆಗಾರನಾಗಲು ಹೊರಟಿದೆ. ಸ್ವಾತಂತ್ರ್ಯದ ನಂತರದ ಶೀತಲ ಸಮರದಲ್ಲಿ ಆಲಿಪ್ತ ಚಳುವಳಿಯನ್ನು ಸೃಷ್ಟಿಸುವಲ್ಲಿ ಮುಖ್ಯ ಪಾತ್ರ ವಹಿಸಿ ಚಳವಳಿಯನ್ನು ಮುನ್ನಡೆಸುತ್ತಿದ್ದ ಭಾರತ ಈಗ ಅಮೆರಿಕದ ಕಾಲಾಳು ಆಗಲು ಹೊರಟಿದೆ.

ಮೋದಿ ಅಧಿಕಾರಕ್ಕೆ ಬಂದ ನಂತರ ಅಮೆರಿಕ ಜೊತೆ ಮಾಡಿಕೊಂಡಿರುವ ಎರಡು ಒಪ್ಪಂದಗಳು (LEMOA and COMCASA) ಇದಕ್ಕೆ ಸಾಕ್ಷಿ. LEMOA ಒಪ್ಪಂದ ಅಮೆರಿಕಾಗೆ ಭಾರತದ ಸೇನಾ ಸೌಕರ್ಯಗಳನ್ನು ಉಪಯೋಗಿಸಿಕೊಳ್ಳುವ ಹಕ್ಕು ನೀಡುತ್ತದೆ ಮತ್ತು COMCASA ಅತಿ ಸೂಕ್ಷ್ಮ ಮಿಲಿಟರಿ ಗುಪ್ತಚರ ವಿವರಗಳನ್ನು ಹಂಚಿಕೊಳ್ಳುವ ಒಪ್ಪಂದವಾಗಿದೆ. ಬಹುಮುಖ್ಯವಾಗಿ ಇದು ಮೋದಿ ಮತ್ತೆ ಅಧಿಕಾರಕ್ಕೆ ಬಂದ ನಂತರ ಭಾರತ ಎಸಗುತ್ತಿರುವ ಚಾರಿತ್ರಿಕ ದ್ರೋಹ ಎಂದು ದಾಖಲಾಗುತ್ತದೆ. ಏಕೆಂದರೆ ಇನ್ನು ಮುಂದೆ ನಮ್ಮ ವಿದೇಶಾಂಗ ನೀತಿಯು ಅಮೆರಿಕದ ವ್ಯೂಹದ ಭಾಗವಾಗಿರುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...