Homeಎಕಾನಮಿಜಿಯೋಗೆ ಪಟ್ಟ - ಬಿಸ್ಸೆನ್ನೆಲ್‍ಗೆ ಚಟ್ಟ...

ಜಿಯೋಗೆ ಪಟ್ಟ – ಬಿಸ್ಸೆನ್ನೆಲ್‍ಗೆ ಚಟ್ಟ…

- Advertisement -
- Advertisement -

70 ವರ್ಷಗಳ ಭಾರತ ರಾಷ್ಟ್ರ ನಿರ್ಮಾಣದ ಇತಿಹಾಸದಲ್ಲಿ ಬಿಎಸ್ಸೆನ್ನೆಲ್‍ಗೆ ತನ್ನದೇ ಆದ ಮಹತ್ವದ ಪಾತ್ರವಿದೆ. ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ, ದೇಶದ ಒಟ್ಟಾರೆ ಆರ್ಥಿಕ ವಾಣಿಜ್ಯ ವಹಿವಾಟುಗಳಿಗೆ ಬಿಸ್ಸೆನ್ನೆಲ್ ನೀಡಿದ ಕೊಡುಗೆ ಅಪಾರವಾದದ್ದು. ಮೂಲೆಮೂಲೆಯ ಹಳ್ಳಿಗಾಡುಗಳನ್ನೂ ಒಳಗೊಂಡು ಇಡೀ ದೇಶಕ್ಕೆ ಸಂಪರ್ಕ ಸೇತುವಾಗಿ ದುಡಿದ ಸಂಸ್ಥೆಯ ಸೇವೆಯನ್ನು ರೂಪಾಯಿಗಳಲ್ಲಿ ಲೆಕ್ಕ ಹಾಕಲಾಗದು. ಇಂಥಾ ಸಂಸ್ಥೆಯನ್ನು ಮಣ್ಣುಗೂಡಿಸಲು ಇದೀಗ ರಂಗ ಸಜ್ಜಾಗಿದೆ.

ಇದು ದಿಢೀರ್ ಸಂಭವಿಸಿದ್ದಲ್ಲ. ಬಹಳ ವ್ಯವಸ್ಥಿತವಾಗಿ ಹಂತಹಂತವಾಗಿ ನಡೆಸಿದ ಷಡ್ಯಂತ್ರ. ಖಾಸಗಿ ಕಂಪನಿಗಳು 4ಜಿ ಸೇವೆ ಒದಗಿಸುತ್ತಿರುವ ಸಂದರ್ಭದಲ್ಲಿ ಬಿಎಸ್ಸೆನ್ನೆಲ್‍ಗೆ 4ಜಿ ಸ್ಪೆಕ್ಟ್ರಮ್ ಮಂಜೂರಾತಿಯೇ ಸಿಗಲಿಲ್ಲವೆಂದರೆ ನಿಮಗೆ ಆಶ್ಚರ್ಯ ಎನಿಸಬಹುದು. ಕುಸಿಯುತ್ತಿರುವ ಸಂಸ್ಥೆಯನ್ನು ಉಳಿಸಿಕೊಳ್ಳಲು ಬಿಸ್ಸೆನ್ನೆಲ್ ನೌಕರರು ಹಲವು ಬಾರಿ ಮುಷ್ಕರ ಹೂಡಿದ್ದಾರೆ. ಮುಷ್ಕರ ಎಂದರೆ ಸಂಬಳ ಭತ್ಯೆ ಜಾಸ್ತಿ ಮಾಡಿ ಎಂದು ಕೇಳುವುದು ಮಾಮೂಲಿ. ಆದರೆ ಬಿಸ್ಸೆನ್ನೆಲ್ ನೌಕರರ ಪ್ರಧಾನ ಬೇಡಿಕೆ ‘4ಜಿ ಸ್ಪೆಕ್ಟ್ರಮ್ ಹಂಚಿಕೆ ಮಾಡಿ – ಬಿಸ್ಸೆನ್ನೆಲ್ ಉಳಿಸಿ’ ಎಂಬುದಾಗಿತ್ತು. ಮುಷ್ಕರ ತೀವ್ರಗೊಂಡ ಸಂದರ್ಭದಲ್ಲಿ ಕೇಂದ್ರದ ಮಂತ್ರಿಗಳು ಹಾಜರಾಗಿ 4ಜಿ ಕೊಡುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ಬೇಡಿಕೆಯನ್ನು ಕಸದಬುಟ್ಟಿಗೆ ಹಾಕಿದ್ದು ಹಳೆ ಸಂಗತಿ.

ಈಗ 5ಜಿ ಟೆಕ್ನಾಲಜಿ ಅಳವಡಿಕೆಗೆ ರಂಗ ಸಜ್ಜಾಗಿರುವ ಹೊತ್ತಿನಲ್ಲಿ ಬಿಸ್ಸೆನ್ನೆಲ್ ಇನ್ನೂ ಓಬೀರಾಯನ ಕಾಲದಲ್ಲೇ ಇದೆ. ಪರಿಣಾಮವಾಗಿ ಸಂಸ್ಥೆಗೆ ಹೊಸ ಗ್ರಾಹಕರು ಸೇರುವುದಿರಲಿ, ಇದ್ದ ಗ್ರಾಹಕರೇ ದೂರಾಗುವಂತಹ ಸನ್ನಿವೇಶ ನಿರ್ಮಿಸಲಾಗಿದೆ. ಇತ್ತೀಚೆಗೆ ಜಿಯೋ ದರ ಸಮರಕ್ಕೆ ಇಳಿದ ಮೇಲಂತೂ ಬಿಸ್ಸೆನ್ನೆಲ್ ಅಸ್ತಿತ್ವವೇ ಪ್ರಶ್ನಾರ್ಹ. ಇತಿಹಾಸದಲ್ಲಿ ಮೊದಲ ಬಾರಿಗೆ ಈಗ ಬಿಸ್ಸೆನ್ನೆಲ್ ಬಳಿ ವೇತನಕ್ಕೂ ಕಾಸಿಲ್ಲ. ಈಗ 50 ವರ್ಷ ಮೇಲ್ಪಟ್ಟ ನೌಕರರ ಸ್ವಯಂನಿವೃತ್ತಿ ಘೋಷಿಸಲಾಗಿದೆ. ನಿವೃತ್ತಿ ವಯಸ್ಸನ್ನು 60 ರಿಂದ 58ಕ್ಕೆ ಇಳಿಸಲಾಗಿದೆ. ಪರಿಣಾಮವಾಗಿ ಸುಮಾರು 54 ಸಾವಿರ ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

‘ನಷ್ಟದಲ್ಲಿರುವ ಸಂಸ್ಥೆಗೆ ಹಣ ಯಾಕೆ ಕೊಡಬೇಕು?’ ‘ತೆರಿಗೆದಾರರ ಜೇಬಿಗೆ ಕತ್ತರಿ’ ಇತ್ಯಾದಿ ಪಾಂಡಿತ್ಯಪೂರ್ಣ ವಾದಗಳು, ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ, ಟಿವಿ ಪ್ಯಾನೆಲ್ ಚರ್ಚೆಗಳು ನಡೆದಿವೆ. ಜನಮಾನಸದಲ್ಲಿ ಬಿಸ್ಸೆನ್ನೆಲ್ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಜಾಲವೊಂದು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕೆಲವು ಕಟುಸತ್ಯಗಳನ್ನು ನಾವು ನೆನಪಿನಲ್ಲಿಡಬೇಕು. 2004-05ರಲ್ಲಿ ಇದೇ ಬಿಸ್ಸೆನ್ನೆಲ್ 10,000 ಕೋಟಿ ನಿವ್ವಳ ಲಾಭ ಗಳಿಸಿತ್ತು. 2014, 2015, 2016ನೇ ಸಾಲಿನಲ್ಲಿಯೂ ಅಲ್ಪ ಪ್ರಮಾಣದ ಲಾಭವನ್ನು ದಾಖಲಿಸಿತ್ತು.

2016ರಲ್ಲಿ ಜಿಯೋ ಮಾರುಕಟ್ಟೆ ಪ್ರವೇಶಿಸಿತು. ಸಾಕ್ಷಾತ್ ಭಾರತದ ಪ್ರಧಾನಿಗಳು ಮುಂದೆ ನಿಂತು ಬಿಟ್ಟು ಜಾಹಿರಾತು ನೀಡಿ ಅದನ್ನು ಪ್ರಮೋಟ್ ಮಾಡಿದರು. ಈ ಮಧ್ಯೆ 2017ರಲ್ಲಿ ಬಿಎಸ್ಸೆನ್ನೆಲ್ ನೆಟ್‍ವರ್ಕ್ ಮೇಲೆ ಸೈಬರ್ ದಾಳಿ ನಡೆದು ಲಕ್ಷಾಂತರ ಸಂಪರ್ಕಗಳಿಗೆ ಹಾನಿಯಾಯಿತು. ಇಲ್ಲಿ ಕಾಣದ ಕೈಗಳು ಕೆಲಸ ಮಾಡಿರುವುದು ಸ್ಪಷ್ಟ. ಯಾವಾಗ ಜಿಯೋ ಅಟ್ಟಹಾಸದಿಂದ ಟೆಲಿಕಾಂ ಪ್ರವೇಶಿಸಿ ದರ ಸಮರಕ್ಕಿಳಿಯಿತೋ ಆಗ ಮೊದಲೇ 4ಜಿ ತಂತ್ರಜ್ಞಾನವಿಲ್ಲದೆ ದುರ್ಬಲವಾಗಿದ್ದ ಸಂಸ್ಥೆ ಕುಸಿದುಹೋಯ್ತು. ಇದು ಕೇವಲ ಬಿಸ್ಸೆನ್ನೆಲ್‍ಗೆ ಮಾತ್ರ ಅನ್ವಯಿಸುವಂತದ್ದಲ್ಲ, ವೊಡಾಫೋನ್ ಹಾಗೂ ಏರ್ಟೆಲ್‍ನಂತಹ ಖಾಸಗಿ ಕಂಪನಿಗಳೂ ಕೂಡ ಈ ಅವಧಿಯಲ್ಲಿ ನಷ್ಟ ಅನುಭವಿಸಿವೆ ಎಂಬುದನ್ನು ನಾವು ನೆನಪಿಡಬೇಕು.

ತಮಾಷೆಯೆಂದರೆ ‘ಅಧಿಕ ಸ್ಪೀಡ್ ಮತ್ತು ಕಡಿಮೆ ದರ’ ಎಂಬುದು ಜಿಯೋದ ತಂತ್ರವಾಗಿದ್ದಾಗಲೇ ಬಿಸ್ಸೆನ್ನೆಲ್‍ನ ಆಡಳಿತ ಮಂಡಳಿ ದರಗಳನ್ನು ಏರಿಸಿಬಿಟ್ಟಿತು. ಈ ಕ್ರಮ ಕೂಡ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ತಂತ್ರವೆಂದೇ ವಿಶ್ಲೇಷಿಸಲಾಗುತ್ತಿದೆ. ಮೋದಿ ಸರ್ಕಾರ ತಮ್ಮ ನೆಚ್ಚಿನ ಖಾಸಗಿ ಕೂಟದೊಂದಿಗೆ ಸೇರಿ ನಡೆಸಿದ ಷಡ್ಯಂತ್ರದ ಫಲ ಇದು.

ಕಳೆದ ಏಪ್ರಿಲ್‍ನಲ್ಲಿ ಬಿಎಸ್ಸೆನ್ನೆಲ್ ನೌಕರರ ಸಂಘ ಬಿಡುಗಡೆ ಮಾಡಿದ ಅಂಕಿಅಂಶಗಳು ನಮ್ಮನ್ನು ಬೆಚ್ಚಿಬೀಳಿಸುತ್ತವೆ. ಈಗ ಜಿಯೋ ತನ್ನ 5ಜಿ ಸೇವೆಯ ಗಿಗಾಫೈಬರ್ ಹೆಸರಿನ ಬ್ರಾಡ್ ಬ್ಯಾಂಡ್ ಬಿಡುಗಡೆಗೆ ನಿಂತಿದೆ. ಅಲ್ಲಿಗೆ ಬಿ.ಎಸ್.ಎನ್.ಎಲ್ ಕಥೆ ಏನು? ಜೊತೆಗೆ ತನ್ನ ಖರ್ಚುವೆಚ್ಚಗಳಿಗೆ ಹಾಗೂ ಬಂಡವಾಳ ಹೂಡಿಕೆಗೆ ಬಿಎಸ್ಸೆನ್ನೆಲ್ ಸಾಲ ಪಡೆದುಕೊಳ್ಳಲಾರದಂತೆ ಸರ್ಕಾರ ನಿರ್ಬಂಧಿಸಿದೆಯಂತೆ. ಕಳೆದ ಮಾರ್ಚ್‍ನ ಲೆಕ್ಕಪತ್ರಗಳ ಪ್ರಕಾರ ಟೆಲಿಕಾಂ ವ್ಯವಹಾರದಲ್ಲಿರುವ ಖಾಸಗಿ ಕಂಪನಿಗಳು ಬಿಎಸ್ಸೆನ್ನೆಲ್‍ಗೆ ಹೋಲಿಸಿದರೆ ಭಾರೀ ಸಾಲದಲ್ಲಿದ್ದವು. ವೊಡಾಫೋನ್ ಐಡಿಯಾದ ಸಾಲ 1,20,000 ಕೋಟಿ! ಏರ್ಟೆಲ್‍ನ ಸಾಲ 1,13,000 ಕೋಟಿ! ಇನ್ನೂ ಜಿಯೋದ ಸಾಲ 2 ಲಕ್ಷ ಕೋಟಿಗಳು!! ಬಿಸ್ಸೆನ್ನೆಲ್‍ನ ಸಾಲ 13,900 ಕೋಟಿಗಳು ಮಾತ್ರ.

ಬಿಸ್ಸೆನ್ನೆಲ್ ಆಸ್ತಿ-ಪಾಸ್ತಿಗಳು ದೇಶದ ಮೂಲೆಮೂಲೆಗಳಲ್ಲೂ ಸಾವಿರಾರು ನಗರ, ಪಟ್ಟಣಗಳಲ್ಲಿ ಹರಡಿಕೊಂಡಿವೆ. ದೇಶಾದ್ಯಂತ ಟವರ್‍ಗಳು ಮತ್ತು ಕೇಬಲ್ ಜಾಲವಿದೆ. 2016ರ ಅಧಿಕೃತ ಅಂದಾಜಿನ ಪ್ರಕಾರವೇ ಬಿಸೆನ್ನೆಲ್‍ನ ಮೌಲ್ಯ 70,746 ಕೋಟಿಗಳು. ವಾಸ್ತವದಲ್ಲಿ ಅದರ ಆಸ್ತಿ ಪಾಸ್ತಿಯ ಮಾರುಕಟ್ಟೆ ಮೌಲ್ಯ ಅದಕ್ಕಿಂತ ಎಷ್ಟೋ ಪಟ್ಟು ಅಧಿಕವಿರುತ್ತದೆ. ಇಂಥಾ ಅನುಕೂಲತೆ ಯಾವುದೇ ಖಾಸಗಿ ಕಂಪನಿಗೂ ಇಲ್ಲ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಬಂಡವಾಳವನ್ನು ಖದೀಮ ಕಾರ್ಪೊರೇಟ್‍ಗಳ ಬಾಯಿಗೆ ಹಾಕುತ್ತಿರುವ ಸರ್ಕಾರ ಬಿಸ್ಸೆನ್ನೆಲ್‍ಗೆ ಸಾಲ ಪಡೆಯಲು ಅನುಮತಿಯನ್ನೇ ಕೊಡಲಿಲ್ಲ!

ಸದ್ಯದಲ್ಲೇ ನಮ್ಮ ಈ ಅಮೂಲ್ಯ ಉದ್ದಿಮೆ ಸಂಸ್ಥೆ ರಕ್ಕಸ ಕಾರ್ಪೊರೇಟ್‍ಗಳ ಬಾಯಿಗೆ ಬೀಳಲಿದೆ. ಬಿಎಸ್ಸೆನ್ನೆಲ್ ಕಬಳಿಸುವ ಈ ಖಾಸಗಿ ದೇಶದ್ರೋಹವನ್ನು ಮರೆಮಾಚಿ ಬೋಪರಾಕ್ ಹಾಕಲು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವಂದಿಮಾಗಧರೂ ಈಗಾಗಲೇ ಸಜ್ಜಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...