Homeಎಕಾನಮಿಜಿಯೋಗೆ ಪಟ್ಟ - ಬಿಸ್ಸೆನ್ನೆಲ್‍ಗೆ ಚಟ್ಟ...

ಜಿಯೋಗೆ ಪಟ್ಟ – ಬಿಸ್ಸೆನ್ನೆಲ್‍ಗೆ ಚಟ್ಟ…

- Advertisement -
- Advertisement -

70 ವರ್ಷಗಳ ಭಾರತ ರಾಷ್ಟ್ರ ನಿರ್ಮಾಣದ ಇತಿಹಾಸದಲ್ಲಿ ಬಿಎಸ್ಸೆನ್ನೆಲ್‍ಗೆ ತನ್ನದೇ ಆದ ಮಹತ್ವದ ಪಾತ್ರವಿದೆ. ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ, ದೇಶದ ಒಟ್ಟಾರೆ ಆರ್ಥಿಕ ವಾಣಿಜ್ಯ ವಹಿವಾಟುಗಳಿಗೆ ಬಿಸ್ಸೆನ್ನೆಲ್ ನೀಡಿದ ಕೊಡುಗೆ ಅಪಾರವಾದದ್ದು. ಮೂಲೆಮೂಲೆಯ ಹಳ್ಳಿಗಾಡುಗಳನ್ನೂ ಒಳಗೊಂಡು ಇಡೀ ದೇಶಕ್ಕೆ ಸಂಪರ್ಕ ಸೇತುವಾಗಿ ದುಡಿದ ಸಂಸ್ಥೆಯ ಸೇವೆಯನ್ನು ರೂಪಾಯಿಗಳಲ್ಲಿ ಲೆಕ್ಕ ಹಾಕಲಾಗದು. ಇಂಥಾ ಸಂಸ್ಥೆಯನ್ನು ಮಣ್ಣುಗೂಡಿಸಲು ಇದೀಗ ರಂಗ ಸಜ್ಜಾಗಿದೆ.

ಇದು ದಿಢೀರ್ ಸಂಭವಿಸಿದ್ದಲ್ಲ. ಬಹಳ ವ್ಯವಸ್ಥಿತವಾಗಿ ಹಂತಹಂತವಾಗಿ ನಡೆಸಿದ ಷಡ್ಯಂತ್ರ. ಖಾಸಗಿ ಕಂಪನಿಗಳು 4ಜಿ ಸೇವೆ ಒದಗಿಸುತ್ತಿರುವ ಸಂದರ್ಭದಲ್ಲಿ ಬಿಎಸ್ಸೆನ್ನೆಲ್‍ಗೆ 4ಜಿ ಸ್ಪೆಕ್ಟ್ರಮ್ ಮಂಜೂರಾತಿಯೇ ಸಿಗಲಿಲ್ಲವೆಂದರೆ ನಿಮಗೆ ಆಶ್ಚರ್ಯ ಎನಿಸಬಹುದು. ಕುಸಿಯುತ್ತಿರುವ ಸಂಸ್ಥೆಯನ್ನು ಉಳಿಸಿಕೊಳ್ಳಲು ಬಿಸ್ಸೆನ್ನೆಲ್ ನೌಕರರು ಹಲವು ಬಾರಿ ಮುಷ್ಕರ ಹೂಡಿದ್ದಾರೆ. ಮುಷ್ಕರ ಎಂದರೆ ಸಂಬಳ ಭತ್ಯೆ ಜಾಸ್ತಿ ಮಾಡಿ ಎಂದು ಕೇಳುವುದು ಮಾಮೂಲಿ. ಆದರೆ ಬಿಸ್ಸೆನ್ನೆಲ್ ನೌಕರರ ಪ್ರಧಾನ ಬೇಡಿಕೆ ‘4ಜಿ ಸ್ಪೆಕ್ಟ್ರಮ್ ಹಂಚಿಕೆ ಮಾಡಿ – ಬಿಸ್ಸೆನ್ನೆಲ್ ಉಳಿಸಿ’ ಎಂಬುದಾಗಿತ್ತು. ಮುಷ್ಕರ ತೀವ್ರಗೊಂಡ ಸಂದರ್ಭದಲ್ಲಿ ಕೇಂದ್ರದ ಮಂತ್ರಿಗಳು ಹಾಜರಾಗಿ 4ಜಿ ಕೊಡುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ಬೇಡಿಕೆಯನ್ನು ಕಸದಬುಟ್ಟಿಗೆ ಹಾಕಿದ್ದು ಹಳೆ ಸಂಗತಿ.

ಈಗ 5ಜಿ ಟೆಕ್ನಾಲಜಿ ಅಳವಡಿಕೆಗೆ ರಂಗ ಸಜ್ಜಾಗಿರುವ ಹೊತ್ತಿನಲ್ಲಿ ಬಿಸ್ಸೆನ್ನೆಲ್ ಇನ್ನೂ ಓಬೀರಾಯನ ಕಾಲದಲ್ಲೇ ಇದೆ. ಪರಿಣಾಮವಾಗಿ ಸಂಸ್ಥೆಗೆ ಹೊಸ ಗ್ರಾಹಕರು ಸೇರುವುದಿರಲಿ, ಇದ್ದ ಗ್ರಾಹಕರೇ ದೂರಾಗುವಂತಹ ಸನ್ನಿವೇಶ ನಿರ್ಮಿಸಲಾಗಿದೆ. ಇತ್ತೀಚೆಗೆ ಜಿಯೋ ದರ ಸಮರಕ್ಕೆ ಇಳಿದ ಮೇಲಂತೂ ಬಿಸ್ಸೆನ್ನೆಲ್ ಅಸ್ತಿತ್ವವೇ ಪ್ರಶ್ನಾರ್ಹ. ಇತಿಹಾಸದಲ್ಲಿ ಮೊದಲ ಬಾರಿಗೆ ಈಗ ಬಿಸ್ಸೆನ್ನೆಲ್ ಬಳಿ ವೇತನಕ್ಕೂ ಕಾಸಿಲ್ಲ. ಈಗ 50 ವರ್ಷ ಮೇಲ್ಪಟ್ಟ ನೌಕರರ ಸ್ವಯಂನಿವೃತ್ತಿ ಘೋಷಿಸಲಾಗಿದೆ. ನಿವೃತ್ತಿ ವಯಸ್ಸನ್ನು 60 ರಿಂದ 58ಕ್ಕೆ ಇಳಿಸಲಾಗಿದೆ. ಪರಿಣಾಮವಾಗಿ ಸುಮಾರು 54 ಸಾವಿರ ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

‘ನಷ್ಟದಲ್ಲಿರುವ ಸಂಸ್ಥೆಗೆ ಹಣ ಯಾಕೆ ಕೊಡಬೇಕು?’ ‘ತೆರಿಗೆದಾರರ ಜೇಬಿಗೆ ಕತ್ತರಿ’ ಇತ್ಯಾದಿ ಪಾಂಡಿತ್ಯಪೂರ್ಣ ವಾದಗಳು, ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ, ಟಿವಿ ಪ್ಯಾನೆಲ್ ಚರ್ಚೆಗಳು ನಡೆದಿವೆ. ಜನಮಾನಸದಲ್ಲಿ ಬಿಸ್ಸೆನ್ನೆಲ್ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಜಾಲವೊಂದು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕೆಲವು ಕಟುಸತ್ಯಗಳನ್ನು ನಾವು ನೆನಪಿನಲ್ಲಿಡಬೇಕು. 2004-05ರಲ್ಲಿ ಇದೇ ಬಿಸ್ಸೆನ್ನೆಲ್ 10,000 ಕೋಟಿ ನಿವ್ವಳ ಲಾಭ ಗಳಿಸಿತ್ತು. 2014, 2015, 2016ನೇ ಸಾಲಿನಲ್ಲಿಯೂ ಅಲ್ಪ ಪ್ರಮಾಣದ ಲಾಭವನ್ನು ದಾಖಲಿಸಿತ್ತು.

2016ರಲ್ಲಿ ಜಿಯೋ ಮಾರುಕಟ್ಟೆ ಪ್ರವೇಶಿಸಿತು. ಸಾಕ್ಷಾತ್ ಭಾರತದ ಪ್ರಧಾನಿಗಳು ಮುಂದೆ ನಿಂತು ಬಿಟ್ಟು ಜಾಹಿರಾತು ನೀಡಿ ಅದನ್ನು ಪ್ರಮೋಟ್ ಮಾಡಿದರು. ಈ ಮಧ್ಯೆ 2017ರಲ್ಲಿ ಬಿಎಸ್ಸೆನ್ನೆಲ್ ನೆಟ್‍ವರ್ಕ್ ಮೇಲೆ ಸೈಬರ್ ದಾಳಿ ನಡೆದು ಲಕ್ಷಾಂತರ ಸಂಪರ್ಕಗಳಿಗೆ ಹಾನಿಯಾಯಿತು. ಇಲ್ಲಿ ಕಾಣದ ಕೈಗಳು ಕೆಲಸ ಮಾಡಿರುವುದು ಸ್ಪಷ್ಟ. ಯಾವಾಗ ಜಿಯೋ ಅಟ್ಟಹಾಸದಿಂದ ಟೆಲಿಕಾಂ ಪ್ರವೇಶಿಸಿ ದರ ಸಮರಕ್ಕಿಳಿಯಿತೋ ಆಗ ಮೊದಲೇ 4ಜಿ ತಂತ್ರಜ್ಞಾನವಿಲ್ಲದೆ ದುರ್ಬಲವಾಗಿದ್ದ ಸಂಸ್ಥೆ ಕುಸಿದುಹೋಯ್ತು. ಇದು ಕೇವಲ ಬಿಸ್ಸೆನ್ನೆಲ್‍ಗೆ ಮಾತ್ರ ಅನ್ವಯಿಸುವಂತದ್ದಲ್ಲ, ವೊಡಾಫೋನ್ ಹಾಗೂ ಏರ್ಟೆಲ್‍ನಂತಹ ಖಾಸಗಿ ಕಂಪನಿಗಳೂ ಕೂಡ ಈ ಅವಧಿಯಲ್ಲಿ ನಷ್ಟ ಅನುಭವಿಸಿವೆ ಎಂಬುದನ್ನು ನಾವು ನೆನಪಿಡಬೇಕು.

ತಮಾಷೆಯೆಂದರೆ ‘ಅಧಿಕ ಸ್ಪೀಡ್ ಮತ್ತು ಕಡಿಮೆ ದರ’ ಎಂಬುದು ಜಿಯೋದ ತಂತ್ರವಾಗಿದ್ದಾಗಲೇ ಬಿಸ್ಸೆನ್ನೆಲ್‍ನ ಆಡಳಿತ ಮಂಡಳಿ ದರಗಳನ್ನು ಏರಿಸಿಬಿಟ್ಟಿತು. ಈ ಕ್ರಮ ಕೂಡ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ತಂತ್ರವೆಂದೇ ವಿಶ್ಲೇಷಿಸಲಾಗುತ್ತಿದೆ. ಮೋದಿ ಸರ್ಕಾರ ತಮ್ಮ ನೆಚ್ಚಿನ ಖಾಸಗಿ ಕೂಟದೊಂದಿಗೆ ಸೇರಿ ನಡೆಸಿದ ಷಡ್ಯಂತ್ರದ ಫಲ ಇದು.

ಕಳೆದ ಏಪ್ರಿಲ್‍ನಲ್ಲಿ ಬಿಎಸ್ಸೆನ್ನೆಲ್ ನೌಕರರ ಸಂಘ ಬಿಡುಗಡೆ ಮಾಡಿದ ಅಂಕಿಅಂಶಗಳು ನಮ್ಮನ್ನು ಬೆಚ್ಚಿಬೀಳಿಸುತ್ತವೆ. ಈಗ ಜಿಯೋ ತನ್ನ 5ಜಿ ಸೇವೆಯ ಗಿಗಾಫೈಬರ್ ಹೆಸರಿನ ಬ್ರಾಡ್ ಬ್ಯಾಂಡ್ ಬಿಡುಗಡೆಗೆ ನಿಂತಿದೆ. ಅಲ್ಲಿಗೆ ಬಿ.ಎಸ್.ಎನ್.ಎಲ್ ಕಥೆ ಏನು? ಜೊತೆಗೆ ತನ್ನ ಖರ್ಚುವೆಚ್ಚಗಳಿಗೆ ಹಾಗೂ ಬಂಡವಾಳ ಹೂಡಿಕೆಗೆ ಬಿಎಸ್ಸೆನ್ನೆಲ್ ಸಾಲ ಪಡೆದುಕೊಳ್ಳಲಾರದಂತೆ ಸರ್ಕಾರ ನಿರ್ಬಂಧಿಸಿದೆಯಂತೆ. ಕಳೆದ ಮಾರ್ಚ್‍ನ ಲೆಕ್ಕಪತ್ರಗಳ ಪ್ರಕಾರ ಟೆಲಿಕಾಂ ವ್ಯವಹಾರದಲ್ಲಿರುವ ಖಾಸಗಿ ಕಂಪನಿಗಳು ಬಿಎಸ್ಸೆನ್ನೆಲ್‍ಗೆ ಹೋಲಿಸಿದರೆ ಭಾರೀ ಸಾಲದಲ್ಲಿದ್ದವು. ವೊಡಾಫೋನ್ ಐಡಿಯಾದ ಸಾಲ 1,20,000 ಕೋಟಿ! ಏರ್ಟೆಲ್‍ನ ಸಾಲ 1,13,000 ಕೋಟಿ! ಇನ್ನೂ ಜಿಯೋದ ಸಾಲ 2 ಲಕ್ಷ ಕೋಟಿಗಳು!! ಬಿಸ್ಸೆನ್ನೆಲ್‍ನ ಸಾಲ 13,900 ಕೋಟಿಗಳು ಮಾತ್ರ.

ಬಿಸ್ಸೆನ್ನೆಲ್ ಆಸ್ತಿ-ಪಾಸ್ತಿಗಳು ದೇಶದ ಮೂಲೆಮೂಲೆಗಳಲ್ಲೂ ಸಾವಿರಾರು ನಗರ, ಪಟ್ಟಣಗಳಲ್ಲಿ ಹರಡಿಕೊಂಡಿವೆ. ದೇಶಾದ್ಯಂತ ಟವರ್‍ಗಳು ಮತ್ತು ಕೇಬಲ್ ಜಾಲವಿದೆ. 2016ರ ಅಧಿಕೃತ ಅಂದಾಜಿನ ಪ್ರಕಾರವೇ ಬಿಸೆನ್ನೆಲ್‍ನ ಮೌಲ್ಯ 70,746 ಕೋಟಿಗಳು. ವಾಸ್ತವದಲ್ಲಿ ಅದರ ಆಸ್ತಿ ಪಾಸ್ತಿಯ ಮಾರುಕಟ್ಟೆ ಮೌಲ್ಯ ಅದಕ್ಕಿಂತ ಎಷ್ಟೋ ಪಟ್ಟು ಅಧಿಕವಿರುತ್ತದೆ. ಇಂಥಾ ಅನುಕೂಲತೆ ಯಾವುದೇ ಖಾಸಗಿ ಕಂಪನಿಗೂ ಇಲ್ಲ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಬಂಡವಾಳವನ್ನು ಖದೀಮ ಕಾರ್ಪೊರೇಟ್‍ಗಳ ಬಾಯಿಗೆ ಹಾಕುತ್ತಿರುವ ಸರ್ಕಾರ ಬಿಸ್ಸೆನ್ನೆಲ್‍ಗೆ ಸಾಲ ಪಡೆಯಲು ಅನುಮತಿಯನ್ನೇ ಕೊಡಲಿಲ್ಲ!

ಸದ್ಯದಲ್ಲೇ ನಮ್ಮ ಈ ಅಮೂಲ್ಯ ಉದ್ದಿಮೆ ಸಂಸ್ಥೆ ರಕ್ಕಸ ಕಾರ್ಪೊರೇಟ್‍ಗಳ ಬಾಯಿಗೆ ಬೀಳಲಿದೆ. ಬಿಎಸ್ಸೆನ್ನೆಲ್ ಕಬಳಿಸುವ ಈ ಖಾಸಗಿ ದೇಶದ್ರೋಹವನ್ನು ಮರೆಮಾಚಿ ಬೋಪರಾಕ್ ಹಾಕಲು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವಂದಿಮಾಗಧರೂ ಈಗಾಗಲೇ ಸಜ್ಜಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...