Homeಎಕಾನಮಿಜಿಯೋಗೆ ಪಟ್ಟ - ಬಿಸ್ಸೆನ್ನೆಲ್‍ಗೆ ಚಟ್ಟ...

ಜಿಯೋಗೆ ಪಟ್ಟ – ಬಿಸ್ಸೆನ್ನೆಲ್‍ಗೆ ಚಟ್ಟ…

- Advertisement -
- Advertisement -

70 ವರ್ಷಗಳ ಭಾರತ ರಾಷ್ಟ್ರ ನಿರ್ಮಾಣದ ಇತಿಹಾಸದಲ್ಲಿ ಬಿಎಸ್ಸೆನ್ನೆಲ್‍ಗೆ ತನ್ನದೇ ಆದ ಮಹತ್ವದ ಪಾತ್ರವಿದೆ. ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ, ದೇಶದ ಒಟ್ಟಾರೆ ಆರ್ಥಿಕ ವಾಣಿಜ್ಯ ವಹಿವಾಟುಗಳಿಗೆ ಬಿಸ್ಸೆನ್ನೆಲ್ ನೀಡಿದ ಕೊಡುಗೆ ಅಪಾರವಾದದ್ದು. ಮೂಲೆಮೂಲೆಯ ಹಳ್ಳಿಗಾಡುಗಳನ್ನೂ ಒಳಗೊಂಡು ಇಡೀ ದೇಶಕ್ಕೆ ಸಂಪರ್ಕ ಸೇತುವಾಗಿ ದುಡಿದ ಸಂಸ್ಥೆಯ ಸೇವೆಯನ್ನು ರೂಪಾಯಿಗಳಲ್ಲಿ ಲೆಕ್ಕ ಹಾಕಲಾಗದು. ಇಂಥಾ ಸಂಸ್ಥೆಯನ್ನು ಮಣ್ಣುಗೂಡಿಸಲು ಇದೀಗ ರಂಗ ಸಜ್ಜಾಗಿದೆ.

ಇದು ದಿಢೀರ್ ಸಂಭವಿಸಿದ್ದಲ್ಲ. ಬಹಳ ವ್ಯವಸ್ಥಿತವಾಗಿ ಹಂತಹಂತವಾಗಿ ನಡೆಸಿದ ಷಡ್ಯಂತ್ರ. ಖಾಸಗಿ ಕಂಪನಿಗಳು 4ಜಿ ಸೇವೆ ಒದಗಿಸುತ್ತಿರುವ ಸಂದರ್ಭದಲ್ಲಿ ಬಿಎಸ್ಸೆನ್ನೆಲ್‍ಗೆ 4ಜಿ ಸ್ಪೆಕ್ಟ್ರಮ್ ಮಂಜೂರಾತಿಯೇ ಸಿಗಲಿಲ್ಲವೆಂದರೆ ನಿಮಗೆ ಆಶ್ಚರ್ಯ ಎನಿಸಬಹುದು. ಕುಸಿಯುತ್ತಿರುವ ಸಂಸ್ಥೆಯನ್ನು ಉಳಿಸಿಕೊಳ್ಳಲು ಬಿಸ್ಸೆನ್ನೆಲ್ ನೌಕರರು ಹಲವು ಬಾರಿ ಮುಷ್ಕರ ಹೂಡಿದ್ದಾರೆ. ಮುಷ್ಕರ ಎಂದರೆ ಸಂಬಳ ಭತ್ಯೆ ಜಾಸ್ತಿ ಮಾಡಿ ಎಂದು ಕೇಳುವುದು ಮಾಮೂಲಿ. ಆದರೆ ಬಿಸ್ಸೆನ್ನೆಲ್ ನೌಕರರ ಪ್ರಧಾನ ಬೇಡಿಕೆ ‘4ಜಿ ಸ್ಪೆಕ್ಟ್ರಮ್ ಹಂಚಿಕೆ ಮಾಡಿ – ಬಿಸ್ಸೆನ್ನೆಲ್ ಉಳಿಸಿ’ ಎಂಬುದಾಗಿತ್ತು. ಮುಷ್ಕರ ತೀವ್ರಗೊಂಡ ಸಂದರ್ಭದಲ್ಲಿ ಕೇಂದ್ರದ ಮಂತ್ರಿಗಳು ಹಾಜರಾಗಿ 4ಜಿ ಕೊಡುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ಬೇಡಿಕೆಯನ್ನು ಕಸದಬುಟ್ಟಿಗೆ ಹಾಕಿದ್ದು ಹಳೆ ಸಂಗತಿ.

ಈಗ 5ಜಿ ಟೆಕ್ನಾಲಜಿ ಅಳವಡಿಕೆಗೆ ರಂಗ ಸಜ್ಜಾಗಿರುವ ಹೊತ್ತಿನಲ್ಲಿ ಬಿಸ್ಸೆನ್ನೆಲ್ ಇನ್ನೂ ಓಬೀರಾಯನ ಕಾಲದಲ್ಲೇ ಇದೆ. ಪರಿಣಾಮವಾಗಿ ಸಂಸ್ಥೆಗೆ ಹೊಸ ಗ್ರಾಹಕರು ಸೇರುವುದಿರಲಿ, ಇದ್ದ ಗ್ರಾಹಕರೇ ದೂರಾಗುವಂತಹ ಸನ್ನಿವೇಶ ನಿರ್ಮಿಸಲಾಗಿದೆ. ಇತ್ತೀಚೆಗೆ ಜಿಯೋ ದರ ಸಮರಕ್ಕೆ ಇಳಿದ ಮೇಲಂತೂ ಬಿಸ್ಸೆನ್ನೆಲ್ ಅಸ್ತಿತ್ವವೇ ಪ್ರಶ್ನಾರ್ಹ. ಇತಿಹಾಸದಲ್ಲಿ ಮೊದಲ ಬಾರಿಗೆ ಈಗ ಬಿಸ್ಸೆನ್ನೆಲ್ ಬಳಿ ವೇತನಕ್ಕೂ ಕಾಸಿಲ್ಲ. ಈಗ 50 ವರ್ಷ ಮೇಲ್ಪಟ್ಟ ನೌಕರರ ಸ್ವಯಂನಿವೃತ್ತಿ ಘೋಷಿಸಲಾಗಿದೆ. ನಿವೃತ್ತಿ ವಯಸ್ಸನ್ನು 60 ರಿಂದ 58ಕ್ಕೆ ಇಳಿಸಲಾಗಿದೆ. ಪರಿಣಾಮವಾಗಿ ಸುಮಾರು 54 ಸಾವಿರ ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

‘ನಷ್ಟದಲ್ಲಿರುವ ಸಂಸ್ಥೆಗೆ ಹಣ ಯಾಕೆ ಕೊಡಬೇಕು?’ ‘ತೆರಿಗೆದಾರರ ಜೇಬಿಗೆ ಕತ್ತರಿ’ ಇತ್ಯಾದಿ ಪಾಂಡಿತ್ಯಪೂರ್ಣ ವಾದಗಳು, ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ, ಟಿವಿ ಪ್ಯಾನೆಲ್ ಚರ್ಚೆಗಳು ನಡೆದಿವೆ. ಜನಮಾನಸದಲ್ಲಿ ಬಿಸ್ಸೆನ್ನೆಲ್ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಜಾಲವೊಂದು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕೆಲವು ಕಟುಸತ್ಯಗಳನ್ನು ನಾವು ನೆನಪಿನಲ್ಲಿಡಬೇಕು. 2004-05ರಲ್ಲಿ ಇದೇ ಬಿಸ್ಸೆನ್ನೆಲ್ 10,000 ಕೋಟಿ ನಿವ್ವಳ ಲಾಭ ಗಳಿಸಿತ್ತು. 2014, 2015, 2016ನೇ ಸಾಲಿನಲ್ಲಿಯೂ ಅಲ್ಪ ಪ್ರಮಾಣದ ಲಾಭವನ್ನು ದಾಖಲಿಸಿತ್ತು.

2016ರಲ್ಲಿ ಜಿಯೋ ಮಾರುಕಟ್ಟೆ ಪ್ರವೇಶಿಸಿತು. ಸಾಕ್ಷಾತ್ ಭಾರತದ ಪ್ರಧಾನಿಗಳು ಮುಂದೆ ನಿಂತು ಬಿಟ್ಟು ಜಾಹಿರಾತು ನೀಡಿ ಅದನ್ನು ಪ್ರಮೋಟ್ ಮಾಡಿದರು. ಈ ಮಧ್ಯೆ 2017ರಲ್ಲಿ ಬಿಎಸ್ಸೆನ್ನೆಲ್ ನೆಟ್‍ವರ್ಕ್ ಮೇಲೆ ಸೈಬರ್ ದಾಳಿ ನಡೆದು ಲಕ್ಷಾಂತರ ಸಂಪರ್ಕಗಳಿಗೆ ಹಾನಿಯಾಯಿತು. ಇಲ್ಲಿ ಕಾಣದ ಕೈಗಳು ಕೆಲಸ ಮಾಡಿರುವುದು ಸ್ಪಷ್ಟ. ಯಾವಾಗ ಜಿಯೋ ಅಟ್ಟಹಾಸದಿಂದ ಟೆಲಿಕಾಂ ಪ್ರವೇಶಿಸಿ ದರ ಸಮರಕ್ಕಿಳಿಯಿತೋ ಆಗ ಮೊದಲೇ 4ಜಿ ತಂತ್ರಜ್ಞಾನವಿಲ್ಲದೆ ದುರ್ಬಲವಾಗಿದ್ದ ಸಂಸ್ಥೆ ಕುಸಿದುಹೋಯ್ತು. ಇದು ಕೇವಲ ಬಿಸ್ಸೆನ್ನೆಲ್‍ಗೆ ಮಾತ್ರ ಅನ್ವಯಿಸುವಂತದ್ದಲ್ಲ, ವೊಡಾಫೋನ್ ಹಾಗೂ ಏರ್ಟೆಲ್‍ನಂತಹ ಖಾಸಗಿ ಕಂಪನಿಗಳೂ ಕೂಡ ಈ ಅವಧಿಯಲ್ಲಿ ನಷ್ಟ ಅನುಭವಿಸಿವೆ ಎಂಬುದನ್ನು ನಾವು ನೆನಪಿಡಬೇಕು.

ತಮಾಷೆಯೆಂದರೆ ‘ಅಧಿಕ ಸ್ಪೀಡ್ ಮತ್ತು ಕಡಿಮೆ ದರ’ ಎಂಬುದು ಜಿಯೋದ ತಂತ್ರವಾಗಿದ್ದಾಗಲೇ ಬಿಸ್ಸೆನ್ನೆಲ್‍ನ ಆಡಳಿತ ಮಂಡಳಿ ದರಗಳನ್ನು ಏರಿಸಿಬಿಟ್ಟಿತು. ಈ ಕ್ರಮ ಕೂಡ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ತಂತ್ರವೆಂದೇ ವಿಶ್ಲೇಷಿಸಲಾಗುತ್ತಿದೆ. ಮೋದಿ ಸರ್ಕಾರ ತಮ್ಮ ನೆಚ್ಚಿನ ಖಾಸಗಿ ಕೂಟದೊಂದಿಗೆ ಸೇರಿ ನಡೆಸಿದ ಷಡ್ಯಂತ್ರದ ಫಲ ಇದು.

ಕಳೆದ ಏಪ್ರಿಲ್‍ನಲ್ಲಿ ಬಿಎಸ್ಸೆನ್ನೆಲ್ ನೌಕರರ ಸಂಘ ಬಿಡುಗಡೆ ಮಾಡಿದ ಅಂಕಿಅಂಶಗಳು ನಮ್ಮನ್ನು ಬೆಚ್ಚಿಬೀಳಿಸುತ್ತವೆ. ಈಗ ಜಿಯೋ ತನ್ನ 5ಜಿ ಸೇವೆಯ ಗಿಗಾಫೈಬರ್ ಹೆಸರಿನ ಬ್ರಾಡ್ ಬ್ಯಾಂಡ್ ಬಿಡುಗಡೆಗೆ ನಿಂತಿದೆ. ಅಲ್ಲಿಗೆ ಬಿ.ಎಸ್.ಎನ್.ಎಲ್ ಕಥೆ ಏನು? ಜೊತೆಗೆ ತನ್ನ ಖರ್ಚುವೆಚ್ಚಗಳಿಗೆ ಹಾಗೂ ಬಂಡವಾಳ ಹೂಡಿಕೆಗೆ ಬಿಎಸ್ಸೆನ್ನೆಲ್ ಸಾಲ ಪಡೆದುಕೊಳ್ಳಲಾರದಂತೆ ಸರ್ಕಾರ ನಿರ್ಬಂಧಿಸಿದೆಯಂತೆ. ಕಳೆದ ಮಾರ್ಚ್‍ನ ಲೆಕ್ಕಪತ್ರಗಳ ಪ್ರಕಾರ ಟೆಲಿಕಾಂ ವ್ಯವಹಾರದಲ್ಲಿರುವ ಖಾಸಗಿ ಕಂಪನಿಗಳು ಬಿಎಸ್ಸೆನ್ನೆಲ್‍ಗೆ ಹೋಲಿಸಿದರೆ ಭಾರೀ ಸಾಲದಲ್ಲಿದ್ದವು. ವೊಡಾಫೋನ್ ಐಡಿಯಾದ ಸಾಲ 1,20,000 ಕೋಟಿ! ಏರ್ಟೆಲ್‍ನ ಸಾಲ 1,13,000 ಕೋಟಿ! ಇನ್ನೂ ಜಿಯೋದ ಸಾಲ 2 ಲಕ್ಷ ಕೋಟಿಗಳು!! ಬಿಸ್ಸೆನ್ನೆಲ್‍ನ ಸಾಲ 13,900 ಕೋಟಿಗಳು ಮಾತ್ರ.

ಬಿಸ್ಸೆನ್ನೆಲ್ ಆಸ್ತಿ-ಪಾಸ್ತಿಗಳು ದೇಶದ ಮೂಲೆಮೂಲೆಗಳಲ್ಲೂ ಸಾವಿರಾರು ನಗರ, ಪಟ್ಟಣಗಳಲ್ಲಿ ಹರಡಿಕೊಂಡಿವೆ. ದೇಶಾದ್ಯಂತ ಟವರ್‍ಗಳು ಮತ್ತು ಕೇಬಲ್ ಜಾಲವಿದೆ. 2016ರ ಅಧಿಕೃತ ಅಂದಾಜಿನ ಪ್ರಕಾರವೇ ಬಿಸೆನ್ನೆಲ್‍ನ ಮೌಲ್ಯ 70,746 ಕೋಟಿಗಳು. ವಾಸ್ತವದಲ್ಲಿ ಅದರ ಆಸ್ತಿ ಪಾಸ್ತಿಯ ಮಾರುಕಟ್ಟೆ ಮೌಲ್ಯ ಅದಕ್ಕಿಂತ ಎಷ್ಟೋ ಪಟ್ಟು ಅಧಿಕವಿರುತ್ತದೆ. ಇಂಥಾ ಅನುಕೂಲತೆ ಯಾವುದೇ ಖಾಸಗಿ ಕಂಪನಿಗೂ ಇಲ್ಲ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಬಂಡವಾಳವನ್ನು ಖದೀಮ ಕಾರ್ಪೊರೇಟ್‍ಗಳ ಬಾಯಿಗೆ ಹಾಕುತ್ತಿರುವ ಸರ್ಕಾರ ಬಿಸ್ಸೆನ್ನೆಲ್‍ಗೆ ಸಾಲ ಪಡೆಯಲು ಅನುಮತಿಯನ್ನೇ ಕೊಡಲಿಲ್ಲ!

ಸದ್ಯದಲ್ಲೇ ನಮ್ಮ ಈ ಅಮೂಲ್ಯ ಉದ್ದಿಮೆ ಸಂಸ್ಥೆ ರಕ್ಕಸ ಕಾರ್ಪೊರೇಟ್‍ಗಳ ಬಾಯಿಗೆ ಬೀಳಲಿದೆ. ಬಿಎಸ್ಸೆನ್ನೆಲ್ ಕಬಳಿಸುವ ಈ ಖಾಸಗಿ ದೇಶದ್ರೋಹವನ್ನು ಮರೆಮಾಚಿ ಬೋಪರಾಕ್ ಹಾಕಲು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವಂದಿಮಾಗಧರೂ ಈಗಾಗಲೇ ಸಜ್ಜಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...