Homeಎಕಾನಮಿಜಿಯೋಗೆ ಪಟ್ಟ - ಬಿಸ್ಸೆನ್ನೆಲ್‍ಗೆ ಚಟ್ಟ...

ಜಿಯೋಗೆ ಪಟ್ಟ – ಬಿಸ್ಸೆನ್ನೆಲ್‍ಗೆ ಚಟ್ಟ…

- Advertisement -
- Advertisement -

70 ವರ್ಷಗಳ ಭಾರತ ರಾಷ್ಟ್ರ ನಿರ್ಮಾಣದ ಇತಿಹಾಸದಲ್ಲಿ ಬಿಎಸ್ಸೆನ್ನೆಲ್‍ಗೆ ತನ್ನದೇ ಆದ ಮಹತ್ವದ ಪಾತ್ರವಿದೆ. ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ, ದೇಶದ ಒಟ್ಟಾರೆ ಆರ್ಥಿಕ ವಾಣಿಜ್ಯ ವಹಿವಾಟುಗಳಿಗೆ ಬಿಸ್ಸೆನ್ನೆಲ್ ನೀಡಿದ ಕೊಡುಗೆ ಅಪಾರವಾದದ್ದು. ಮೂಲೆಮೂಲೆಯ ಹಳ್ಳಿಗಾಡುಗಳನ್ನೂ ಒಳಗೊಂಡು ಇಡೀ ದೇಶಕ್ಕೆ ಸಂಪರ್ಕ ಸೇತುವಾಗಿ ದುಡಿದ ಸಂಸ್ಥೆಯ ಸೇವೆಯನ್ನು ರೂಪಾಯಿಗಳಲ್ಲಿ ಲೆಕ್ಕ ಹಾಕಲಾಗದು. ಇಂಥಾ ಸಂಸ್ಥೆಯನ್ನು ಮಣ್ಣುಗೂಡಿಸಲು ಇದೀಗ ರಂಗ ಸಜ್ಜಾಗಿದೆ.

ಇದು ದಿಢೀರ್ ಸಂಭವಿಸಿದ್ದಲ್ಲ. ಬಹಳ ವ್ಯವಸ್ಥಿತವಾಗಿ ಹಂತಹಂತವಾಗಿ ನಡೆಸಿದ ಷಡ್ಯಂತ್ರ. ಖಾಸಗಿ ಕಂಪನಿಗಳು 4ಜಿ ಸೇವೆ ಒದಗಿಸುತ್ತಿರುವ ಸಂದರ್ಭದಲ್ಲಿ ಬಿಎಸ್ಸೆನ್ನೆಲ್‍ಗೆ 4ಜಿ ಸ್ಪೆಕ್ಟ್ರಮ್ ಮಂಜೂರಾತಿಯೇ ಸಿಗಲಿಲ್ಲವೆಂದರೆ ನಿಮಗೆ ಆಶ್ಚರ್ಯ ಎನಿಸಬಹುದು. ಕುಸಿಯುತ್ತಿರುವ ಸಂಸ್ಥೆಯನ್ನು ಉಳಿಸಿಕೊಳ್ಳಲು ಬಿಸ್ಸೆನ್ನೆಲ್ ನೌಕರರು ಹಲವು ಬಾರಿ ಮುಷ್ಕರ ಹೂಡಿದ್ದಾರೆ. ಮುಷ್ಕರ ಎಂದರೆ ಸಂಬಳ ಭತ್ಯೆ ಜಾಸ್ತಿ ಮಾಡಿ ಎಂದು ಕೇಳುವುದು ಮಾಮೂಲಿ. ಆದರೆ ಬಿಸ್ಸೆನ್ನೆಲ್ ನೌಕರರ ಪ್ರಧಾನ ಬೇಡಿಕೆ ‘4ಜಿ ಸ್ಪೆಕ್ಟ್ರಮ್ ಹಂಚಿಕೆ ಮಾಡಿ – ಬಿಸ್ಸೆನ್ನೆಲ್ ಉಳಿಸಿ’ ಎಂಬುದಾಗಿತ್ತು. ಮುಷ್ಕರ ತೀವ್ರಗೊಂಡ ಸಂದರ್ಭದಲ್ಲಿ ಕೇಂದ್ರದ ಮಂತ್ರಿಗಳು ಹಾಜರಾಗಿ 4ಜಿ ಕೊಡುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ಬೇಡಿಕೆಯನ್ನು ಕಸದಬುಟ್ಟಿಗೆ ಹಾಕಿದ್ದು ಹಳೆ ಸಂಗತಿ.

ಈಗ 5ಜಿ ಟೆಕ್ನಾಲಜಿ ಅಳವಡಿಕೆಗೆ ರಂಗ ಸಜ್ಜಾಗಿರುವ ಹೊತ್ತಿನಲ್ಲಿ ಬಿಸ್ಸೆನ್ನೆಲ್ ಇನ್ನೂ ಓಬೀರಾಯನ ಕಾಲದಲ್ಲೇ ಇದೆ. ಪರಿಣಾಮವಾಗಿ ಸಂಸ್ಥೆಗೆ ಹೊಸ ಗ್ರಾಹಕರು ಸೇರುವುದಿರಲಿ, ಇದ್ದ ಗ್ರಾಹಕರೇ ದೂರಾಗುವಂತಹ ಸನ್ನಿವೇಶ ನಿರ್ಮಿಸಲಾಗಿದೆ. ಇತ್ತೀಚೆಗೆ ಜಿಯೋ ದರ ಸಮರಕ್ಕೆ ಇಳಿದ ಮೇಲಂತೂ ಬಿಸ್ಸೆನ್ನೆಲ್ ಅಸ್ತಿತ್ವವೇ ಪ್ರಶ್ನಾರ್ಹ. ಇತಿಹಾಸದಲ್ಲಿ ಮೊದಲ ಬಾರಿಗೆ ಈಗ ಬಿಸ್ಸೆನ್ನೆಲ್ ಬಳಿ ವೇತನಕ್ಕೂ ಕಾಸಿಲ್ಲ. ಈಗ 50 ವರ್ಷ ಮೇಲ್ಪಟ್ಟ ನೌಕರರ ಸ್ವಯಂನಿವೃತ್ತಿ ಘೋಷಿಸಲಾಗಿದೆ. ನಿವೃತ್ತಿ ವಯಸ್ಸನ್ನು 60 ರಿಂದ 58ಕ್ಕೆ ಇಳಿಸಲಾಗಿದೆ. ಪರಿಣಾಮವಾಗಿ ಸುಮಾರು 54 ಸಾವಿರ ನೌಕರರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

‘ನಷ್ಟದಲ್ಲಿರುವ ಸಂಸ್ಥೆಗೆ ಹಣ ಯಾಕೆ ಕೊಡಬೇಕು?’ ‘ತೆರಿಗೆದಾರರ ಜೇಬಿಗೆ ಕತ್ತರಿ’ ಇತ್ಯಾದಿ ಪಾಂಡಿತ್ಯಪೂರ್ಣ ವಾದಗಳು, ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿವೆ, ಟಿವಿ ಪ್ಯಾನೆಲ್ ಚರ್ಚೆಗಳು ನಡೆದಿವೆ. ಜನಮಾನಸದಲ್ಲಿ ಬಿಸ್ಸೆನ್ನೆಲ್ ಬಗ್ಗೆ ನಕಾರಾತ್ಮಕ ಅಭಿಪ್ರಾಯ ಮೂಡಿಸುವ ಜಾಲವೊಂದು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕೆಲವು ಕಟುಸತ್ಯಗಳನ್ನು ನಾವು ನೆನಪಿನಲ್ಲಿಡಬೇಕು. 2004-05ರಲ್ಲಿ ಇದೇ ಬಿಸ್ಸೆನ್ನೆಲ್ 10,000 ಕೋಟಿ ನಿವ್ವಳ ಲಾಭ ಗಳಿಸಿತ್ತು. 2014, 2015, 2016ನೇ ಸಾಲಿನಲ್ಲಿಯೂ ಅಲ್ಪ ಪ್ರಮಾಣದ ಲಾಭವನ್ನು ದಾಖಲಿಸಿತ್ತು.

2016ರಲ್ಲಿ ಜಿಯೋ ಮಾರುಕಟ್ಟೆ ಪ್ರವೇಶಿಸಿತು. ಸಾಕ್ಷಾತ್ ಭಾರತದ ಪ್ರಧಾನಿಗಳು ಮುಂದೆ ನಿಂತು ಬಿಟ್ಟು ಜಾಹಿರಾತು ನೀಡಿ ಅದನ್ನು ಪ್ರಮೋಟ್ ಮಾಡಿದರು. ಈ ಮಧ್ಯೆ 2017ರಲ್ಲಿ ಬಿಎಸ್ಸೆನ್ನೆಲ್ ನೆಟ್‍ವರ್ಕ್ ಮೇಲೆ ಸೈಬರ್ ದಾಳಿ ನಡೆದು ಲಕ್ಷಾಂತರ ಸಂಪರ್ಕಗಳಿಗೆ ಹಾನಿಯಾಯಿತು. ಇಲ್ಲಿ ಕಾಣದ ಕೈಗಳು ಕೆಲಸ ಮಾಡಿರುವುದು ಸ್ಪಷ್ಟ. ಯಾವಾಗ ಜಿಯೋ ಅಟ್ಟಹಾಸದಿಂದ ಟೆಲಿಕಾಂ ಪ್ರವೇಶಿಸಿ ದರ ಸಮರಕ್ಕಿಳಿಯಿತೋ ಆಗ ಮೊದಲೇ 4ಜಿ ತಂತ್ರಜ್ಞಾನವಿಲ್ಲದೆ ದುರ್ಬಲವಾಗಿದ್ದ ಸಂಸ್ಥೆ ಕುಸಿದುಹೋಯ್ತು. ಇದು ಕೇವಲ ಬಿಸ್ಸೆನ್ನೆಲ್‍ಗೆ ಮಾತ್ರ ಅನ್ವಯಿಸುವಂತದ್ದಲ್ಲ, ವೊಡಾಫೋನ್ ಹಾಗೂ ಏರ್ಟೆಲ್‍ನಂತಹ ಖಾಸಗಿ ಕಂಪನಿಗಳೂ ಕೂಡ ಈ ಅವಧಿಯಲ್ಲಿ ನಷ್ಟ ಅನುಭವಿಸಿವೆ ಎಂಬುದನ್ನು ನಾವು ನೆನಪಿಡಬೇಕು.

ತಮಾಷೆಯೆಂದರೆ ‘ಅಧಿಕ ಸ್ಪೀಡ್ ಮತ್ತು ಕಡಿಮೆ ದರ’ ಎಂಬುದು ಜಿಯೋದ ತಂತ್ರವಾಗಿದ್ದಾಗಲೇ ಬಿಸ್ಸೆನ್ನೆಲ್‍ನ ಆಡಳಿತ ಮಂಡಳಿ ದರಗಳನ್ನು ಏರಿಸಿಬಿಟ್ಟಿತು. ಈ ಕ್ರಮ ಕೂಡ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ತಂತ್ರವೆಂದೇ ವಿಶ್ಲೇಷಿಸಲಾಗುತ್ತಿದೆ. ಮೋದಿ ಸರ್ಕಾರ ತಮ್ಮ ನೆಚ್ಚಿನ ಖಾಸಗಿ ಕೂಟದೊಂದಿಗೆ ಸೇರಿ ನಡೆಸಿದ ಷಡ್ಯಂತ್ರದ ಫಲ ಇದು.

ಕಳೆದ ಏಪ್ರಿಲ್‍ನಲ್ಲಿ ಬಿಎಸ್ಸೆನ್ನೆಲ್ ನೌಕರರ ಸಂಘ ಬಿಡುಗಡೆ ಮಾಡಿದ ಅಂಕಿಅಂಶಗಳು ನಮ್ಮನ್ನು ಬೆಚ್ಚಿಬೀಳಿಸುತ್ತವೆ. ಈಗ ಜಿಯೋ ತನ್ನ 5ಜಿ ಸೇವೆಯ ಗಿಗಾಫೈಬರ್ ಹೆಸರಿನ ಬ್ರಾಡ್ ಬ್ಯಾಂಡ್ ಬಿಡುಗಡೆಗೆ ನಿಂತಿದೆ. ಅಲ್ಲಿಗೆ ಬಿ.ಎಸ್.ಎನ್.ಎಲ್ ಕಥೆ ಏನು? ಜೊತೆಗೆ ತನ್ನ ಖರ್ಚುವೆಚ್ಚಗಳಿಗೆ ಹಾಗೂ ಬಂಡವಾಳ ಹೂಡಿಕೆಗೆ ಬಿಎಸ್ಸೆನ್ನೆಲ್ ಸಾಲ ಪಡೆದುಕೊಳ್ಳಲಾರದಂತೆ ಸರ್ಕಾರ ನಿರ್ಬಂಧಿಸಿದೆಯಂತೆ. ಕಳೆದ ಮಾರ್ಚ್‍ನ ಲೆಕ್ಕಪತ್ರಗಳ ಪ್ರಕಾರ ಟೆಲಿಕಾಂ ವ್ಯವಹಾರದಲ್ಲಿರುವ ಖಾಸಗಿ ಕಂಪನಿಗಳು ಬಿಎಸ್ಸೆನ್ನೆಲ್‍ಗೆ ಹೋಲಿಸಿದರೆ ಭಾರೀ ಸಾಲದಲ್ಲಿದ್ದವು. ವೊಡಾಫೋನ್ ಐಡಿಯಾದ ಸಾಲ 1,20,000 ಕೋಟಿ! ಏರ್ಟೆಲ್‍ನ ಸಾಲ 1,13,000 ಕೋಟಿ! ಇನ್ನೂ ಜಿಯೋದ ಸಾಲ 2 ಲಕ್ಷ ಕೋಟಿಗಳು!! ಬಿಸ್ಸೆನ್ನೆಲ್‍ನ ಸಾಲ 13,900 ಕೋಟಿಗಳು ಮಾತ್ರ.

ಬಿಸ್ಸೆನ್ನೆಲ್ ಆಸ್ತಿ-ಪಾಸ್ತಿಗಳು ದೇಶದ ಮೂಲೆಮೂಲೆಗಳಲ್ಲೂ ಸಾವಿರಾರು ನಗರ, ಪಟ್ಟಣಗಳಲ್ಲಿ ಹರಡಿಕೊಂಡಿವೆ. ದೇಶಾದ್ಯಂತ ಟವರ್‍ಗಳು ಮತ್ತು ಕೇಬಲ್ ಜಾಲವಿದೆ. 2016ರ ಅಧಿಕೃತ ಅಂದಾಜಿನ ಪ್ರಕಾರವೇ ಬಿಸೆನ್ನೆಲ್‍ನ ಮೌಲ್ಯ 70,746 ಕೋಟಿಗಳು. ವಾಸ್ತವದಲ್ಲಿ ಅದರ ಆಸ್ತಿ ಪಾಸ್ತಿಯ ಮಾರುಕಟ್ಟೆ ಮೌಲ್ಯ ಅದಕ್ಕಿಂತ ಎಷ್ಟೋ ಪಟ್ಟು ಅಧಿಕವಿರುತ್ತದೆ. ಇಂಥಾ ಅನುಕೂಲತೆ ಯಾವುದೇ ಖಾಸಗಿ ಕಂಪನಿಗೂ ಇಲ್ಲ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ಬಂಡವಾಳವನ್ನು ಖದೀಮ ಕಾರ್ಪೊರೇಟ್‍ಗಳ ಬಾಯಿಗೆ ಹಾಕುತ್ತಿರುವ ಸರ್ಕಾರ ಬಿಸ್ಸೆನ್ನೆಲ್‍ಗೆ ಸಾಲ ಪಡೆಯಲು ಅನುಮತಿಯನ್ನೇ ಕೊಡಲಿಲ್ಲ!

ಸದ್ಯದಲ್ಲೇ ನಮ್ಮ ಈ ಅಮೂಲ್ಯ ಉದ್ದಿಮೆ ಸಂಸ್ಥೆ ರಕ್ಕಸ ಕಾರ್ಪೊರೇಟ್‍ಗಳ ಬಾಯಿಗೆ ಬೀಳಲಿದೆ. ಬಿಎಸ್ಸೆನ್ನೆಲ್ ಕಬಳಿಸುವ ಈ ಖಾಸಗಿ ದೇಶದ್ರೋಹವನ್ನು ಮರೆಮಾಚಿ ಬೋಪರಾಕ್ ಹಾಕಲು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ವಂದಿಮಾಗಧರೂ ಈಗಾಗಲೇ ಸಜ್ಜಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...