Homeಕರ್ನಾಟಕಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ. 

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರಾಗಿದೆ. ಉಪಚುನಾವಣೆ ದಿನಾಂಕ ನಿಗಧಿಯಾದ ಕೂಡಲೇ ಇವರಿಬ್ಬರ ಜಗಳ ತಾರಕಕ್ಕೇರಿದ್ದು ಮೈತ್ರಿ ಮುಗಿದ ಮಾತು ಎಂಬುದನ್ನು ತೋರಿಸುತ್ತಿದೆ.

ಇದು ನಿನ್ನೆ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಾ ಕೊಟ್ಟ ಹೇಳಿಕೆಗಳಿಂದ ಆರಂಭವಾಯಿತು. “ಮಂಡ್ಯ, ತುಮಕೂರು ಮತ್ತು ಕೋಲಾರದಲ್ಲಿನ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಸಿದ್ದರಾಮಯ್ಯನವರು ಸಾಕಿದ್ದ ಮುದ್ದಿನ ಗಿಳಿಗಳು ಕುಕ್ಕಿದ್ದೇ ಕಾರಣ” ಎಂದು ಎಚ್.ಡಿ.ಕೆ ಹೇಳಿಕೆ ನೀಡಿದ್ದರು.

ಮುಂದುವರೆದು ಮೈಸೂರಿನಲ್ಲಿ ಸಿದ್ದರಾಮಯ್ಯನವರ ಸ್ವಯಂಕೃತ ಅಪರಾಧದಿಂದ ಸೋಲಾಗಿದೆ ಅಷ್ಟೇ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಾನು ಶಕ್ತಿಮೀರಿ ಕೆಲಸ ಮಾಡಿದ್ದೆವು ಆದರೂ ಸಿದ್ದರಾಮಯ್ಯನವರು ಹೊಸಕೋಟೆಯಲ್ಲಿ ಮಾತನಾಡುತ್ತಾ ಮಂಡ್ಯದಲ್ಲಿ ಸ್ವಾಭಿಮಾನಕ್ಕೆ ಗೆಲುವಾಗಿದೆ ಎಂದು ಹೇಳುವ ಮೂಲಕ ನಮ್ಮನ್ನು ಸೋಲಿಸಿದ್ದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಎಚ್.ಡಿ.ಕೆ ಕಿಡಿ ಕಾರಿದ್ದರು.

ಇದಕ್ಕೆ ಇಂದು ಟ್ವಿಟ್ಟರ್ ನಲ್ಲಿ ಉತ್ತರ ನೀಡಿದ್ದ ಸಿದ್ದರಾಮಯ್ಯನವರು, ಹೌದು ಕುಮಾರಸ್ವಾಮಿಯವರೆ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಮತ್ತೆ ತಿರುಗೇಟು ನೀಡಿದ ಎಚ್.ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಗಿಣಿಯೆಂದು ತಪ್ಪು ತಿಳಿದು ಹದ್ದನ್ನು ಅಪ್ಪಿಕೊಂಡಿದ್ದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಸಾವಿರ ಗಿಣಿಗಳನ್ನು ಬೆಳೆಸಿದ್ದೇ ದೇವೇಗೌಡರು. ಅವರಿಗೇ ಆ ಗಿಣಿಗಳು ಹೇಗೆ ಕುಕ್ಕುತ್ತಿವೆ ಎಂದು ನೋಡುತ್ತಿದ್ದೇನೆ.. ಸಿದ್ದರಾಮಯ್ಯನವರು ಸಹ ಕುಕ್ಕುತ್ತಿದ್ದಾರೆ.

ಸಿದ್ದರಾಮಯ್ಯನವರಿಂದ ನಾನು ಮುಖ್ಯಮಂತ್ರಿ ಆಗಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮುಖ್ಯಮಂತ್ರಿ ಆಗಿದ್ದೆ. ನಾನು ಮುಖ್ಯಮಂತ್ರಿ ಆದುದ್ದನ್ನು ಸಿದ್ದರಾಮಯ್ಯನವರು ಸಹಿಸಿಕೊಳ್ಳಲ್ಲಿಲ್ಲ. ನನ್ನನ್ನು ರಾಮನಗರದ ಜನ ಸಾಕಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಕೂಡಲೇ ಈ ಸರ್ಕಾರ ಬೀಳುತ್ತದೆ ಎಂದು ಅವರು ಎಲ್ಲಾ ಕಡೆ ಹೇಳುತ್ತಾ ತಿರುಗಾಡುತ್ತಿದ್ದರು.

ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು, ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು ಎಂದು ಎಚ್.ಡಿ.ಕೆ ಹೇಳಿದ್ದಾರೆ.

ಇದಕ್ಕೆ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ.

ಸನ್ಮಾನ್ಯ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ.

ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ನೀವು, ನಿಮ್ಮ ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಕರ್ತರ ಜೊತೆ ಮಾತನಾಡಿದ ಸಿದ್ದರಾಮಯ್ಯನವರು, “ಕುಮಾರಸ್ವಾಮಿಯವರು ಪ್ರಜ್ಞೆ ಇಟ್ಟುಕೊಂಡು ಮಾತಾಡುತ್ತಾರೆ ಅನ್ನಿಸುತ್ತಿಲ್ಲ. ಜಿ.ಟಿ ದೇವೇಗೌಡ ಯಾವ ಪಾರ್ಟಿ? ಅವರೇ ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಓಟು ಹಾಕಿ ಎಂದು ಕುಮಾರಸ್ವಾಮಿಯವರೆ ಹೇಳಿದ್ದಾರೆ ಎಂದಿದ್ದರು. ಇದರ ಏನರ್ಥ” ಎಂದು ಟೀಕಿಸಿದ್ದಾರೆ.

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...