Homeಕರ್ನಾಟಕಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ. 

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರಾಗಿದೆ. ಉಪಚುನಾವಣೆ ದಿನಾಂಕ ನಿಗಧಿಯಾದ ಕೂಡಲೇ ಇವರಿಬ್ಬರ ಜಗಳ ತಾರಕಕ್ಕೇರಿದ್ದು ಮೈತ್ರಿ ಮುಗಿದ ಮಾತು ಎಂಬುದನ್ನು ತೋರಿಸುತ್ತಿದೆ.

ಇದು ನಿನ್ನೆ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಾ ಕೊಟ್ಟ ಹೇಳಿಕೆಗಳಿಂದ ಆರಂಭವಾಯಿತು. “ಮಂಡ್ಯ, ತುಮಕೂರು ಮತ್ತು ಕೋಲಾರದಲ್ಲಿನ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಸಿದ್ದರಾಮಯ್ಯನವರು ಸಾಕಿದ್ದ ಮುದ್ದಿನ ಗಿಳಿಗಳು ಕುಕ್ಕಿದ್ದೇ ಕಾರಣ” ಎಂದು ಎಚ್.ಡಿ.ಕೆ ಹೇಳಿಕೆ ನೀಡಿದ್ದರು.

ಮುಂದುವರೆದು ಮೈಸೂರಿನಲ್ಲಿ ಸಿದ್ದರಾಮಯ್ಯನವರ ಸ್ವಯಂಕೃತ ಅಪರಾಧದಿಂದ ಸೋಲಾಗಿದೆ ಅಷ್ಟೇ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಾನು ಶಕ್ತಿಮೀರಿ ಕೆಲಸ ಮಾಡಿದ್ದೆವು ಆದರೂ ಸಿದ್ದರಾಮಯ್ಯನವರು ಹೊಸಕೋಟೆಯಲ್ಲಿ ಮಾತನಾಡುತ್ತಾ ಮಂಡ್ಯದಲ್ಲಿ ಸ್ವಾಭಿಮಾನಕ್ಕೆ ಗೆಲುವಾಗಿದೆ ಎಂದು ಹೇಳುವ ಮೂಲಕ ನಮ್ಮನ್ನು ಸೋಲಿಸಿದ್ದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಎಚ್.ಡಿ.ಕೆ ಕಿಡಿ ಕಾರಿದ್ದರು.

ಇದಕ್ಕೆ ಇಂದು ಟ್ವಿಟ್ಟರ್ ನಲ್ಲಿ ಉತ್ತರ ನೀಡಿದ್ದ ಸಿದ್ದರಾಮಯ್ಯನವರು, ಹೌದು ಕುಮಾರಸ್ವಾಮಿಯವರೆ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಮತ್ತೆ ತಿರುಗೇಟು ನೀಡಿದ ಎಚ್.ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಗಿಣಿಯೆಂದು ತಪ್ಪು ತಿಳಿದು ಹದ್ದನ್ನು ಅಪ್ಪಿಕೊಂಡಿದ್ದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಸಾವಿರ ಗಿಣಿಗಳನ್ನು ಬೆಳೆಸಿದ್ದೇ ದೇವೇಗೌಡರು. ಅವರಿಗೇ ಆ ಗಿಣಿಗಳು ಹೇಗೆ ಕುಕ್ಕುತ್ತಿವೆ ಎಂದು ನೋಡುತ್ತಿದ್ದೇನೆ.. ಸಿದ್ದರಾಮಯ್ಯನವರು ಸಹ ಕುಕ್ಕುತ್ತಿದ್ದಾರೆ.

ಸಿದ್ದರಾಮಯ್ಯನವರಿಂದ ನಾನು ಮುಖ್ಯಮಂತ್ರಿ ಆಗಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮುಖ್ಯಮಂತ್ರಿ ಆಗಿದ್ದೆ. ನಾನು ಮುಖ್ಯಮಂತ್ರಿ ಆದುದ್ದನ್ನು ಸಿದ್ದರಾಮಯ್ಯನವರು ಸಹಿಸಿಕೊಳ್ಳಲ್ಲಿಲ್ಲ. ನನ್ನನ್ನು ರಾಮನಗರದ ಜನ ಸಾಕಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಕೂಡಲೇ ಈ ಸರ್ಕಾರ ಬೀಳುತ್ತದೆ ಎಂದು ಅವರು ಎಲ್ಲಾ ಕಡೆ ಹೇಳುತ್ತಾ ತಿರುಗಾಡುತ್ತಿದ್ದರು.

ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು, ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು ಎಂದು ಎಚ್.ಡಿ.ಕೆ ಹೇಳಿದ್ದಾರೆ.

ಇದಕ್ಕೆ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ.

ಸನ್ಮಾನ್ಯ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ.

ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ನೀವು, ನಿಮ್ಮ ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಕರ್ತರ ಜೊತೆ ಮಾತನಾಡಿದ ಸಿದ್ದರಾಮಯ್ಯನವರು, “ಕುಮಾರಸ್ವಾಮಿಯವರು ಪ್ರಜ್ಞೆ ಇಟ್ಟುಕೊಂಡು ಮಾತಾಡುತ್ತಾರೆ ಅನ್ನಿಸುತ್ತಿಲ್ಲ. ಜಿ.ಟಿ ದೇವೇಗೌಡ ಯಾವ ಪಾರ್ಟಿ? ಅವರೇ ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಓಟು ಹಾಕಿ ಎಂದು ಕುಮಾರಸ್ವಾಮಿಯವರೆ ಹೇಳಿದ್ದಾರೆ ಎಂದಿದ್ದರು. ಇದರ ಏನರ್ಥ” ಎಂದು ಟೀಕಿಸಿದ್ದಾರೆ.

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...