Homeಕರ್ನಾಟಕಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ. 

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರಾಗಿದೆ. ಉಪಚುನಾವಣೆ ದಿನಾಂಕ ನಿಗಧಿಯಾದ ಕೂಡಲೇ ಇವರಿಬ್ಬರ ಜಗಳ ತಾರಕಕ್ಕೇರಿದ್ದು ಮೈತ್ರಿ ಮುಗಿದ ಮಾತು ಎಂಬುದನ್ನು ತೋರಿಸುತ್ತಿದೆ.

ಇದು ನಿನ್ನೆ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಾ ಕೊಟ್ಟ ಹೇಳಿಕೆಗಳಿಂದ ಆರಂಭವಾಯಿತು. “ಮಂಡ್ಯ, ತುಮಕೂರು ಮತ್ತು ಕೋಲಾರದಲ್ಲಿನ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಸಿದ್ದರಾಮಯ್ಯನವರು ಸಾಕಿದ್ದ ಮುದ್ದಿನ ಗಿಳಿಗಳು ಕುಕ್ಕಿದ್ದೇ ಕಾರಣ” ಎಂದು ಎಚ್.ಡಿ.ಕೆ ಹೇಳಿಕೆ ನೀಡಿದ್ದರು.

ಮುಂದುವರೆದು ಮೈಸೂರಿನಲ್ಲಿ ಸಿದ್ದರಾಮಯ್ಯನವರ ಸ್ವಯಂಕೃತ ಅಪರಾಧದಿಂದ ಸೋಲಾಗಿದೆ ಅಷ್ಟೇ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಾನು ಶಕ್ತಿಮೀರಿ ಕೆಲಸ ಮಾಡಿದ್ದೆವು ಆದರೂ ಸಿದ್ದರಾಮಯ್ಯನವರು ಹೊಸಕೋಟೆಯಲ್ಲಿ ಮಾತನಾಡುತ್ತಾ ಮಂಡ್ಯದಲ್ಲಿ ಸ್ವಾಭಿಮಾನಕ್ಕೆ ಗೆಲುವಾಗಿದೆ ಎಂದು ಹೇಳುವ ಮೂಲಕ ನಮ್ಮನ್ನು ಸೋಲಿಸಿದ್ದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಎಚ್.ಡಿ.ಕೆ ಕಿಡಿ ಕಾರಿದ್ದರು.

ಇದಕ್ಕೆ ಇಂದು ಟ್ವಿಟ್ಟರ್ ನಲ್ಲಿ ಉತ್ತರ ನೀಡಿದ್ದ ಸಿದ್ದರಾಮಯ್ಯನವರು, ಹೌದು ಕುಮಾರಸ್ವಾಮಿಯವರೆ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಮತ್ತೆ ತಿರುಗೇಟು ನೀಡಿದ ಎಚ್.ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಗಿಣಿಯೆಂದು ತಪ್ಪು ತಿಳಿದು ಹದ್ದನ್ನು ಅಪ್ಪಿಕೊಂಡಿದ್ದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಸಾವಿರ ಗಿಣಿಗಳನ್ನು ಬೆಳೆಸಿದ್ದೇ ದೇವೇಗೌಡರು. ಅವರಿಗೇ ಆ ಗಿಣಿಗಳು ಹೇಗೆ ಕುಕ್ಕುತ್ತಿವೆ ಎಂದು ನೋಡುತ್ತಿದ್ದೇನೆ.. ಸಿದ್ದರಾಮಯ್ಯನವರು ಸಹ ಕುಕ್ಕುತ್ತಿದ್ದಾರೆ.

ಸಿದ್ದರಾಮಯ್ಯನವರಿಂದ ನಾನು ಮುಖ್ಯಮಂತ್ರಿ ಆಗಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮುಖ್ಯಮಂತ್ರಿ ಆಗಿದ್ದೆ. ನಾನು ಮುಖ್ಯಮಂತ್ರಿ ಆದುದ್ದನ್ನು ಸಿದ್ದರಾಮಯ್ಯನವರು ಸಹಿಸಿಕೊಳ್ಳಲ್ಲಿಲ್ಲ. ನನ್ನನ್ನು ರಾಮನಗರದ ಜನ ಸಾಕಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಕೂಡಲೇ ಈ ಸರ್ಕಾರ ಬೀಳುತ್ತದೆ ಎಂದು ಅವರು ಎಲ್ಲಾ ಕಡೆ ಹೇಳುತ್ತಾ ತಿರುಗಾಡುತ್ತಿದ್ದರು.

ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು, ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು ಎಂದು ಎಚ್.ಡಿ.ಕೆ ಹೇಳಿದ್ದಾರೆ.

ಇದಕ್ಕೆ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ.

ಸನ್ಮಾನ್ಯ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ.

ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ನೀವು, ನಿಮ್ಮ ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಕರ್ತರ ಜೊತೆ ಮಾತನಾಡಿದ ಸಿದ್ದರಾಮಯ್ಯನವರು, “ಕುಮಾರಸ್ವಾಮಿಯವರು ಪ್ರಜ್ಞೆ ಇಟ್ಟುಕೊಂಡು ಮಾತಾಡುತ್ತಾರೆ ಅನ್ನಿಸುತ್ತಿಲ್ಲ. ಜಿ.ಟಿ ದೇವೇಗೌಡ ಯಾವ ಪಾರ್ಟಿ? ಅವರೇ ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಓಟು ಹಾಕಿ ಎಂದು ಕುಮಾರಸ್ವಾಮಿಯವರೆ ಹೇಳಿದ್ದಾರೆ ಎಂದಿದ್ದರು. ಇದರ ಏನರ್ಥ” ಎಂದು ಟೀಕಿಸಿದ್ದಾರೆ.

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...