Homeಕರ್ನಾಟಕಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಯಾರು ಗಿಳಿ, ಯಾರು ಹದ್ದು? ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರು..

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ. 

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದು-ಎಚ್.ಡಿ.ಕೆ ನಡುವೆ ಗಲಾಟೆ ಜೋರಾಗಿದೆ. ಉಪಚುನಾವಣೆ ದಿನಾಂಕ ನಿಗಧಿಯಾದ ಕೂಡಲೇ ಇವರಿಬ್ಬರ ಜಗಳ ತಾರಕಕ್ಕೇರಿದ್ದು ಮೈತ್ರಿ ಮುಗಿದ ಮಾತು ಎಂಬುದನ್ನು ತೋರಿಸುತ್ತಿದೆ.

ಇದು ನಿನ್ನೆ ಕುಮಾರಸ್ವಾಮಿಯವರು ಬೆಂಗಳೂರಿನಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಾ ಕೊಟ್ಟ ಹೇಳಿಕೆಗಳಿಂದ ಆರಂಭವಾಯಿತು. “ಮಂಡ್ಯ, ತುಮಕೂರು ಮತ್ತು ಕೋಲಾರದಲ್ಲಿನ ಮೈತ್ರಿ ಅಭ್ಯರ್ಥಿಗಳ ಸೋಲಿಗೆ ಸಿದ್ದರಾಮಯ್ಯನವರು ಸಾಕಿದ್ದ ಮುದ್ದಿನ ಗಿಳಿಗಳು ಕುಕ್ಕಿದ್ದೇ ಕಾರಣ” ಎಂದು ಎಚ್.ಡಿ.ಕೆ ಹೇಳಿಕೆ ನೀಡಿದ್ದರು.

ಮುಂದುವರೆದು ಮೈಸೂರಿನಲ್ಲಿ ಸಿದ್ದರಾಮಯ್ಯನವರ ಸ್ವಯಂಕೃತ ಅಪರಾಧದಿಂದ ಸೋಲಾಗಿದೆ ಅಷ್ಟೇ. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಾನು ಶಕ್ತಿಮೀರಿ ಕೆಲಸ ಮಾಡಿದ್ದೆವು ಆದರೂ ಸಿದ್ದರಾಮಯ್ಯನವರು ಹೊಸಕೋಟೆಯಲ್ಲಿ ಮಾತನಾಡುತ್ತಾ ಮಂಡ್ಯದಲ್ಲಿ ಸ್ವಾಭಿಮಾನಕ್ಕೆ ಗೆಲುವಾಗಿದೆ ಎಂದು ಹೇಳುವ ಮೂಲಕ ನಮ್ಮನ್ನು ಸೋಲಿಸಿದ್ದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಎಚ್.ಡಿ.ಕೆ ಕಿಡಿ ಕಾರಿದ್ದರು.

ಇದಕ್ಕೆ ಇಂದು ಟ್ವಿಟ್ಟರ್ ನಲ್ಲಿ ಉತ್ತರ ನೀಡಿದ್ದ ಸಿದ್ದರಾಮಯ್ಯನವರು, ಹೌದು ಕುಮಾರಸ್ವಾಮಿಯವರೆ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಮತ್ತೆ ತಿರುಗೇಟು ನೀಡಿದ ಎಚ್.ಡಿ ಕುಮಾರಸ್ವಾಮಿಯವರು ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಗಿಣಿಯೆಂದು ತಪ್ಪು ತಿಳಿದು ಹದ್ದನ್ನು ಅಪ್ಪಿಕೊಂಡಿದ್ದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಸಾವಿರ ಗಿಣಿಗಳನ್ನು ಬೆಳೆಸಿದ್ದೇ ದೇವೇಗೌಡರು. ಅವರಿಗೇ ಆ ಗಿಣಿಗಳು ಹೇಗೆ ಕುಕ್ಕುತ್ತಿವೆ ಎಂದು ನೋಡುತ್ತಿದ್ದೇನೆ.. ಸಿದ್ದರಾಮಯ್ಯನವರು ಸಹ ಕುಕ್ಕುತ್ತಿದ್ದಾರೆ.

ಸಿದ್ದರಾಮಯ್ಯನವರಿಂದ ನಾನು ಮುಖ್ಯಮಂತ್ರಿ ಆಗಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮುಖ್ಯಮಂತ್ರಿ ಆಗಿದ್ದೆ. ನಾನು ಮುಖ್ಯಮಂತ್ರಿ ಆದುದ್ದನ್ನು ಸಿದ್ದರಾಮಯ್ಯನವರು ಸಹಿಸಿಕೊಳ್ಳಲ್ಲಿಲ್ಲ. ನನ್ನನ್ನು ರಾಮನಗರದ ಜನ ಸಾಕಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ಕೂಡಲೇ ಈ ಸರ್ಕಾರ ಬೀಳುತ್ತದೆ ಎಂದು ಅವರು ಎಲ್ಲಾ ಕಡೆ ಹೇಳುತ್ತಾ ತಿರುಗಾಡುತ್ತಿದ್ದರು.

ಸಿದ್ದರಾಮಯ್ಯನವರು ಸಾಕಿದ ಗಿಳಿಯಲ್ಲ ನಾನು, ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು ಎಂದು ಎಚ್.ಡಿ.ಕೆ ಹೇಳಿದ್ದಾರೆ.

ಇದಕ್ಕೆ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ.

ಸನ್ಮಾನ್ಯ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ? ನಿಮ್ಮನ್ನು ಸಾಕಿದ್ದು ದೇವೇಗೌಡರು, ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ.

ಕುಮಾರಸ್ವಾಮಿ ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ‌ ನೀವು, ನಿಮ್ಮ ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಕರ್ತರ ಜೊತೆ ಮಾತನಾಡಿದ ಸಿದ್ದರಾಮಯ್ಯನವರು, “ಕುಮಾರಸ್ವಾಮಿಯವರು ಪ್ರಜ್ಞೆ ಇಟ್ಟುಕೊಂಡು ಮಾತಾಡುತ್ತಾರೆ ಅನ್ನಿಸುತ್ತಿಲ್ಲ. ಜಿ.ಟಿ ದೇವೇಗೌಡ ಯಾವ ಪಾರ್ಟಿ? ಅವರೇ ಮೈಸೂರಿನಲ್ಲಿ, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ ಓಟು ಹಾಕಿ ಎಂದು ಕುಮಾರಸ್ವಾಮಿಯವರೆ ಹೇಳಿದ್ದಾರೆ ಎಂದಿದ್ದರು. ಇದರ ಏನರ್ಥ” ಎಂದು ಟೀಕಿಸಿದ್ದಾರೆ.

ಒಟ್ಟಿನಲ್ಲಿ ಇವರಿಬ್ಬರ ನಡುವೆ ನಡೆಯುತ್ತಿರು ವಾದ-ಪ್ರತಿವಾದಗಳು ಎಲ್ಲಿಗೆ ಮುಟ್ಟುತ್ತವೆ ಎಂದು ತಿಳಿಯುತ್ತಿಲ್ಲ. ಆದರೆ ಉಪಚುನಾವಣೆಯಲ್ಲಿ ಮೈತ್ರಿ ಸಾಧ್ಯವಿಲ್ಲ ಎಂಬುದನ್ನು ಸಾರಿ ಹೇಳುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...