Homeಕರ್ನಾಟಕ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ?

- Advertisement -
- Advertisement -

ಆತ್ಮೀಯ ಸ್ನೇಹಿತರೆ,

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ BBMP ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ.‌ ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ BBMP ಕೊವಿಡ್ ಕೇರ್ ಸೆಂಟರ್‌ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ.‌

ವಾರ್ ರೂಮ್ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ.‌ ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ICU ಗಳನ್ನು ಇಲ್ಲಿ ಹಾಕಿಸಿದ್ದೇನೆ.
ನಾನು ಹೇಳ ಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೊವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್‌ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ.‌ ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ.‌

ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ.
ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ.‌ ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Iddaddu idda Haage Heli ddeera
    Sarfaraz ravre Satya Yendigu Satya
    Satyakke Jayawagali.
    Bjp Communal Mind
    Kelsa Maadakke Nalayakku
    Kelsa Maadu vavrannu kandre Tika uri

  2. ಬಿಜೆಪಿ ಯವರು ಹುಚ್ಚರಾಗಿದ್ದರೆ ಇವರ ಮಾತಿನಲ್ಲಿ ಹಿಡಿತ ಇಲ್ಲ ನೀವು ತಲೆ ಕೆಡಿಸಿ ಕೊಳ್ಳಬೇಡಿ ಸರ್ ಅಲ್ಲ ಮೇಲೆ ನಂಬಿಕೆ ಇರಲಿ

  3. ಸರ್ಫರಾಜ್ ಕಾನ್ ರವರೆ, ನಿಮ್ಮ ವಿಚಾರದಲ್ಲಿ ಕೋಮುವಾದಿಗಳು ಅವರ ಜಾಯಮಾನಕ್ಕೆ ತಕ್ಕಂತೆ ವರ್ತಿಸಿದ್ದಾರೆ, ನೊಂದುಕೊಳ್ಳಬೇಡಿ. ಮಾನವೀಯತೆಗೆ ಬೆಲೆ ಕೊಡುವ ನಿಮ್ಮ ಕೆಲಸವನ್ನು ಮುಂದುವರೆಸಿ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...