Homeಕರ್ನಾಟಕ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ?

- Advertisement -
- Advertisement -

ಆತ್ಮೀಯ ಸ್ನೇಹಿತರೆ,

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ BBMP ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ.‌ ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ BBMP ಕೊವಿಡ್ ಕೇರ್ ಸೆಂಟರ್‌ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ.‌

ವಾರ್ ರೂಮ್ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ.‌ ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ICU ಗಳನ್ನು ಇಲ್ಲಿ ಹಾಕಿಸಿದ್ದೇನೆ.
ನಾನು ಹೇಳ ಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೊವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್‌ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ.‌ ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ.‌

ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ.
ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ.‌ ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Iddaddu idda Haage Heli ddeera
    Sarfaraz ravre Satya Yendigu Satya
    Satyakke Jayawagali.
    Bjp Communal Mind
    Kelsa Maadakke Nalayakku
    Kelsa Maadu vavrannu kandre Tika uri

  2. ಬಿಜೆಪಿ ಯವರು ಹುಚ್ಚರಾಗಿದ್ದರೆ ಇವರ ಮಾತಿನಲ್ಲಿ ಹಿಡಿತ ಇಲ್ಲ ನೀವು ತಲೆ ಕೆಡಿಸಿ ಕೊಳ್ಳಬೇಡಿ ಸರ್ ಅಲ್ಲ ಮೇಲೆ ನಂಬಿಕೆ ಇರಲಿ

  3. ಸರ್ಫರಾಜ್ ಕಾನ್ ರವರೆ, ನಿಮ್ಮ ವಿಚಾರದಲ್ಲಿ ಕೋಮುವಾದಿಗಳು ಅವರ ಜಾಯಮಾನಕ್ಕೆ ತಕ್ಕಂತೆ ವರ್ತಿಸಿದ್ದಾರೆ, ನೊಂದುಕೊಳ್ಳಬೇಡಿ. ಮಾನವೀಯತೆಗೆ ಬೆಲೆ ಕೊಡುವ ನಿಮ್ಮ ಕೆಲಸವನ್ನು ಮುಂದುವರೆಸಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...