Homeಕರ್ನಾಟಕ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ?

- Advertisement -
- Advertisement -

ಆತ್ಮೀಯ ಸ್ನೇಹಿತರೆ,

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ BBMP ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ.‌ ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ BBMP ಕೊವಿಡ್ ಕೇರ್ ಸೆಂಟರ್‌ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ.‌

ವಾರ್ ರೂಮ್ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ.‌ ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ICU ಗಳನ್ನು ಇಲ್ಲಿ ಹಾಕಿಸಿದ್ದೇನೆ.
ನಾನು ಹೇಳ ಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೊವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್‌ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ.‌ ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ.‌

ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ.
ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ.‌ ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

4 COMMENTS

  1. Iddaddu idda Haage Heli ddeera
    Sarfaraz ravre Satya Yendigu Satya
    Satyakke Jayawagali.
    Bjp Communal Mind
    Kelsa Maadakke Nalayakku
    Kelsa Maadu vavrannu kandre Tika uri

  2. ಬಿಜೆಪಿ ಯವರು ಹುಚ್ಚರಾಗಿದ್ದರೆ ಇವರ ಮಾತಿನಲ್ಲಿ ಹಿಡಿತ ಇಲ್ಲ ನೀವು ತಲೆ ಕೆಡಿಸಿ ಕೊಳ್ಳಬೇಡಿ ಸರ್ ಅಲ್ಲ ಮೇಲೆ ನಂಬಿಕೆ ಇರಲಿ

  3. ಸರ್ಫರಾಜ್ ಕಾನ್ ರವರೆ, ನಿಮ್ಮ ವಿಚಾರದಲ್ಲಿ ಕೋಮುವಾದಿಗಳು ಅವರ ಜಾಯಮಾನಕ್ಕೆ ತಕ್ಕಂತೆ ವರ್ತಿಸಿದ್ದಾರೆ, ನೊಂದುಕೊಳ್ಳಬೇಡಿ. ಮಾನವೀಯತೆಗೆ ಬೆಲೆ ಕೊಡುವ ನಿಮ್ಮ ಕೆಲಸವನ್ನು ಮುಂದುವರೆಸಿ.

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...