Homeಕರ್ನಾಟಕ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ?

- Advertisement -
- Advertisement -

ಆತ್ಮೀಯ ಸ್ನೇಹಿತರೆ,

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ BBMP ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ.‌ ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ BBMP ಕೊವಿಡ್ ಕೇರ್ ಸೆಂಟರ್‌ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ.‌

ವಾರ್ ರೂಮ್ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ.‌ ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ICU ಗಳನ್ನು ಇಲ್ಲಿ ಹಾಕಿಸಿದ್ದೇನೆ.
ನಾನು ಹೇಳ ಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೊವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್‌ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ.‌ ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ.‌

ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ.
ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ.‌ ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Iddaddu idda Haage Heli ddeera
    Sarfaraz ravre Satya Yendigu Satya
    Satyakke Jayawagali.
    Bjp Communal Mind
    Kelsa Maadakke Nalayakku
    Kelsa Maadu vavrannu kandre Tika uri

  2. ಬಿಜೆಪಿ ಯವರು ಹುಚ್ಚರಾಗಿದ್ದರೆ ಇವರ ಮಾತಿನಲ್ಲಿ ಹಿಡಿತ ಇಲ್ಲ ನೀವು ತಲೆ ಕೆಡಿಸಿ ಕೊಳ್ಳಬೇಡಿ ಸರ್ ಅಲ್ಲ ಮೇಲೆ ನಂಬಿಕೆ ಇರಲಿ

  3. ಸರ್ಫರಾಜ್ ಕಾನ್ ರವರೆ, ನಿಮ್ಮ ವಿಚಾರದಲ್ಲಿ ಕೋಮುವಾದಿಗಳು ಅವರ ಜಾಯಮಾನಕ್ಕೆ ತಕ್ಕಂತೆ ವರ್ತಿಸಿದ್ದಾರೆ, ನೊಂದುಕೊಳ್ಳಬೇಡಿ. ಮಾನವೀಯತೆಗೆ ಬೆಲೆ ಕೊಡುವ ನಿಮ್ಮ ಕೆಲಸವನ್ನು ಮುಂದುವರೆಸಿ.

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...