Homeಮುಖಪುಟಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ - ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ – ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದ 5,600ಕ್ಕೂ ಹೆಚ್ಚು ಜನರು ಇಸ್ರೇಲ್‌ನಲ್ಲಿ ನಿರ್ಮಾಣ ಕಾರ್ಯದ ಉದ್ಯೋಗಿಯಾಗಿದ್ದಾರೆ. ಆದರೆ ಮುಖ್ಯಮಂತ್ರಿಯ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಜನರನ್ನು ಯುದ್ಧ ವಲಯಕ್ಕೆ ಕಳುಹಿಸುವುದನ್ನು ಸಾಧನೆ ಎಂದು ಹೇಗೆ ಉಲ್ಲೇಖಿಸುತ್ತೀರಿ ಎಂದು ಪ್ರಶ್ನಿಸಿವೆ. ಯುದ್ಧ ಪೀಡಿತ

ಉತ್ತರ ಪ್ರದೇಶ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಆದಿತ್ಯನಾಥ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉಲ್ಲೇಖಿಸಿ, “ನಾವು ನಮ್ಮ ಯುವಕರನ್ನು ಇಸ್ರೇಲ್‌ಗೆ ಅವಕಾಶಗಳಿಗಾಗಿ ಕಳುಹಿಸುತ್ತಿರುವಾಗ, ನಿನ್ನೆ ಕಾಂಗ್ರೆಸ್ ನಾಯಕರೊಬ್ಬರು ಪ್ಯಾಲೆಸ್ತೀನ್ ಚೀಲವನ್ನು ಹಿಡಿದುಕೊಂಡು ಸಂಸತ್ತಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.” ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವವರಿಗೆ ಉಚಿತ ಊಟ ಮತ್ತು ವಸತಿ, ಜೊತೆಗೆ ಮಾಸಿಕ 1.5 ಲಕ್ಷ ರೂಪಾಯಿ ಸಂಬಳ ಸಿಗುತ್ತದೆ ಎಂದು ಆದಿತ್ಯನಾಥ್ ಹೇಳಿದ್ದು, ಜೊತೆಗೆ “ಸುರಕ್ಷತೆಯ ಸಂಪೂರ್ಣ ಗ್ಯಾರಂಟಿಯೂ ಇದೆ” ಎಂದು ಅವರು ಹೇಳಿದ್ದಾರೆ. ಈ ಕಾರ್ಮಿಕರು ಮನೆಗೆ ಹಣವನ್ನು ಕಳುಹಿಸಿದಾಗ ಅದು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುತ್ತದೆ ಎಂದು ಅವರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದಲ್ಲಿ ಕಾರ್ಮಿಕರು ಕೇವಲ 20,000 ರಿಂದ 30,000 ರೂ.ಗಳವರೆಗೆ ಗಳಿಸುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದ ಕಡಿಮೆ ತಲಾ ಆದಾಯಕ್ಕೆ ಹಿಂದಿನ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇಸ್ರೇಲಿ ಅಧಿಕಾರಿಗಳ ತಂಡವು ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ರಾಜ್ಯದಿಂದ ಹೆಚ್ಚಿನ ಯುವಕರನ್ನು ನೇಮಿಸಿಕೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿದೆ ಎಂದು ಹೇಳಿದ ಆದಿತ್ಯನಾಥ್ , ಅವರ “ಅತ್ಯುತ್ತಮ ಕೆಲಸದ ನೀತಿ ಮತ್ತು ಕೌಶಲ್ಯ” ವನ್ನು ಶ್ಲಾಘಿಸಿದ್ದಾರೆ.

ಕಳೆದ ವರ್ಷ 2023ರ ಅಕ್ಟೋಬರ್‌ನಲ್ಲಿ ಗಾಜಾದ ಮೇಲೆ ಇಸ್ರೇಲ್‌ನ ಯುದ್ಧ ಪ್ರಾರಂಭವಾದ ನಂತರ ಪ್ಯಾಲೆಸ್ತೀನಿ ಕಾರ್ಮಿಕರ ಬದಲು ಸುಮಾರು 12,000 ಭಾರತೀಯ ಕಾರ್ಮಿಕರನ್ನು ಇಸ್ರೇಲ್ ನೇಮಿಸಿಕೊಂಡಿದೆ. ಒಟ್ಟು ಸುಮಾರು 90,000 ಪ್ಯಾಲೆಸ್ಟೀನಿಯನ್ನರನ್ನು ಬದಲಿಸಿ ಅಲ್ಲಿಗೆ ವಿದೇಶಿ ಉದ್ಯೋಗಿಗಳನ್ನು ಇಸ್ರೇಲ್ ನೇಮಿಸಿಕೊಂಡಿತ್ತು. ಹಾಗಾಗಿ ನವೆಂಬರ್‌ನಲ್ಲಿ ನೇಮಕಾತಿ ಅಭಿಯಾನವನ್ನು ನಡೆಸಲು ಭಾರತದೊಂದಿಗೆ ಇಸ್ರೇಲ್‌ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು.

ನೇಮಕಗೊಂಡ ಕಾರ್ಮಿಕರಲ್ಲಿ, ಅಗತ್ಯವಿರುವ ಕೌಶಲ್ಯಗಳ ಕೊರತೆ ಮತ್ತು ಭಾಷಾ ಅಡೆತಡೆಗಳನ್ನು ಎದುರಿಸಿದ ಕಾರಣಕ್ಕೆ ಸುಮಾರು 220 ಜನರನ್ನು ಇಸ್ರೇಲ್‌ನಿಂದ ವಾಪಸ್ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನವೆಂಬರ್‌ನಲ್ಲಿ ದೃಢಪಡಿಸಿದೆ. ಭಾರತಕ್ಕೆ ಮರಳಬೇಕಾದ ಕಾರ್ಮಿಕರ ಸಂಖ್ಯೆ 500 ರಿಂದ 600 ರಷ್ಟಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಕಾರ್ಮಿಕ ಏಜೆನ್ಸಿಗಳನ್ನು ಉಲ್ಲೇಖಿಸಿ ವರದಿ ಮಾಡಿತ್ತು. ಹಿಂದಿರುಗಿದವರಲ್ಲಿ ಹೆಚ್ಚಿನವರು ಸರ್ಕಾರದ ಮೂಲಕ ನೇಮಕಗೊಂಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಕಾರ್ಮಿಕರಿಗೆ ತಿಂಗಳಿಗೆ 1.37 ಲಕ್ಷ ರೂ.ನಿಂದ 1.92 ಲಕ್ಷ ರೂ.ಗಳ ವರೆಗೆ ಗಳಿಸುವ ನಿರೀಕ್ಷೆಯಿದ್ದು, ಹಾಗಾಗಿ ಜನರು ಇಸ್ರೇಲ್‌ನಲ್ಲಿ ಕೆಲಸ ಹುಡುಕಲು ಮುಂದಾಗಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. “ನಿರುದ್ಯೋಗವು ಇಲ್ಲಿ ನಮ್ಮನ್ನು ಕೊಲ್ಲುತ್ತಿದೆ. ನಾನು ದಿನಕ್ಕೆ ಕೇವಲ 500 ರೂ ಗಳಿಸುತ್ತೇನೆ ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವಾಗ, ಇಲ್ಲಿನ ಉದ್ಯೋಗದಿಂದ ಬದುಕುವುದು ಅಸಾಧ್ಯ.” ಎಂದು ಕೆಲಸಗಾರರೊಬ್ಬರು ಈ ಹಿಂದೆ ಹೇಳಿದ್ದರು. ಯುದ್ಧ ಪೀಡಿತ

ಅವಮಾನದ ವಿಷಯ, ಹೆಮ್ಮೆಯಲ್ಲ: ಪ್ರಿಯಾಂಕಾ ವಾದ್ರಾ

ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ಯುದ್ಧ ಪೀಡಿತ ದೇಶದಲ್ಲಿ ಕೆಲಸ ಮಾಡಲು ಯುವಕರನ್ನು ಕಳುಹಿಸುವುದು “ಬೆನ್ನು ತಟ್ಟಿಕೊಳ್ಳುವ ಸಾಧನೆಯಲ್ಲ” ಬದಲಾಗಿ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ನಿರುದ್ಯೋಗದ ಸ್ಥಿತಿಯ ಬಗ್ಗೆ ಅಥವಾ ಯುವಜನರು ಮತ್ತು ಅವರ ಕುಟುಂಬದ ನೋವಿನ ಬಗ್ಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಯುದ್ಧದ ನಡುವೆ ಇಸ್ರೇಲ್‌ನಲ್ಲಿ ಕಾರ್ಮಿಕರು ಬಂಕರ್‌ಗಳಲ್ಲಿ ಅಡಗಿಕೊಳ್ಳಬೇಕಾಗಿತ್ತು ಮತ್ತು ಅವರನ್ನು ನೇಮಕ ಮಾಡಿಕೊಂಡ ಕಂಪನಿಗಳಿಂದ ಅವರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ವಾದ್ರಾ ವರದಿಗಳನ್ನು ಉಲ್ಲೇಖಿಸಿದ್ದಾರೆ. “ಅವರ ಕುಟುಂಬಗಳು ಯಾವಾಗಲೂ ಭಯಭೀತರಾಗಿದ್ದಾರೆ. ನಮ್ಮ ಯುವಕರು ಉದ್ಯೋಗಕ್ಕಾಗಿ ತಮ್ಮ ಪ್ರಾಣವನ್ನು ಪಣಕ್ಕಿಡಲು ಮುಂದಾಗಿದ್ದಾರೆ. ಏಕೆಂದರೆ ನೀವು [ಸರ್ಕಾರ] ಅವರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಾಗಿಲ್ಲ.” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಉದ್ಯೋಗಾವಕಾಶಗಳಿದ್ದರೆ ಯಾರಾದರೂ ಇಸ್ರೇಲ್‌ಗೆ ಕೆಲಸಕ್ಕಾಗಿ ಯಾಕೆ ಹೋಗುತ್ತಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಪ್ರಶ್ನಿಸಿದ್ದಾರೆ.

ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಭಾರತ ಸರ್ಕಾರವೇ ಸಲಹೆ ನೀಡಿತ್ತು ಎಂದು ಓವೈಸಿ ಗಮನಸೆಳೆದಿದ್ದಾರೆ. “ಬಡ ಜನರು ಇಸ್ರೇಲ್‌ನಂತಹ ಸ್ಥಳಗಳಿಗೆ ಕೆಲಸ ಮಾಡಲು ಹೋಗುತ್ತಿರುವುದು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ಸ್ಪಷ್ಟ ಪುರಾವೆಯಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...