Homeಮುಖಪುಟಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ - ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ – ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದ 5,600ಕ್ಕೂ ಹೆಚ್ಚು ಜನರು ಇಸ್ರೇಲ್‌ನಲ್ಲಿ ನಿರ್ಮಾಣ ಕಾರ್ಯದ ಉದ್ಯೋಗಿಯಾಗಿದ್ದಾರೆ. ಆದರೆ ಮುಖ್ಯಮಂತ್ರಿಯ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಜನರನ್ನು ಯುದ್ಧ ವಲಯಕ್ಕೆ ಕಳುಹಿಸುವುದನ್ನು ಸಾಧನೆ ಎಂದು ಹೇಗೆ ಉಲ್ಲೇಖಿಸುತ್ತೀರಿ ಎಂದು ಪ್ರಶ್ನಿಸಿವೆ. ಯುದ್ಧ ಪೀಡಿತ

ಉತ್ತರ ಪ್ರದೇಶ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಆದಿತ್ಯನಾಥ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉಲ್ಲೇಖಿಸಿ, “ನಾವು ನಮ್ಮ ಯುವಕರನ್ನು ಇಸ್ರೇಲ್‌ಗೆ ಅವಕಾಶಗಳಿಗಾಗಿ ಕಳುಹಿಸುತ್ತಿರುವಾಗ, ನಿನ್ನೆ ಕಾಂಗ್ರೆಸ್ ನಾಯಕರೊಬ್ಬರು ಪ್ಯಾಲೆಸ್ತೀನ್ ಚೀಲವನ್ನು ಹಿಡಿದುಕೊಂಡು ಸಂಸತ್ತಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.” ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವವರಿಗೆ ಉಚಿತ ಊಟ ಮತ್ತು ವಸತಿ, ಜೊತೆಗೆ ಮಾಸಿಕ 1.5 ಲಕ್ಷ ರೂಪಾಯಿ ಸಂಬಳ ಸಿಗುತ್ತದೆ ಎಂದು ಆದಿತ್ಯನಾಥ್ ಹೇಳಿದ್ದು, ಜೊತೆಗೆ “ಸುರಕ್ಷತೆಯ ಸಂಪೂರ್ಣ ಗ್ಯಾರಂಟಿಯೂ ಇದೆ” ಎಂದು ಅವರು ಹೇಳಿದ್ದಾರೆ. ಈ ಕಾರ್ಮಿಕರು ಮನೆಗೆ ಹಣವನ್ನು ಕಳುಹಿಸಿದಾಗ ಅದು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುತ್ತದೆ ಎಂದು ಅವರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದಲ್ಲಿ ಕಾರ್ಮಿಕರು ಕೇವಲ 20,000 ರಿಂದ 30,000 ರೂ.ಗಳವರೆಗೆ ಗಳಿಸುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದ ಕಡಿಮೆ ತಲಾ ಆದಾಯಕ್ಕೆ ಹಿಂದಿನ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇಸ್ರೇಲಿ ಅಧಿಕಾರಿಗಳ ತಂಡವು ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ರಾಜ್ಯದಿಂದ ಹೆಚ್ಚಿನ ಯುವಕರನ್ನು ನೇಮಿಸಿಕೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿದೆ ಎಂದು ಹೇಳಿದ ಆದಿತ್ಯನಾಥ್ , ಅವರ “ಅತ್ಯುತ್ತಮ ಕೆಲಸದ ನೀತಿ ಮತ್ತು ಕೌಶಲ್ಯ” ವನ್ನು ಶ್ಲಾಘಿಸಿದ್ದಾರೆ.

ಕಳೆದ ವರ್ಷ 2023ರ ಅಕ್ಟೋಬರ್‌ನಲ್ಲಿ ಗಾಜಾದ ಮೇಲೆ ಇಸ್ರೇಲ್‌ನ ಯುದ್ಧ ಪ್ರಾರಂಭವಾದ ನಂತರ ಪ್ಯಾಲೆಸ್ತೀನಿ ಕಾರ್ಮಿಕರ ಬದಲು ಸುಮಾರು 12,000 ಭಾರತೀಯ ಕಾರ್ಮಿಕರನ್ನು ಇಸ್ರೇಲ್ ನೇಮಿಸಿಕೊಂಡಿದೆ. ಒಟ್ಟು ಸುಮಾರು 90,000 ಪ್ಯಾಲೆಸ್ಟೀನಿಯನ್ನರನ್ನು ಬದಲಿಸಿ ಅಲ್ಲಿಗೆ ವಿದೇಶಿ ಉದ್ಯೋಗಿಗಳನ್ನು ಇಸ್ರೇಲ್ ನೇಮಿಸಿಕೊಂಡಿತ್ತು. ಹಾಗಾಗಿ ನವೆಂಬರ್‌ನಲ್ಲಿ ನೇಮಕಾತಿ ಅಭಿಯಾನವನ್ನು ನಡೆಸಲು ಭಾರತದೊಂದಿಗೆ ಇಸ್ರೇಲ್‌ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು.

ನೇಮಕಗೊಂಡ ಕಾರ್ಮಿಕರಲ್ಲಿ, ಅಗತ್ಯವಿರುವ ಕೌಶಲ್ಯಗಳ ಕೊರತೆ ಮತ್ತು ಭಾಷಾ ಅಡೆತಡೆಗಳನ್ನು ಎದುರಿಸಿದ ಕಾರಣಕ್ಕೆ ಸುಮಾರು 220 ಜನರನ್ನು ಇಸ್ರೇಲ್‌ನಿಂದ ವಾಪಸ್ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನವೆಂಬರ್‌ನಲ್ಲಿ ದೃಢಪಡಿಸಿದೆ. ಭಾರತಕ್ಕೆ ಮರಳಬೇಕಾದ ಕಾರ್ಮಿಕರ ಸಂಖ್ಯೆ 500 ರಿಂದ 600 ರಷ್ಟಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಕಾರ್ಮಿಕ ಏಜೆನ್ಸಿಗಳನ್ನು ಉಲ್ಲೇಖಿಸಿ ವರದಿ ಮಾಡಿತ್ತು. ಹಿಂದಿರುಗಿದವರಲ್ಲಿ ಹೆಚ್ಚಿನವರು ಸರ್ಕಾರದ ಮೂಲಕ ನೇಮಕಗೊಂಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಕಾರ್ಮಿಕರಿಗೆ ತಿಂಗಳಿಗೆ 1.37 ಲಕ್ಷ ರೂ.ನಿಂದ 1.92 ಲಕ್ಷ ರೂ.ಗಳ ವರೆಗೆ ಗಳಿಸುವ ನಿರೀಕ್ಷೆಯಿದ್ದು, ಹಾಗಾಗಿ ಜನರು ಇಸ್ರೇಲ್‌ನಲ್ಲಿ ಕೆಲಸ ಹುಡುಕಲು ಮುಂದಾಗಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. “ನಿರುದ್ಯೋಗವು ಇಲ್ಲಿ ನಮ್ಮನ್ನು ಕೊಲ್ಲುತ್ತಿದೆ. ನಾನು ದಿನಕ್ಕೆ ಕೇವಲ 500 ರೂ ಗಳಿಸುತ್ತೇನೆ ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವಾಗ, ಇಲ್ಲಿನ ಉದ್ಯೋಗದಿಂದ ಬದುಕುವುದು ಅಸಾಧ್ಯ.” ಎಂದು ಕೆಲಸಗಾರರೊಬ್ಬರು ಈ ಹಿಂದೆ ಹೇಳಿದ್ದರು. ಯುದ್ಧ ಪೀಡಿತ

ಅವಮಾನದ ವಿಷಯ, ಹೆಮ್ಮೆಯಲ್ಲ: ಪ್ರಿಯಾಂಕಾ ವಾದ್ರಾ

ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ಯುದ್ಧ ಪೀಡಿತ ದೇಶದಲ್ಲಿ ಕೆಲಸ ಮಾಡಲು ಯುವಕರನ್ನು ಕಳುಹಿಸುವುದು “ಬೆನ್ನು ತಟ್ಟಿಕೊಳ್ಳುವ ಸಾಧನೆಯಲ್ಲ” ಬದಲಾಗಿ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ನಿರುದ್ಯೋಗದ ಸ್ಥಿತಿಯ ಬಗ್ಗೆ ಅಥವಾ ಯುವಜನರು ಮತ್ತು ಅವರ ಕುಟುಂಬದ ನೋವಿನ ಬಗ್ಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಯುದ್ಧದ ನಡುವೆ ಇಸ್ರೇಲ್‌ನಲ್ಲಿ ಕಾರ್ಮಿಕರು ಬಂಕರ್‌ಗಳಲ್ಲಿ ಅಡಗಿಕೊಳ್ಳಬೇಕಾಗಿತ್ತು ಮತ್ತು ಅವರನ್ನು ನೇಮಕ ಮಾಡಿಕೊಂಡ ಕಂಪನಿಗಳಿಂದ ಅವರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ವಾದ್ರಾ ವರದಿಗಳನ್ನು ಉಲ್ಲೇಖಿಸಿದ್ದಾರೆ. “ಅವರ ಕುಟುಂಬಗಳು ಯಾವಾಗಲೂ ಭಯಭೀತರಾಗಿದ್ದಾರೆ. ನಮ್ಮ ಯುವಕರು ಉದ್ಯೋಗಕ್ಕಾಗಿ ತಮ್ಮ ಪ್ರಾಣವನ್ನು ಪಣಕ್ಕಿಡಲು ಮುಂದಾಗಿದ್ದಾರೆ. ಏಕೆಂದರೆ ನೀವು [ಸರ್ಕಾರ] ಅವರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಾಗಿಲ್ಲ.” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಉದ್ಯೋಗಾವಕಾಶಗಳಿದ್ದರೆ ಯಾರಾದರೂ ಇಸ್ರೇಲ್‌ಗೆ ಕೆಲಸಕ್ಕಾಗಿ ಯಾಕೆ ಹೋಗುತ್ತಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಪ್ರಶ್ನಿಸಿದ್ದಾರೆ.

ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಭಾರತ ಸರ್ಕಾರವೇ ಸಲಹೆ ನೀಡಿತ್ತು ಎಂದು ಓವೈಸಿ ಗಮನಸೆಳೆದಿದ್ದಾರೆ. “ಬಡ ಜನರು ಇಸ್ರೇಲ್‌ನಂತಹ ಸ್ಥಳಗಳಿಗೆ ಕೆಲಸ ಮಾಡಲು ಹೋಗುತ್ತಿರುವುದು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ಸ್ಪಷ್ಟ ಪುರಾವೆಯಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...