Homeಮುಖಪುಟಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ - ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ – ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದ 5,600ಕ್ಕೂ ಹೆಚ್ಚು ಜನರು ಇಸ್ರೇಲ್‌ನಲ್ಲಿ ನಿರ್ಮಾಣ ಕಾರ್ಯದ ಉದ್ಯೋಗಿಯಾಗಿದ್ದಾರೆ. ಆದರೆ ಮುಖ್ಯಮಂತ್ರಿಯ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಜನರನ್ನು ಯುದ್ಧ ವಲಯಕ್ಕೆ ಕಳುಹಿಸುವುದನ್ನು ಸಾಧನೆ ಎಂದು ಹೇಗೆ ಉಲ್ಲೇಖಿಸುತ್ತೀರಿ ಎಂದು ಪ್ರಶ್ನಿಸಿವೆ. ಯುದ್ಧ ಪೀಡಿತ

ಉತ್ತರ ಪ್ರದೇಶ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಆದಿತ್ಯನಾಥ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉಲ್ಲೇಖಿಸಿ, “ನಾವು ನಮ್ಮ ಯುವಕರನ್ನು ಇಸ್ರೇಲ್‌ಗೆ ಅವಕಾಶಗಳಿಗಾಗಿ ಕಳುಹಿಸುತ್ತಿರುವಾಗ, ನಿನ್ನೆ ಕಾಂಗ್ರೆಸ್ ನಾಯಕರೊಬ್ಬರು ಪ್ಯಾಲೆಸ್ತೀನ್ ಚೀಲವನ್ನು ಹಿಡಿದುಕೊಂಡು ಸಂಸತ್ತಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.” ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವವರಿಗೆ ಉಚಿತ ಊಟ ಮತ್ತು ವಸತಿ, ಜೊತೆಗೆ ಮಾಸಿಕ 1.5 ಲಕ್ಷ ರೂಪಾಯಿ ಸಂಬಳ ಸಿಗುತ್ತದೆ ಎಂದು ಆದಿತ್ಯನಾಥ್ ಹೇಳಿದ್ದು, ಜೊತೆಗೆ “ಸುರಕ್ಷತೆಯ ಸಂಪೂರ್ಣ ಗ್ಯಾರಂಟಿಯೂ ಇದೆ” ಎಂದು ಅವರು ಹೇಳಿದ್ದಾರೆ. ಈ ಕಾರ್ಮಿಕರು ಮನೆಗೆ ಹಣವನ್ನು ಕಳುಹಿಸಿದಾಗ ಅದು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುತ್ತದೆ ಎಂದು ಅವರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದಲ್ಲಿ ಕಾರ್ಮಿಕರು ಕೇವಲ 20,000 ರಿಂದ 30,000 ರೂ.ಗಳವರೆಗೆ ಗಳಿಸುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದ ಕಡಿಮೆ ತಲಾ ಆದಾಯಕ್ಕೆ ಹಿಂದಿನ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇಸ್ರೇಲಿ ಅಧಿಕಾರಿಗಳ ತಂಡವು ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ರಾಜ್ಯದಿಂದ ಹೆಚ್ಚಿನ ಯುವಕರನ್ನು ನೇಮಿಸಿಕೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿದೆ ಎಂದು ಹೇಳಿದ ಆದಿತ್ಯನಾಥ್ , ಅವರ “ಅತ್ಯುತ್ತಮ ಕೆಲಸದ ನೀತಿ ಮತ್ತು ಕೌಶಲ್ಯ” ವನ್ನು ಶ್ಲಾಘಿಸಿದ್ದಾರೆ.

ಕಳೆದ ವರ್ಷ 2023ರ ಅಕ್ಟೋಬರ್‌ನಲ್ಲಿ ಗಾಜಾದ ಮೇಲೆ ಇಸ್ರೇಲ್‌ನ ಯುದ್ಧ ಪ್ರಾರಂಭವಾದ ನಂತರ ಪ್ಯಾಲೆಸ್ತೀನಿ ಕಾರ್ಮಿಕರ ಬದಲು ಸುಮಾರು 12,000 ಭಾರತೀಯ ಕಾರ್ಮಿಕರನ್ನು ಇಸ್ರೇಲ್ ನೇಮಿಸಿಕೊಂಡಿದೆ. ಒಟ್ಟು ಸುಮಾರು 90,000 ಪ್ಯಾಲೆಸ್ಟೀನಿಯನ್ನರನ್ನು ಬದಲಿಸಿ ಅಲ್ಲಿಗೆ ವಿದೇಶಿ ಉದ್ಯೋಗಿಗಳನ್ನು ಇಸ್ರೇಲ್ ನೇಮಿಸಿಕೊಂಡಿತ್ತು. ಹಾಗಾಗಿ ನವೆಂಬರ್‌ನಲ್ಲಿ ನೇಮಕಾತಿ ಅಭಿಯಾನವನ್ನು ನಡೆಸಲು ಭಾರತದೊಂದಿಗೆ ಇಸ್ರೇಲ್‌ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು.

ನೇಮಕಗೊಂಡ ಕಾರ್ಮಿಕರಲ್ಲಿ, ಅಗತ್ಯವಿರುವ ಕೌಶಲ್ಯಗಳ ಕೊರತೆ ಮತ್ತು ಭಾಷಾ ಅಡೆತಡೆಗಳನ್ನು ಎದುರಿಸಿದ ಕಾರಣಕ್ಕೆ ಸುಮಾರು 220 ಜನರನ್ನು ಇಸ್ರೇಲ್‌ನಿಂದ ವಾಪಸ್ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನವೆಂಬರ್‌ನಲ್ಲಿ ದೃಢಪಡಿಸಿದೆ. ಭಾರತಕ್ಕೆ ಮರಳಬೇಕಾದ ಕಾರ್ಮಿಕರ ಸಂಖ್ಯೆ 500 ರಿಂದ 600 ರಷ್ಟಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಕಾರ್ಮಿಕ ಏಜೆನ್ಸಿಗಳನ್ನು ಉಲ್ಲೇಖಿಸಿ ವರದಿ ಮಾಡಿತ್ತು. ಹಿಂದಿರುಗಿದವರಲ್ಲಿ ಹೆಚ್ಚಿನವರು ಸರ್ಕಾರದ ಮೂಲಕ ನೇಮಕಗೊಂಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಕಾರ್ಮಿಕರಿಗೆ ತಿಂಗಳಿಗೆ 1.37 ಲಕ್ಷ ರೂ.ನಿಂದ 1.92 ಲಕ್ಷ ರೂ.ಗಳ ವರೆಗೆ ಗಳಿಸುವ ನಿರೀಕ್ಷೆಯಿದ್ದು, ಹಾಗಾಗಿ ಜನರು ಇಸ್ರೇಲ್‌ನಲ್ಲಿ ಕೆಲಸ ಹುಡುಕಲು ಮುಂದಾಗಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. “ನಿರುದ್ಯೋಗವು ಇಲ್ಲಿ ನಮ್ಮನ್ನು ಕೊಲ್ಲುತ್ತಿದೆ. ನಾನು ದಿನಕ್ಕೆ ಕೇವಲ 500 ರೂ ಗಳಿಸುತ್ತೇನೆ ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವಾಗ, ಇಲ್ಲಿನ ಉದ್ಯೋಗದಿಂದ ಬದುಕುವುದು ಅಸಾಧ್ಯ.” ಎಂದು ಕೆಲಸಗಾರರೊಬ್ಬರು ಈ ಹಿಂದೆ ಹೇಳಿದ್ದರು. ಯುದ್ಧ ಪೀಡಿತ

ಅವಮಾನದ ವಿಷಯ, ಹೆಮ್ಮೆಯಲ್ಲ: ಪ್ರಿಯಾಂಕಾ ವಾದ್ರಾ

ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ಯುದ್ಧ ಪೀಡಿತ ದೇಶದಲ್ಲಿ ಕೆಲಸ ಮಾಡಲು ಯುವಕರನ್ನು ಕಳುಹಿಸುವುದು “ಬೆನ್ನು ತಟ್ಟಿಕೊಳ್ಳುವ ಸಾಧನೆಯಲ್ಲ” ಬದಲಾಗಿ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ನಿರುದ್ಯೋಗದ ಸ್ಥಿತಿಯ ಬಗ್ಗೆ ಅಥವಾ ಯುವಜನರು ಮತ್ತು ಅವರ ಕುಟುಂಬದ ನೋವಿನ ಬಗ್ಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಯುದ್ಧದ ನಡುವೆ ಇಸ್ರೇಲ್‌ನಲ್ಲಿ ಕಾರ್ಮಿಕರು ಬಂಕರ್‌ಗಳಲ್ಲಿ ಅಡಗಿಕೊಳ್ಳಬೇಕಾಗಿತ್ತು ಮತ್ತು ಅವರನ್ನು ನೇಮಕ ಮಾಡಿಕೊಂಡ ಕಂಪನಿಗಳಿಂದ ಅವರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ವಾದ್ರಾ ವರದಿಗಳನ್ನು ಉಲ್ಲೇಖಿಸಿದ್ದಾರೆ. “ಅವರ ಕುಟುಂಬಗಳು ಯಾವಾಗಲೂ ಭಯಭೀತರಾಗಿದ್ದಾರೆ. ನಮ್ಮ ಯುವಕರು ಉದ್ಯೋಗಕ್ಕಾಗಿ ತಮ್ಮ ಪ್ರಾಣವನ್ನು ಪಣಕ್ಕಿಡಲು ಮುಂದಾಗಿದ್ದಾರೆ. ಏಕೆಂದರೆ ನೀವು [ಸರ್ಕಾರ] ಅವರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಾಗಿಲ್ಲ.” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಉದ್ಯೋಗಾವಕಾಶಗಳಿದ್ದರೆ ಯಾರಾದರೂ ಇಸ್ರೇಲ್‌ಗೆ ಕೆಲಸಕ್ಕಾಗಿ ಯಾಕೆ ಹೋಗುತ್ತಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಪ್ರಶ್ನಿಸಿದ್ದಾರೆ.

ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಭಾರತ ಸರ್ಕಾರವೇ ಸಲಹೆ ನೀಡಿತ್ತು ಎಂದು ಓವೈಸಿ ಗಮನಸೆಳೆದಿದ್ದಾರೆ. “ಬಡ ಜನರು ಇಸ್ರೇಲ್‌ನಂತಹ ಸ್ಥಳಗಳಿಗೆ ಕೆಲಸ ಮಾಡಲು ಹೋಗುತ್ತಿರುವುದು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ಸ್ಪಷ್ಟ ಪುರಾವೆಯಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...