Homeಮುಖಪುಟಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ - ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ – ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದ 5,600ಕ್ಕೂ ಹೆಚ್ಚು ಜನರು ಇಸ್ರೇಲ್‌ನಲ್ಲಿ ನಿರ್ಮಾಣ ಕಾರ್ಯದ ಉದ್ಯೋಗಿಯಾಗಿದ್ದಾರೆ. ಆದರೆ ಮುಖ್ಯಮಂತ್ರಿಯ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಜನರನ್ನು ಯುದ್ಧ ವಲಯಕ್ಕೆ ಕಳುಹಿಸುವುದನ್ನು ಸಾಧನೆ ಎಂದು ಹೇಗೆ ಉಲ್ಲೇಖಿಸುತ್ತೀರಿ ಎಂದು ಪ್ರಶ್ನಿಸಿವೆ. ಯುದ್ಧ ಪೀಡಿತ

ಉತ್ತರ ಪ್ರದೇಶ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಆದಿತ್ಯನಾಥ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉಲ್ಲೇಖಿಸಿ, “ನಾವು ನಮ್ಮ ಯುವಕರನ್ನು ಇಸ್ರೇಲ್‌ಗೆ ಅವಕಾಶಗಳಿಗಾಗಿ ಕಳುಹಿಸುತ್ತಿರುವಾಗ, ನಿನ್ನೆ ಕಾಂಗ್ರೆಸ್ ನಾಯಕರೊಬ್ಬರು ಪ್ಯಾಲೆಸ್ತೀನ್ ಚೀಲವನ್ನು ಹಿಡಿದುಕೊಂಡು ಸಂಸತ್ತಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.” ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವವರಿಗೆ ಉಚಿತ ಊಟ ಮತ್ತು ವಸತಿ, ಜೊತೆಗೆ ಮಾಸಿಕ 1.5 ಲಕ್ಷ ರೂಪಾಯಿ ಸಂಬಳ ಸಿಗುತ್ತದೆ ಎಂದು ಆದಿತ್ಯನಾಥ್ ಹೇಳಿದ್ದು, ಜೊತೆಗೆ “ಸುರಕ್ಷತೆಯ ಸಂಪೂರ್ಣ ಗ್ಯಾರಂಟಿಯೂ ಇದೆ” ಎಂದು ಅವರು ಹೇಳಿದ್ದಾರೆ. ಈ ಕಾರ್ಮಿಕರು ಮನೆಗೆ ಹಣವನ್ನು ಕಳುಹಿಸಿದಾಗ ಅದು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುತ್ತದೆ ಎಂದು ಅವರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದಲ್ಲಿ ಕಾರ್ಮಿಕರು ಕೇವಲ 20,000 ರಿಂದ 30,000 ರೂ.ಗಳವರೆಗೆ ಗಳಿಸುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದ ಕಡಿಮೆ ತಲಾ ಆದಾಯಕ್ಕೆ ಹಿಂದಿನ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇಸ್ರೇಲಿ ಅಧಿಕಾರಿಗಳ ತಂಡವು ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ರಾಜ್ಯದಿಂದ ಹೆಚ್ಚಿನ ಯುವಕರನ್ನು ನೇಮಿಸಿಕೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿದೆ ಎಂದು ಹೇಳಿದ ಆದಿತ್ಯನಾಥ್ , ಅವರ “ಅತ್ಯುತ್ತಮ ಕೆಲಸದ ನೀತಿ ಮತ್ತು ಕೌಶಲ್ಯ” ವನ್ನು ಶ್ಲಾಘಿಸಿದ್ದಾರೆ.

ಕಳೆದ ವರ್ಷ 2023ರ ಅಕ್ಟೋಬರ್‌ನಲ್ಲಿ ಗಾಜಾದ ಮೇಲೆ ಇಸ್ರೇಲ್‌ನ ಯುದ್ಧ ಪ್ರಾರಂಭವಾದ ನಂತರ ಪ್ಯಾಲೆಸ್ತೀನಿ ಕಾರ್ಮಿಕರ ಬದಲು ಸುಮಾರು 12,000 ಭಾರತೀಯ ಕಾರ್ಮಿಕರನ್ನು ಇಸ್ರೇಲ್ ನೇಮಿಸಿಕೊಂಡಿದೆ. ಒಟ್ಟು ಸುಮಾರು 90,000 ಪ್ಯಾಲೆಸ್ಟೀನಿಯನ್ನರನ್ನು ಬದಲಿಸಿ ಅಲ್ಲಿಗೆ ವಿದೇಶಿ ಉದ್ಯೋಗಿಗಳನ್ನು ಇಸ್ರೇಲ್ ನೇಮಿಸಿಕೊಂಡಿತ್ತು. ಹಾಗಾಗಿ ನವೆಂಬರ್‌ನಲ್ಲಿ ನೇಮಕಾತಿ ಅಭಿಯಾನವನ್ನು ನಡೆಸಲು ಭಾರತದೊಂದಿಗೆ ಇಸ್ರೇಲ್‌ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು.

ನೇಮಕಗೊಂಡ ಕಾರ್ಮಿಕರಲ್ಲಿ, ಅಗತ್ಯವಿರುವ ಕೌಶಲ್ಯಗಳ ಕೊರತೆ ಮತ್ತು ಭಾಷಾ ಅಡೆತಡೆಗಳನ್ನು ಎದುರಿಸಿದ ಕಾರಣಕ್ಕೆ ಸುಮಾರು 220 ಜನರನ್ನು ಇಸ್ರೇಲ್‌ನಿಂದ ವಾಪಸ್ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನವೆಂಬರ್‌ನಲ್ಲಿ ದೃಢಪಡಿಸಿದೆ. ಭಾರತಕ್ಕೆ ಮರಳಬೇಕಾದ ಕಾರ್ಮಿಕರ ಸಂಖ್ಯೆ 500 ರಿಂದ 600 ರಷ್ಟಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಕಾರ್ಮಿಕ ಏಜೆನ್ಸಿಗಳನ್ನು ಉಲ್ಲೇಖಿಸಿ ವರದಿ ಮಾಡಿತ್ತು. ಹಿಂದಿರುಗಿದವರಲ್ಲಿ ಹೆಚ್ಚಿನವರು ಸರ್ಕಾರದ ಮೂಲಕ ನೇಮಕಗೊಂಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಕಾರ್ಮಿಕರಿಗೆ ತಿಂಗಳಿಗೆ 1.37 ಲಕ್ಷ ರೂ.ನಿಂದ 1.92 ಲಕ್ಷ ರೂ.ಗಳ ವರೆಗೆ ಗಳಿಸುವ ನಿರೀಕ್ಷೆಯಿದ್ದು, ಹಾಗಾಗಿ ಜನರು ಇಸ್ರೇಲ್‌ನಲ್ಲಿ ಕೆಲಸ ಹುಡುಕಲು ಮುಂದಾಗಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. “ನಿರುದ್ಯೋಗವು ಇಲ್ಲಿ ನಮ್ಮನ್ನು ಕೊಲ್ಲುತ್ತಿದೆ. ನಾನು ದಿನಕ್ಕೆ ಕೇವಲ 500 ರೂ ಗಳಿಸುತ್ತೇನೆ ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವಾಗ, ಇಲ್ಲಿನ ಉದ್ಯೋಗದಿಂದ ಬದುಕುವುದು ಅಸಾಧ್ಯ.” ಎಂದು ಕೆಲಸಗಾರರೊಬ್ಬರು ಈ ಹಿಂದೆ ಹೇಳಿದ್ದರು. ಯುದ್ಧ ಪೀಡಿತ

ಅವಮಾನದ ವಿಷಯ, ಹೆಮ್ಮೆಯಲ್ಲ: ಪ್ರಿಯಾಂಕಾ ವಾದ್ರಾ

ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ಯುದ್ಧ ಪೀಡಿತ ದೇಶದಲ್ಲಿ ಕೆಲಸ ಮಾಡಲು ಯುವಕರನ್ನು ಕಳುಹಿಸುವುದು “ಬೆನ್ನು ತಟ್ಟಿಕೊಳ್ಳುವ ಸಾಧನೆಯಲ್ಲ” ಬದಲಾಗಿ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ನಿರುದ್ಯೋಗದ ಸ್ಥಿತಿಯ ಬಗ್ಗೆ ಅಥವಾ ಯುವಜನರು ಮತ್ತು ಅವರ ಕುಟುಂಬದ ನೋವಿನ ಬಗ್ಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಯುದ್ಧದ ನಡುವೆ ಇಸ್ರೇಲ್‌ನಲ್ಲಿ ಕಾರ್ಮಿಕರು ಬಂಕರ್‌ಗಳಲ್ಲಿ ಅಡಗಿಕೊಳ್ಳಬೇಕಾಗಿತ್ತು ಮತ್ತು ಅವರನ್ನು ನೇಮಕ ಮಾಡಿಕೊಂಡ ಕಂಪನಿಗಳಿಂದ ಅವರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ವಾದ್ರಾ ವರದಿಗಳನ್ನು ಉಲ್ಲೇಖಿಸಿದ್ದಾರೆ. “ಅವರ ಕುಟುಂಬಗಳು ಯಾವಾಗಲೂ ಭಯಭೀತರಾಗಿದ್ದಾರೆ. ನಮ್ಮ ಯುವಕರು ಉದ್ಯೋಗಕ್ಕಾಗಿ ತಮ್ಮ ಪ್ರಾಣವನ್ನು ಪಣಕ್ಕಿಡಲು ಮುಂದಾಗಿದ್ದಾರೆ. ಏಕೆಂದರೆ ನೀವು [ಸರ್ಕಾರ] ಅವರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಾಗಿಲ್ಲ.” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಉದ್ಯೋಗಾವಕಾಶಗಳಿದ್ದರೆ ಯಾರಾದರೂ ಇಸ್ರೇಲ್‌ಗೆ ಕೆಲಸಕ್ಕಾಗಿ ಯಾಕೆ ಹೋಗುತ್ತಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಪ್ರಶ್ನಿಸಿದ್ದಾರೆ.

ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಭಾರತ ಸರ್ಕಾರವೇ ಸಲಹೆ ನೀಡಿತ್ತು ಎಂದು ಓವೈಸಿ ಗಮನಸೆಳೆದಿದ್ದಾರೆ. “ಬಡ ಜನರು ಇಸ್ರೇಲ್‌ನಂತಹ ಸ್ಥಳಗಳಿಗೆ ಕೆಲಸ ಮಾಡಲು ಹೋಗುತ್ತಿರುವುದು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ಸ್ಪಷ್ಟ ಪುರಾವೆಯಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...