Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...