Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...