Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...