Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....