Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...