Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...