Homeಕರೋನಾ ತಲ್ಲಣಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

- Advertisement -
- Advertisement -

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ದೈಹಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್‌ಗಳ ಬಳಕೆ ಅತ್ಯಗತ್ಯವಾಗಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗ್ರವಾಲ್ ಅವರು ಈ ವಿಷಯದಲ್ಲಿನ ಅಧ್ಯಯನಗಳನ್ನು ಉಲ್ಲೇಖಿಸಿದ್ದಾರೆ.

ಒಬ್ಬ ಕೊರೊನಾ ಸೋಂಕಿತ ವ್ಯಕ್ತಿಯು ದೈಹಿಕ ಅಂತರ ಕ್ರಮಗಳನ್ನು ಅನುಸರಿಸದೆ ಓಡಾಡಿದರೆ 30 ದಿನಗಳಲ್ಲಿ 406 ಜನರಿಗೆ ಸೋಂಕು ತಗುಲಿಸಬಹುದು ಎಂದು ಅನೇಕ ವಿಶ್ವವಿದ್ಯಾಲಯಗಳು ಸಂಶೋಧನೆ ನಡೆಸಿವೆ ಎಂದು ಅವರು ತಿಳಿಸಿದ್ದಾರೆ.

“ಸೋಂಕಿತ ವ್ಯಕ್ತಿಯು ತನ್ನ ಓಡಾಟದಲ್ಲಿ 50% ದಷ್ಟು ದೈಹಿಕ ಅಂತರ ಕಾಪಾಡಿದರೆ 30 ದಿನಗಳಲ್ಲಿ 406 ರ ಬದಲು 15 ಜನರು ಸೋಂಕಿಗೆ ಒಳಗಾಗುತ್ತಾರೆ ಎಂದು ತಿಳಿದುಬಂದಿದೆ. ಅದೇ ಸೋಂಕಿತ ವ್ಯಕ್ತಿಯು ದೈಹಿಕ ಅಂತರವನ್ನು 75% ಕಾಪಾಡಿದರೆ 2.5 ಜನರಿಗೆ ಸೋಂಕು ತಗುಲಿಸುವ ಸಾಧ್ಯತೆ ಇದೆ” ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ನಮ್ಮ ಗಮನವು ಒಂದು ಕಡೆ ಕ್ಲಿನಿಕಲ್ ನಿರ್ವಹಣೆಯತ್ತ, ಮತ್ತೊಂದೆಡೆ ಕೊರೊನಾವನ್ನು ನಿಯಂತ್ರಿಸುವತ್ತ ಇರಬೇಕು ಎಂದು ಅವರು ಹೇಳಿದ್ದಾರೆ. ಮಾಸ್ಕ್‌ಗಳ ಬಳಕೆಯನ್ನು ಅಗ್ರವಾಲ್ ಮತ್ತೆ ಒತ್ತಿ ಹೇಳಿದ್ದಾರೆ.

“ಸೋಂಕಿತ ವ್ಯಕ್ತಿಯಿಂದ ನಾವು ಆರು ಅಡಿಗಳಷ್ಟು ದೂರದಲ್ಲಿದ್ದರೂ ವೈರಸ್ ಹರಡುವ ಸಾಧ್ಯತೆ ಇದೆ ಎಂದು ಅಧ್ಯಯನವು ಹೇಳುತ್ತದೆ. ಇಂತಹ ಪ್ರಕರಣಗಳನ್ನು ಮನೆಯಲ್ಲೇ ಐಸೋಲೇಷನ್‌ ಹೊಂದಿದ್ದ ಕಡೆ ಕಾಣಬಹುದು. ಮಾಸ್ಕ್‌ಗಳನ್ನು ಸರಿಯಾಗಿ ಬಳಸದಿದ್ದರೆ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡುವ 90% ದಷ್ಟು ಸಾಧ್ಯತೆಯಿದೆ” ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಸೋಂಕು ರಹಿತ ವ್ಯಕ್ತಿಯು ಮುಖವಾಡ ಧರಿಸಿ, ಸೋಂಕಿತ ವ್ಯಕ್ತಿಯು ಮಾಸ್ಕ್‌ ಧರಿಸದೆ ಇದ್ದರೆ, ಅವರಿಂದ ಸೋಂಕು ಹರಡುವ 30% ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಸೋಂಕಿತ ಮತ್ತು ಸೋಂಕಿತನಲ್ಲದ ವ್ಯಕ್ತಿಗಳು ಮಾಸ್ಕ್‌ ಧರಿಸಿದ್ದರೆ, ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆಯು 1.5% ಆಗಿದೆ ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...