Homeಕರೋನಾ ತಲ್ಲಣಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

- Advertisement -
- Advertisement -

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ದೈಹಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್‌ಗಳ ಬಳಕೆ ಅತ್ಯಗತ್ಯವಾಗಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗ್ರವಾಲ್ ಅವರು ಈ ವಿಷಯದಲ್ಲಿನ ಅಧ್ಯಯನಗಳನ್ನು ಉಲ್ಲೇಖಿಸಿದ್ದಾರೆ.

ಒಬ್ಬ ಕೊರೊನಾ ಸೋಂಕಿತ ವ್ಯಕ್ತಿಯು ದೈಹಿಕ ಅಂತರ ಕ್ರಮಗಳನ್ನು ಅನುಸರಿಸದೆ ಓಡಾಡಿದರೆ 30 ದಿನಗಳಲ್ಲಿ 406 ಜನರಿಗೆ ಸೋಂಕು ತಗುಲಿಸಬಹುದು ಎಂದು ಅನೇಕ ವಿಶ್ವವಿದ್ಯಾಲಯಗಳು ಸಂಶೋಧನೆ ನಡೆಸಿವೆ ಎಂದು ಅವರು ತಿಳಿಸಿದ್ದಾರೆ.

“ಸೋಂಕಿತ ವ್ಯಕ್ತಿಯು ತನ್ನ ಓಡಾಟದಲ್ಲಿ 50% ದಷ್ಟು ದೈಹಿಕ ಅಂತರ ಕಾಪಾಡಿದರೆ 30 ದಿನಗಳಲ್ಲಿ 406 ರ ಬದಲು 15 ಜನರು ಸೋಂಕಿಗೆ ಒಳಗಾಗುತ್ತಾರೆ ಎಂದು ತಿಳಿದುಬಂದಿದೆ. ಅದೇ ಸೋಂಕಿತ ವ್ಯಕ್ತಿಯು ದೈಹಿಕ ಅಂತರವನ್ನು 75% ಕಾಪಾಡಿದರೆ 2.5 ಜನರಿಗೆ ಸೋಂಕು ತಗುಲಿಸುವ ಸಾಧ್ಯತೆ ಇದೆ” ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ನಮ್ಮ ಗಮನವು ಒಂದು ಕಡೆ ಕ್ಲಿನಿಕಲ್ ನಿರ್ವಹಣೆಯತ್ತ, ಮತ್ತೊಂದೆಡೆ ಕೊರೊನಾವನ್ನು ನಿಯಂತ್ರಿಸುವತ್ತ ಇರಬೇಕು ಎಂದು ಅವರು ಹೇಳಿದ್ದಾರೆ. ಮಾಸ್ಕ್‌ಗಳ ಬಳಕೆಯನ್ನು ಅಗ್ರವಾಲ್ ಮತ್ತೆ ಒತ್ತಿ ಹೇಳಿದ್ದಾರೆ.

“ಸೋಂಕಿತ ವ್ಯಕ್ತಿಯಿಂದ ನಾವು ಆರು ಅಡಿಗಳಷ್ಟು ದೂರದಲ್ಲಿದ್ದರೂ ವೈರಸ್ ಹರಡುವ ಸಾಧ್ಯತೆ ಇದೆ ಎಂದು ಅಧ್ಯಯನವು ಹೇಳುತ್ತದೆ. ಇಂತಹ ಪ್ರಕರಣಗಳನ್ನು ಮನೆಯಲ್ಲೇ ಐಸೋಲೇಷನ್‌ ಹೊಂದಿದ್ದ ಕಡೆ ಕಾಣಬಹುದು. ಮಾಸ್ಕ್‌ಗಳನ್ನು ಸರಿಯಾಗಿ ಬಳಸದಿದ್ದರೆ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡುವ 90% ದಷ್ಟು ಸಾಧ್ಯತೆಯಿದೆ” ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಸೋಂಕು ರಹಿತ ವ್ಯಕ್ತಿಯು ಮುಖವಾಡ ಧರಿಸಿ, ಸೋಂಕಿತ ವ್ಯಕ್ತಿಯು ಮಾಸ್ಕ್‌ ಧರಿಸದೆ ಇದ್ದರೆ, ಅವರಿಂದ ಸೋಂಕು ಹರಡುವ 30% ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಸೋಂಕಿತ ಮತ್ತು ಸೋಂಕಿತನಲ್ಲದ ವ್ಯಕ್ತಿಗಳು ಮಾಸ್ಕ್‌ ಧರಿಸಿದ್ದರೆ, ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆಯು 1.5% ಆಗಿದೆ ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...