Homeಕರೋನಾ ತಲ್ಲಣಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

ಎಚ್ಚರ: ದೈಹಿಕ ಅಂತರ ಕಾಪಾಡದ ಸೋಂಕಿತ ವ್ಯಕ್ತಿ 406 ಜನರಿಗೆ ಕೊರೊನಾ ಹರಡಬಲ್ಲ!

- Advertisement -
- Advertisement -

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ದೈಹಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್‌ಗಳ ಬಳಕೆ ಅತ್ಯಗತ್ಯವಾಗಿವೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗ್ರವಾಲ್ ಅವರು ಈ ವಿಷಯದಲ್ಲಿನ ಅಧ್ಯಯನಗಳನ್ನು ಉಲ್ಲೇಖಿಸಿದ್ದಾರೆ.

ಒಬ್ಬ ಕೊರೊನಾ ಸೋಂಕಿತ ವ್ಯಕ್ತಿಯು ದೈಹಿಕ ಅಂತರ ಕ್ರಮಗಳನ್ನು ಅನುಸರಿಸದೆ ಓಡಾಡಿದರೆ 30 ದಿನಗಳಲ್ಲಿ 406 ಜನರಿಗೆ ಸೋಂಕು ತಗುಲಿಸಬಹುದು ಎಂದು ಅನೇಕ ವಿಶ್ವವಿದ್ಯಾಲಯಗಳು ಸಂಶೋಧನೆ ನಡೆಸಿವೆ ಎಂದು ಅವರು ತಿಳಿಸಿದ್ದಾರೆ.

“ಸೋಂಕಿತ ವ್ಯಕ್ತಿಯು ತನ್ನ ಓಡಾಟದಲ್ಲಿ 50% ದಷ್ಟು ದೈಹಿಕ ಅಂತರ ಕಾಪಾಡಿದರೆ 30 ದಿನಗಳಲ್ಲಿ 406 ರ ಬದಲು 15 ಜನರು ಸೋಂಕಿಗೆ ಒಳಗಾಗುತ್ತಾರೆ ಎಂದು ತಿಳಿದುಬಂದಿದೆ. ಅದೇ ಸೋಂಕಿತ ವ್ಯಕ್ತಿಯು ದೈಹಿಕ ಅಂತರವನ್ನು 75% ಕಾಪಾಡಿದರೆ 2.5 ಜನರಿಗೆ ಸೋಂಕು ತಗುಲಿಸುವ ಸಾಧ್ಯತೆ ಇದೆ” ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ನಮ್ಮ ಗಮನವು ಒಂದು ಕಡೆ ಕ್ಲಿನಿಕಲ್ ನಿರ್ವಹಣೆಯತ್ತ, ಮತ್ತೊಂದೆಡೆ ಕೊರೊನಾವನ್ನು ನಿಯಂತ್ರಿಸುವತ್ತ ಇರಬೇಕು ಎಂದು ಅವರು ಹೇಳಿದ್ದಾರೆ. ಮಾಸ್ಕ್‌ಗಳ ಬಳಕೆಯನ್ನು ಅಗ್ರವಾಲ್ ಮತ್ತೆ ಒತ್ತಿ ಹೇಳಿದ್ದಾರೆ.

“ಸೋಂಕಿತ ವ್ಯಕ್ತಿಯಿಂದ ನಾವು ಆರು ಅಡಿಗಳಷ್ಟು ದೂರದಲ್ಲಿದ್ದರೂ ವೈರಸ್ ಹರಡುವ ಸಾಧ್ಯತೆ ಇದೆ ಎಂದು ಅಧ್ಯಯನವು ಹೇಳುತ್ತದೆ. ಇಂತಹ ಪ್ರಕರಣಗಳನ್ನು ಮನೆಯಲ್ಲೇ ಐಸೋಲೇಷನ್‌ ಹೊಂದಿದ್ದ ಕಡೆ ಕಾಣಬಹುದು. ಮಾಸ್ಕ್‌ಗಳನ್ನು ಸರಿಯಾಗಿ ಬಳಸದಿದ್ದರೆ ಸೋಂಕಿತ ವ್ಯಕ್ತಿಯಿಂದ ಸೋಂಕು ಹರಡುವ 90% ದಷ್ಟು ಸಾಧ್ಯತೆಯಿದೆ” ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ಸೋಂಕು ರಹಿತ ವ್ಯಕ್ತಿಯು ಮುಖವಾಡ ಧರಿಸಿ, ಸೋಂಕಿತ ವ್ಯಕ್ತಿಯು ಮಾಸ್ಕ್‌ ಧರಿಸದೆ ಇದ್ದರೆ, ಅವರಿಂದ ಸೋಂಕು ಹರಡುವ 30% ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಸೋಂಕಿತ ಮತ್ತು ಸೋಂಕಿತನಲ್ಲದ ವ್ಯಕ್ತಿಗಳು ಮಾಸ್ಕ್‌ ಧರಿಸಿದ್ದರೆ, ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆಯು 1.5% ಆಗಿದೆ ಎಂದು ಅಗ್ರವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್​ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....