Homeಕರ್ನಾಟಕಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ - ವಿಡಿಯೋ ನೋಡಿ

ಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ – ವಿಡಿಯೋ ನೋಡಿ

- Advertisement -
- Advertisement -

ತುಮಕೂರು ನಗರದಲ್ಲಿ ಕೆಲ ಯುವಕರ ಬೈಕ್ ವೀಲಿಂಗ್ ಮತ್ತು ಹುಚ್ಚು ಸಾಹಸದ ಚಟುವಟಿಕೆಗಳು ಹದ್ದು ಮೀರಿದೆ. ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟು ಹಲವರನ್ನು ಬಂಧಿಸಿದ್ದರೂ ಈ ಅಪಾಕಾರಿ ಬೈಕ್ ವೀಲಿಂಗ್ ನಡೆದೇ ಇದೆ. ಮೊಬೈಲ್ ಗಳಲ್ಲಿ ಇಂತಹ ರೋಮಾಂಚನಕಾರಿ ವಿಡಿಯೋಗಳನ್ನು ನೋಡುವ ಯುವಕರು ತಾವೂ ಕೂಡ ಹಾಗೆ ಮಾಡುವ ಕ್ರಿಯೆಯಲ್ಲಿ ತೊಡಗಿದ್ದಾರೆ.

ಕುಣಿಗಲ್ ಮುಖ್ಯರಸ್ತೆ, ಸದಾಶಿವನಗರ, ಸೋಮೇಶ್ವರಪುರಂ ಮುಖ್ಯರಸ್ತೆ, ಉಪ್ಪಾರಹಳ್ಳಿ, ರಿಂಗ್ ರಸ್ತೆ ಹೀಗೆ ತುಮಕೂರಿನ ಹೊರವಲಯ ಮತ್ತು ನಗರದ ಮಧ್ಯ ಭಾಗದ ಜನನಿಬಿಡ ರಸ್ತೆಗಳಲ್ಲಿ ಸಾಹಸಕಾರಿ ಬೈಕ್ ರೈಡಿಂಗ್ ಮತ್ತು ಅತಿ ವೇಗ ಜೋರು ಶಬ್ದ ಬರುವಂತೆ ಬೈಕ್ ಓಡಿಸುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ.

ಇದರಿಂದ ರಸ್ತೆಯಲ್ಲಿ ಹೋಗುವ ಇತರ ಬೈಕ್ ಸವಾರರು ಹೆದರಿಕೊಂಡು ದಾರಿ ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಬೈಕ್ ಸವಾರರು ಮೇಲೆ ಬರಬಹುದೆಂಬ ಕಾರಣದಿಂದ ದಾರಿ ಬಿಡಲು ಹೋಗಿ ಬಿದ್ದಿದ್ದಾರೆ. ಪಾದಚಾರಿಗಳು ಮತ್ತು ಸಾಮಾನ್ಯರು ಈ ಕರ್ಕಶ ಶಬ್ದ ಕೇಳಲಾರದೆ ಬಾಯಿಗೆ ಬಂದಂತೆ ಬೈಯ್ಯುವುದು ಉಂಟು.

ಇಂತಹ ಕೃತ್ಯದಲ್ಲಿ ತೊಡಗುವ ಯುವಕರ ತಂದೆ-ತಾಯಿ ಮತ್ತು ಪೋಷಕರು ಕೂಡ ತಮ್ಮ ಮಕ್ಕಳಿಗೆ ಬುದ್ದಿ ಹೇಳುವಂತಹ ಕೆಲಸ ಮಾಡಬೇಕು. ಇಲ್ಲದಿದ್ದರೆ ಹುಚ್ಚು ಸಾಹಸ ಮಾಡಲು ಹೋಗಿ ಜೀವಕ್ಕೆ ಸಂಚಕಾರ ತಂದುಕೊಳ್ಳಬಹುದು ಇಲ್ಲವೇ ಅಪಘಾತವಾಗಿ ಕೈಕಾಲು ಕಳೆದುಕೊಳ್ಳಬಹುದು. ತಾವು ಜೀವಕ್ಕೆ ಹಾನಿ ತಂದುಕೊಳ್ಳುವ ಜೊತೆಗೆ ಬೇರೆಯವರ ಜೀವಕ್ಕೂ ಕುತ್ತು ತರುತ್ತಾರೆ. ಹೀಗಾಗಿ ಬುದ್ಧಿ ಹೇಳಿ ಅವರು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರ ವಹಿಸುವುದು ಒಳ್ಳೆಯದು.

ಇನ್ನೊಂದೆಡೆ ಬೈಕ್ ಚಾಲಕ ವೇಗವಾಗಿ ಓಡಿಸಿದರೆ ಹಿಂದೆ ಕುಳಿತ ಯುವಕರು ಬೈಕ್ ಸೀಟಿನ ಮೇಲೆ ನಿಂತು ಕೇಕೆ ಹೊಡೆಯುತ್ತಾ ಹೋಗುತ್ತಾರೆ. ಇದು ಅವರಿಗೆ ರಂಜನೆಯ ವಿಷಯವಾದರೆ ಬೇರೆಯವರಿಗೆ ಅಪಾಯ ತಂದೊಡ್ಡುವುದು ಆಗಿದೆ. ಬೈಕ್ ರೈಡಿಂಗ್ ವಿಡಿಯೋ ವೈರಲ್ ಆಗಿರುವುದು ಪರಿಶೀಲಿಸಿದ ತುಮಕೂರು ಪೊಲೀಸರು ಎಂಟು ಜನ ಯುವಕರನ್ನು ಬಂಧಿಸಿದ್ದಾರೆ. ನಾಲ್ಲು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬುದ್ದಿ ಹೇಳಿದ್ದಾರೆ.

ಇಂತಹ ಹುಚ್ಚುತನದ ಬೈಕ್ ವ್ಹೀಲಿಂಗ್ ನೋಡುವ ಮಕ್ಕಳೂ ಕೂಡ ತಾಸಿಸುವ ರಸ್ತೆಗಳಲ್ಲಿ ಸೈಕಲ್ ವ್ಹೀಲಿಂಗ್ ನಡೆಸುವುದು ಉಂಟು. ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ ಸೈಕಲ್ ತುಳಿಯುವುದು ತನ್ನ ಸ್ನೇಹಿತರನ್ನು ರಂಜಿಸುವುದು ನಡೆಯುತ್ತಲೇ ಇದೆ. ಇದನ್ನು ನೋಡಿಯೂ ಪೋಷಕರೂ ಮಕ್ಕಳನ್ನು ಗದರಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ. ಜನಬಿಡ ರಸ್ತೆಗಳಲ್ಲಿ ಇಂತಹ ಚಟುವಟಿಕೆಗಳು ನಡೆಯದಂತೆ ಪೊಲೀಸ್ ಇಲಾಖೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕು.ಪೋಷಕರು ಬುದ್ಧಿ ಹೇಳುವ ಕೆಲಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...