Homeಕರ್ನಾಟಕಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ - ವಿಡಿಯೋ ನೋಡಿ

ಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ – ವಿಡಿಯೋ ನೋಡಿ

- Advertisement -
- Advertisement -

ತುಮಕೂರು ನಗರದಲ್ಲಿ ಕೆಲ ಯುವಕರ ಬೈಕ್ ವೀಲಿಂಗ್ ಮತ್ತು ಹುಚ್ಚು ಸಾಹಸದ ಚಟುವಟಿಕೆಗಳು ಹದ್ದು ಮೀರಿದೆ. ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟು ಹಲವರನ್ನು ಬಂಧಿಸಿದ್ದರೂ ಈ ಅಪಾಕಾರಿ ಬೈಕ್ ವೀಲಿಂಗ್ ನಡೆದೇ ಇದೆ. ಮೊಬೈಲ್ ಗಳಲ್ಲಿ ಇಂತಹ ರೋಮಾಂಚನಕಾರಿ ವಿಡಿಯೋಗಳನ್ನು ನೋಡುವ ಯುವಕರು ತಾವೂ ಕೂಡ ಹಾಗೆ ಮಾಡುವ ಕ್ರಿಯೆಯಲ್ಲಿ ತೊಡಗಿದ್ದಾರೆ.

ಕುಣಿಗಲ್ ಮುಖ್ಯರಸ್ತೆ, ಸದಾಶಿವನಗರ, ಸೋಮೇಶ್ವರಪುರಂ ಮುಖ್ಯರಸ್ತೆ, ಉಪ್ಪಾರಹಳ್ಳಿ, ರಿಂಗ್ ರಸ್ತೆ ಹೀಗೆ ತುಮಕೂರಿನ ಹೊರವಲಯ ಮತ್ತು ನಗರದ ಮಧ್ಯ ಭಾಗದ ಜನನಿಬಿಡ ರಸ್ತೆಗಳಲ್ಲಿ ಸಾಹಸಕಾರಿ ಬೈಕ್ ರೈಡಿಂಗ್ ಮತ್ತು ಅತಿ ವೇಗ ಜೋರು ಶಬ್ದ ಬರುವಂತೆ ಬೈಕ್ ಓಡಿಸುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ.

ಇದರಿಂದ ರಸ್ತೆಯಲ್ಲಿ ಹೋಗುವ ಇತರ ಬೈಕ್ ಸವಾರರು ಹೆದರಿಕೊಂಡು ದಾರಿ ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಬೈಕ್ ಸವಾರರು ಮೇಲೆ ಬರಬಹುದೆಂಬ ಕಾರಣದಿಂದ ದಾರಿ ಬಿಡಲು ಹೋಗಿ ಬಿದ್ದಿದ್ದಾರೆ. ಪಾದಚಾರಿಗಳು ಮತ್ತು ಸಾಮಾನ್ಯರು ಈ ಕರ್ಕಶ ಶಬ್ದ ಕೇಳಲಾರದೆ ಬಾಯಿಗೆ ಬಂದಂತೆ ಬೈಯ್ಯುವುದು ಉಂಟು.

ಇಂತಹ ಕೃತ್ಯದಲ್ಲಿ ತೊಡಗುವ ಯುವಕರ ತಂದೆ-ತಾಯಿ ಮತ್ತು ಪೋಷಕರು ಕೂಡ ತಮ್ಮ ಮಕ್ಕಳಿಗೆ ಬುದ್ದಿ ಹೇಳುವಂತಹ ಕೆಲಸ ಮಾಡಬೇಕು. ಇಲ್ಲದಿದ್ದರೆ ಹುಚ್ಚು ಸಾಹಸ ಮಾಡಲು ಹೋಗಿ ಜೀವಕ್ಕೆ ಸಂಚಕಾರ ತಂದುಕೊಳ್ಳಬಹುದು ಇಲ್ಲವೇ ಅಪಘಾತವಾಗಿ ಕೈಕಾಲು ಕಳೆದುಕೊಳ್ಳಬಹುದು. ತಾವು ಜೀವಕ್ಕೆ ಹಾನಿ ತಂದುಕೊಳ್ಳುವ ಜೊತೆಗೆ ಬೇರೆಯವರ ಜೀವಕ್ಕೂ ಕುತ್ತು ತರುತ್ತಾರೆ. ಹೀಗಾಗಿ ಬುದ್ಧಿ ಹೇಳಿ ಅವರು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರ ವಹಿಸುವುದು ಒಳ್ಳೆಯದು.

ಇನ್ನೊಂದೆಡೆ ಬೈಕ್ ಚಾಲಕ ವೇಗವಾಗಿ ಓಡಿಸಿದರೆ ಹಿಂದೆ ಕುಳಿತ ಯುವಕರು ಬೈಕ್ ಸೀಟಿನ ಮೇಲೆ ನಿಂತು ಕೇಕೆ ಹೊಡೆಯುತ್ತಾ ಹೋಗುತ್ತಾರೆ. ಇದು ಅವರಿಗೆ ರಂಜನೆಯ ವಿಷಯವಾದರೆ ಬೇರೆಯವರಿಗೆ ಅಪಾಯ ತಂದೊಡ್ಡುವುದು ಆಗಿದೆ. ಬೈಕ್ ರೈಡಿಂಗ್ ವಿಡಿಯೋ ವೈರಲ್ ಆಗಿರುವುದು ಪರಿಶೀಲಿಸಿದ ತುಮಕೂರು ಪೊಲೀಸರು ಎಂಟು ಜನ ಯುವಕರನ್ನು ಬಂಧಿಸಿದ್ದಾರೆ. ನಾಲ್ಲು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬುದ್ದಿ ಹೇಳಿದ್ದಾರೆ.

ಇಂತಹ ಹುಚ್ಚುತನದ ಬೈಕ್ ವ್ಹೀಲಿಂಗ್ ನೋಡುವ ಮಕ್ಕಳೂ ಕೂಡ ತಾಸಿಸುವ ರಸ್ತೆಗಳಲ್ಲಿ ಸೈಕಲ್ ವ್ಹೀಲಿಂಗ್ ನಡೆಸುವುದು ಉಂಟು. ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ ಸೈಕಲ್ ತುಳಿಯುವುದು ತನ್ನ ಸ್ನೇಹಿತರನ್ನು ರಂಜಿಸುವುದು ನಡೆಯುತ್ತಲೇ ಇದೆ. ಇದನ್ನು ನೋಡಿಯೂ ಪೋಷಕರೂ ಮಕ್ಕಳನ್ನು ಗದರಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ. ಜನಬಿಡ ರಸ್ತೆಗಳಲ್ಲಿ ಇಂತಹ ಚಟುವಟಿಕೆಗಳು ನಡೆಯದಂತೆ ಪೊಲೀಸ್ ಇಲಾಖೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕು.ಪೋಷಕರು ಬುದ್ಧಿ ಹೇಳುವ ಕೆಲಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...