Homeಕರ್ನಾಟಕಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ - ವಿಡಿಯೋ ನೋಡಿ

ಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ – ವಿಡಿಯೋ ನೋಡಿ

- Advertisement -
- Advertisement -

ತುಮಕೂರು ನಗರದಲ್ಲಿ ಕೆಲ ಯುವಕರ ಬೈಕ್ ವೀಲಿಂಗ್ ಮತ್ತು ಹುಚ್ಚು ಸಾಹಸದ ಚಟುವಟಿಕೆಗಳು ಹದ್ದು ಮೀರಿದೆ. ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟು ಹಲವರನ್ನು ಬಂಧಿಸಿದ್ದರೂ ಈ ಅಪಾಕಾರಿ ಬೈಕ್ ವೀಲಿಂಗ್ ನಡೆದೇ ಇದೆ. ಮೊಬೈಲ್ ಗಳಲ್ಲಿ ಇಂತಹ ರೋಮಾಂಚನಕಾರಿ ವಿಡಿಯೋಗಳನ್ನು ನೋಡುವ ಯುವಕರು ತಾವೂ ಕೂಡ ಹಾಗೆ ಮಾಡುವ ಕ್ರಿಯೆಯಲ್ಲಿ ತೊಡಗಿದ್ದಾರೆ.

ಕುಣಿಗಲ್ ಮುಖ್ಯರಸ್ತೆ, ಸದಾಶಿವನಗರ, ಸೋಮೇಶ್ವರಪುರಂ ಮುಖ್ಯರಸ್ತೆ, ಉಪ್ಪಾರಹಳ್ಳಿ, ರಿಂಗ್ ರಸ್ತೆ ಹೀಗೆ ತುಮಕೂರಿನ ಹೊರವಲಯ ಮತ್ತು ನಗರದ ಮಧ್ಯ ಭಾಗದ ಜನನಿಬಿಡ ರಸ್ತೆಗಳಲ್ಲಿ ಸಾಹಸಕಾರಿ ಬೈಕ್ ರೈಡಿಂಗ್ ಮತ್ತು ಅತಿ ವೇಗ ಜೋರು ಶಬ್ದ ಬರುವಂತೆ ಬೈಕ್ ಓಡಿಸುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ.

ಇದರಿಂದ ರಸ್ತೆಯಲ್ಲಿ ಹೋಗುವ ಇತರ ಬೈಕ್ ಸವಾರರು ಹೆದರಿಕೊಂಡು ದಾರಿ ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಬೈಕ್ ಸವಾರರು ಮೇಲೆ ಬರಬಹುದೆಂಬ ಕಾರಣದಿಂದ ದಾರಿ ಬಿಡಲು ಹೋಗಿ ಬಿದ್ದಿದ್ದಾರೆ. ಪಾದಚಾರಿಗಳು ಮತ್ತು ಸಾಮಾನ್ಯರು ಈ ಕರ್ಕಶ ಶಬ್ದ ಕೇಳಲಾರದೆ ಬಾಯಿಗೆ ಬಂದಂತೆ ಬೈಯ್ಯುವುದು ಉಂಟು.

ಇಂತಹ ಕೃತ್ಯದಲ್ಲಿ ತೊಡಗುವ ಯುವಕರ ತಂದೆ-ತಾಯಿ ಮತ್ತು ಪೋಷಕರು ಕೂಡ ತಮ್ಮ ಮಕ್ಕಳಿಗೆ ಬುದ್ದಿ ಹೇಳುವಂತಹ ಕೆಲಸ ಮಾಡಬೇಕು. ಇಲ್ಲದಿದ್ದರೆ ಹುಚ್ಚು ಸಾಹಸ ಮಾಡಲು ಹೋಗಿ ಜೀವಕ್ಕೆ ಸಂಚಕಾರ ತಂದುಕೊಳ್ಳಬಹುದು ಇಲ್ಲವೇ ಅಪಘಾತವಾಗಿ ಕೈಕಾಲು ಕಳೆದುಕೊಳ್ಳಬಹುದು. ತಾವು ಜೀವಕ್ಕೆ ಹಾನಿ ತಂದುಕೊಳ್ಳುವ ಜೊತೆಗೆ ಬೇರೆಯವರ ಜೀವಕ್ಕೂ ಕುತ್ತು ತರುತ್ತಾರೆ. ಹೀಗಾಗಿ ಬುದ್ಧಿ ಹೇಳಿ ಅವರು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರ ವಹಿಸುವುದು ಒಳ್ಳೆಯದು.

ಇನ್ನೊಂದೆಡೆ ಬೈಕ್ ಚಾಲಕ ವೇಗವಾಗಿ ಓಡಿಸಿದರೆ ಹಿಂದೆ ಕುಳಿತ ಯುವಕರು ಬೈಕ್ ಸೀಟಿನ ಮೇಲೆ ನಿಂತು ಕೇಕೆ ಹೊಡೆಯುತ್ತಾ ಹೋಗುತ್ತಾರೆ. ಇದು ಅವರಿಗೆ ರಂಜನೆಯ ವಿಷಯವಾದರೆ ಬೇರೆಯವರಿಗೆ ಅಪಾಯ ತಂದೊಡ್ಡುವುದು ಆಗಿದೆ. ಬೈಕ್ ರೈಡಿಂಗ್ ವಿಡಿಯೋ ವೈರಲ್ ಆಗಿರುವುದು ಪರಿಶೀಲಿಸಿದ ತುಮಕೂರು ಪೊಲೀಸರು ಎಂಟು ಜನ ಯುವಕರನ್ನು ಬಂಧಿಸಿದ್ದಾರೆ. ನಾಲ್ಲು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬುದ್ದಿ ಹೇಳಿದ್ದಾರೆ.

ಇಂತಹ ಹುಚ್ಚುತನದ ಬೈಕ್ ವ್ಹೀಲಿಂಗ್ ನೋಡುವ ಮಕ್ಕಳೂ ಕೂಡ ತಾಸಿಸುವ ರಸ್ತೆಗಳಲ್ಲಿ ಸೈಕಲ್ ವ್ಹೀಲಿಂಗ್ ನಡೆಸುವುದು ಉಂಟು. ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ ಸೈಕಲ್ ತುಳಿಯುವುದು ತನ್ನ ಸ್ನೇಹಿತರನ್ನು ರಂಜಿಸುವುದು ನಡೆಯುತ್ತಲೇ ಇದೆ. ಇದನ್ನು ನೋಡಿಯೂ ಪೋಷಕರೂ ಮಕ್ಕಳನ್ನು ಗದರಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ. ಜನಬಿಡ ರಸ್ತೆಗಳಲ್ಲಿ ಇಂತಹ ಚಟುವಟಿಕೆಗಳು ನಡೆಯದಂತೆ ಪೊಲೀಸ್ ಇಲಾಖೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕು.ಪೋಷಕರು ಬುದ್ಧಿ ಹೇಳುವ ಕೆಲಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...