Homeಕರ್ನಾಟಕಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ - ವಿಡಿಯೋ ನೋಡಿ

ಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ – ವಿಡಿಯೋ ನೋಡಿ

- Advertisement -
- Advertisement -

ತುಮಕೂರು ನಗರದಲ್ಲಿ ಕೆಲ ಯುವಕರ ಬೈಕ್ ವೀಲಿಂಗ್ ಮತ್ತು ಹುಚ್ಚು ಸಾಹಸದ ಚಟುವಟಿಕೆಗಳು ಹದ್ದು ಮೀರಿದೆ. ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟು ಹಲವರನ್ನು ಬಂಧಿಸಿದ್ದರೂ ಈ ಅಪಾಕಾರಿ ಬೈಕ್ ವೀಲಿಂಗ್ ನಡೆದೇ ಇದೆ. ಮೊಬೈಲ್ ಗಳಲ್ಲಿ ಇಂತಹ ರೋಮಾಂಚನಕಾರಿ ವಿಡಿಯೋಗಳನ್ನು ನೋಡುವ ಯುವಕರು ತಾವೂ ಕೂಡ ಹಾಗೆ ಮಾಡುವ ಕ್ರಿಯೆಯಲ್ಲಿ ತೊಡಗಿದ್ದಾರೆ.

ಕುಣಿಗಲ್ ಮುಖ್ಯರಸ್ತೆ, ಸದಾಶಿವನಗರ, ಸೋಮೇಶ್ವರಪುರಂ ಮುಖ್ಯರಸ್ತೆ, ಉಪ್ಪಾರಹಳ್ಳಿ, ರಿಂಗ್ ರಸ್ತೆ ಹೀಗೆ ತುಮಕೂರಿನ ಹೊರವಲಯ ಮತ್ತು ನಗರದ ಮಧ್ಯ ಭಾಗದ ಜನನಿಬಿಡ ರಸ್ತೆಗಳಲ್ಲಿ ಸಾಹಸಕಾರಿ ಬೈಕ್ ರೈಡಿಂಗ್ ಮತ್ತು ಅತಿ ವೇಗ ಜೋರು ಶಬ್ದ ಬರುವಂತೆ ಬೈಕ್ ಓಡಿಸುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ.

ಇದರಿಂದ ರಸ್ತೆಯಲ್ಲಿ ಹೋಗುವ ಇತರ ಬೈಕ್ ಸವಾರರು ಹೆದರಿಕೊಂಡು ದಾರಿ ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಬೈಕ್ ಸವಾರರು ಮೇಲೆ ಬರಬಹುದೆಂಬ ಕಾರಣದಿಂದ ದಾರಿ ಬಿಡಲು ಹೋಗಿ ಬಿದ್ದಿದ್ದಾರೆ. ಪಾದಚಾರಿಗಳು ಮತ್ತು ಸಾಮಾನ್ಯರು ಈ ಕರ್ಕಶ ಶಬ್ದ ಕೇಳಲಾರದೆ ಬಾಯಿಗೆ ಬಂದಂತೆ ಬೈಯ್ಯುವುದು ಉಂಟು.

ಇಂತಹ ಕೃತ್ಯದಲ್ಲಿ ತೊಡಗುವ ಯುವಕರ ತಂದೆ-ತಾಯಿ ಮತ್ತು ಪೋಷಕರು ಕೂಡ ತಮ್ಮ ಮಕ್ಕಳಿಗೆ ಬುದ್ದಿ ಹೇಳುವಂತಹ ಕೆಲಸ ಮಾಡಬೇಕು. ಇಲ್ಲದಿದ್ದರೆ ಹುಚ್ಚು ಸಾಹಸ ಮಾಡಲು ಹೋಗಿ ಜೀವಕ್ಕೆ ಸಂಚಕಾರ ತಂದುಕೊಳ್ಳಬಹುದು ಇಲ್ಲವೇ ಅಪಘಾತವಾಗಿ ಕೈಕಾಲು ಕಳೆದುಕೊಳ್ಳಬಹುದು. ತಾವು ಜೀವಕ್ಕೆ ಹಾನಿ ತಂದುಕೊಳ್ಳುವ ಜೊತೆಗೆ ಬೇರೆಯವರ ಜೀವಕ್ಕೂ ಕುತ್ತು ತರುತ್ತಾರೆ. ಹೀಗಾಗಿ ಬುದ್ಧಿ ಹೇಳಿ ಅವರು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರ ವಹಿಸುವುದು ಒಳ್ಳೆಯದು.

ಇನ್ನೊಂದೆಡೆ ಬೈಕ್ ಚಾಲಕ ವೇಗವಾಗಿ ಓಡಿಸಿದರೆ ಹಿಂದೆ ಕುಳಿತ ಯುವಕರು ಬೈಕ್ ಸೀಟಿನ ಮೇಲೆ ನಿಂತು ಕೇಕೆ ಹೊಡೆಯುತ್ತಾ ಹೋಗುತ್ತಾರೆ. ಇದು ಅವರಿಗೆ ರಂಜನೆಯ ವಿಷಯವಾದರೆ ಬೇರೆಯವರಿಗೆ ಅಪಾಯ ತಂದೊಡ್ಡುವುದು ಆಗಿದೆ. ಬೈಕ್ ರೈಡಿಂಗ್ ವಿಡಿಯೋ ವೈರಲ್ ಆಗಿರುವುದು ಪರಿಶೀಲಿಸಿದ ತುಮಕೂರು ಪೊಲೀಸರು ಎಂಟು ಜನ ಯುವಕರನ್ನು ಬಂಧಿಸಿದ್ದಾರೆ. ನಾಲ್ಲು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬುದ್ದಿ ಹೇಳಿದ್ದಾರೆ.

ಇಂತಹ ಹುಚ್ಚುತನದ ಬೈಕ್ ವ್ಹೀಲಿಂಗ್ ನೋಡುವ ಮಕ್ಕಳೂ ಕೂಡ ತಾಸಿಸುವ ರಸ್ತೆಗಳಲ್ಲಿ ಸೈಕಲ್ ವ್ಹೀಲಿಂಗ್ ನಡೆಸುವುದು ಉಂಟು. ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ ಸೈಕಲ್ ತುಳಿಯುವುದು ತನ್ನ ಸ್ನೇಹಿತರನ್ನು ರಂಜಿಸುವುದು ನಡೆಯುತ್ತಲೇ ಇದೆ. ಇದನ್ನು ನೋಡಿಯೂ ಪೋಷಕರೂ ಮಕ್ಕಳನ್ನು ಗದರಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ. ಜನಬಿಡ ರಸ್ತೆಗಳಲ್ಲಿ ಇಂತಹ ಚಟುವಟಿಕೆಗಳು ನಡೆಯದಂತೆ ಪೊಲೀಸ್ ಇಲಾಖೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕು.ಪೋಷಕರು ಬುದ್ಧಿ ಹೇಳುವ ಕೆಲಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...