Homeಕರ್ನಾಟಕಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ - ವಿಡಿಯೋ ನೋಡಿ

ಅಪಾಯಕಾರಿ ಬೈಕ್ ವೀಲಿಂಗ್: ತುಮಕೂರಿನಲ್ಲಿ 8 ಜನರ ಬಂಧನ – ವಿಡಿಯೋ ನೋಡಿ

- Advertisement -
- Advertisement -

ತುಮಕೂರು ನಗರದಲ್ಲಿ ಕೆಲ ಯುವಕರ ಬೈಕ್ ವೀಲಿಂಗ್ ಮತ್ತು ಹುಚ್ಚು ಸಾಹಸದ ಚಟುವಟಿಕೆಗಳು ಹದ್ದು ಮೀರಿದೆ. ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟು ಹಲವರನ್ನು ಬಂಧಿಸಿದ್ದರೂ ಈ ಅಪಾಕಾರಿ ಬೈಕ್ ವೀಲಿಂಗ್ ನಡೆದೇ ಇದೆ. ಮೊಬೈಲ್ ಗಳಲ್ಲಿ ಇಂತಹ ರೋಮಾಂಚನಕಾರಿ ವಿಡಿಯೋಗಳನ್ನು ನೋಡುವ ಯುವಕರು ತಾವೂ ಕೂಡ ಹಾಗೆ ಮಾಡುವ ಕ್ರಿಯೆಯಲ್ಲಿ ತೊಡಗಿದ್ದಾರೆ.

ಕುಣಿಗಲ್ ಮುಖ್ಯರಸ್ತೆ, ಸದಾಶಿವನಗರ, ಸೋಮೇಶ್ವರಪುರಂ ಮುಖ್ಯರಸ್ತೆ, ಉಪ್ಪಾರಹಳ್ಳಿ, ರಿಂಗ್ ರಸ್ತೆ ಹೀಗೆ ತುಮಕೂರಿನ ಹೊರವಲಯ ಮತ್ತು ನಗರದ ಮಧ್ಯ ಭಾಗದ ಜನನಿಬಿಡ ರಸ್ತೆಗಳಲ್ಲಿ ಸಾಹಸಕಾರಿ ಬೈಕ್ ರೈಡಿಂಗ್ ಮತ್ತು ಅತಿ ವೇಗ ಜೋರು ಶಬ್ದ ಬರುವಂತೆ ಬೈಕ್ ಓಡಿಸುವುದು ಸಾಮಾನ್ಯವಾಗಿ ಕಂಡು ಬರುತ್ತಿದೆ.

ಇದರಿಂದ ರಸ್ತೆಯಲ್ಲಿ ಹೋಗುವ ಇತರ ಬೈಕ್ ಸವಾರರು ಹೆದರಿಕೊಂಡು ದಾರಿ ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಬೈಕ್ ಸವಾರರು ಮೇಲೆ ಬರಬಹುದೆಂಬ ಕಾರಣದಿಂದ ದಾರಿ ಬಿಡಲು ಹೋಗಿ ಬಿದ್ದಿದ್ದಾರೆ. ಪಾದಚಾರಿಗಳು ಮತ್ತು ಸಾಮಾನ್ಯರು ಈ ಕರ್ಕಶ ಶಬ್ದ ಕೇಳಲಾರದೆ ಬಾಯಿಗೆ ಬಂದಂತೆ ಬೈಯ್ಯುವುದು ಉಂಟು.

ಇಂತಹ ಕೃತ್ಯದಲ್ಲಿ ತೊಡಗುವ ಯುವಕರ ತಂದೆ-ತಾಯಿ ಮತ್ತು ಪೋಷಕರು ಕೂಡ ತಮ್ಮ ಮಕ್ಕಳಿಗೆ ಬುದ್ದಿ ಹೇಳುವಂತಹ ಕೆಲಸ ಮಾಡಬೇಕು. ಇಲ್ಲದಿದ್ದರೆ ಹುಚ್ಚು ಸಾಹಸ ಮಾಡಲು ಹೋಗಿ ಜೀವಕ್ಕೆ ಸಂಚಕಾರ ತಂದುಕೊಳ್ಳಬಹುದು ಇಲ್ಲವೇ ಅಪಘಾತವಾಗಿ ಕೈಕಾಲು ಕಳೆದುಕೊಳ್ಳಬಹುದು. ತಾವು ಜೀವಕ್ಕೆ ಹಾನಿ ತಂದುಕೊಳ್ಳುವ ಜೊತೆಗೆ ಬೇರೆಯವರ ಜೀವಕ್ಕೂ ಕುತ್ತು ತರುತ್ತಾರೆ. ಹೀಗಾಗಿ ಬುದ್ಧಿ ಹೇಳಿ ಅವರು ಮುಂದೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರ ವಹಿಸುವುದು ಒಳ್ಳೆಯದು.

ಇನ್ನೊಂದೆಡೆ ಬೈಕ್ ಚಾಲಕ ವೇಗವಾಗಿ ಓಡಿಸಿದರೆ ಹಿಂದೆ ಕುಳಿತ ಯುವಕರು ಬೈಕ್ ಸೀಟಿನ ಮೇಲೆ ನಿಂತು ಕೇಕೆ ಹೊಡೆಯುತ್ತಾ ಹೋಗುತ್ತಾರೆ. ಇದು ಅವರಿಗೆ ರಂಜನೆಯ ವಿಷಯವಾದರೆ ಬೇರೆಯವರಿಗೆ ಅಪಾಯ ತಂದೊಡ್ಡುವುದು ಆಗಿದೆ. ಬೈಕ್ ರೈಡಿಂಗ್ ವಿಡಿಯೋ ವೈರಲ್ ಆಗಿರುವುದು ಪರಿಶೀಲಿಸಿದ ತುಮಕೂರು ಪೊಲೀಸರು ಎಂಟು ಜನ ಯುವಕರನ್ನು ಬಂಧಿಸಿದ್ದಾರೆ. ನಾಲ್ಲು ಬೈಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬುದ್ದಿ ಹೇಳಿದ್ದಾರೆ.

ಇಂತಹ ಹುಚ್ಚುತನದ ಬೈಕ್ ವ್ಹೀಲಿಂಗ್ ನೋಡುವ ಮಕ್ಕಳೂ ಕೂಡ ತಾಸಿಸುವ ರಸ್ತೆಗಳಲ್ಲಿ ಸೈಕಲ್ ವ್ಹೀಲಿಂಗ್ ನಡೆಸುವುದು ಉಂಟು. ಮುಂದಿನ ಚಕ್ರವನ್ನು ಮೇಲಕ್ಕೆ ಎತ್ತಿ ಸೈಕಲ್ ತುಳಿಯುವುದು ತನ್ನ ಸ್ನೇಹಿತರನ್ನು ರಂಜಿಸುವುದು ನಡೆಯುತ್ತಲೇ ಇದೆ. ಇದನ್ನು ನೋಡಿಯೂ ಪೋಷಕರೂ ಮಕ್ಕಳನ್ನು ಗದರಿಕೊಳ್ಳುವ ಗೋಜಿಗೆ ಹೋಗುತ್ತಿಲ್ಲ. ಜನಬಿಡ ರಸ್ತೆಗಳಲ್ಲಿ ಇಂತಹ ಚಟುವಟಿಕೆಗಳು ನಡೆಯದಂತೆ ಪೊಲೀಸ್ ಇಲಾಖೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕು.ಪೋಷಕರು ಬುದ್ಧಿ ಹೇಳುವ ಕೆಲಸ ಮಾಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...