Homeಕರೋನಾ ತಲ್ಲಣ‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್‌) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ

‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್‌) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ

ವೈದ್ಯರ ಸಲಹೆಯಿಲ್ಲದೆ ಇದನ್ನು ಪಡೆದರೆ ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಉಂಟಾಗಬಹುದು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಬಿಸಿ ನೀರಿನ ಆವಿ (ಸ್ಟೀಮ್‌ ಇನ್ಹಲೇಷನ್) ತೆಗೆದುಕೊಳ್ಳುವುದನ್ನು ಕೆಲವು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಿ, ಕೊರೊನಾ ತಡೆಗಟ್ಟುವ ಕ್ರಮವಾಗಿ ಪ್ರಚಾರ ಮಾಡಲಾಗುತ್ತಿದೆ. ಇದರ ವಿರುದ್ದ ತಮಿಳುನಾಡಿನ ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾ. ಸುಬ್ರಮಣಿಯನ್‌ ಸೋಮವಾರ ಎಚ್ಚರಿಕೆ ನೀಡಿದ್ದಾರೆ. ‘ವೈದ್ಯರ ಸಲಹೆಯಿಲ್ಲದೆ ಜನರು ಬಿಸಿ ನೀರಿನ ಆವಿಯನ್ನು ಪಡೆಯಬಾರದು. ಇದು ವೈರಸ್ ವೇಗವಾಗಿ ಹರಡಲು ಕಾರಣವಾಗಬಹುದು’ ಎಂದು ಅವರು ಹೇಳಿದ್ದಾರೆ.

ವೈದ್ಯರ ಸಲಹೆಯಿಲ್ಲದೆ ಜನರು ಬಿಸಿ ನೀರಿನ ಆವಿ ಪಡೆಯಬಾರದು. ಇದರಿಂದ ವೈರಸ್ ವೇಗವಾಗಿ ಹರಡಲು ಕಾರಣವಾಗಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ ಕೊರೊನಾ ಚಿಕಿತ್ಸೆಯ ಮಾರ್ಗಸೂಚಿಗಳನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಜನರು ಸ್ವಯಂ- ಔಷಧಿಗಳನ್ನು ಪಡೆಯಬಾರದು ಯಾಕೆಂದರೆ ಅದು ಮಾರಕವಾಗಿ ಪರಿಣಮಿಸಬಹುದು. ಈಗ, ಬಿಸಿ ನೀರಿನ ಆವಿ ತೆಗೆದುಕೊಳ್ಳುವುದು ಹೆಚ್ಚು ಚಾಲ್ತಿಗೆ ಬರುತ್ತಿದೆ, ಇದು ಶ್ವಾಸಕೋಶದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಜೊತೆಗೆ ಹತ್ತಿರದಲ್ಲಿರುವವರಿಗೆ ಸೋಂಕು ಹರಡಲು ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಬಿಸಿ ನೀರಿನ ಆವಿ ತೆಗೆದುಕೊಳ್ಳುವುದನ್ನು ಚಿಕಿತ್ಸೆಯಾಗಿ ಪರಿಗಣಿಸಲಾಗುವುದಿಲ್ಲ ಎಂದು ಸಚಿವರು ಸೂಚಿಸಿದ್ದಾರೆ. ಕೊರೊನಾ ಪಾಸಿಟಿವ್‌‌ ಆಗಿರುವ ವ್ಯಕ್ತಿಗಳು, ತಕ್ಷಣವೇ ಮನೆಮದ್ದುಗಳನ್ನು ಪಡೆಯಬಾರದು. ಸೂಕ್ತ ಚಿಕಿತ್ಸೆಗಾಗಿ ವೈದ್ಯರನ್ನು ಸಂಪರ್ಕಿಸಬೇಕು. ಕೊರೊನಾ ನೇರವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದರಿಂದ ವೈದ್ಯರ ಸಲಹೆಯಿಲ್ಲದೆ ಬಿಸಿ ನೀರಿನ ಆವಿ ತೆಗೆದುಕೊಳ್ಳಬಾರದು. ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್‌ಗಳನ್ನು ಅನುಸರಿಸಿ ಬಿಸಿ ನೀರಿನ ಅವಿಯನ್ನು ಆಶ್ರಯಿಸಬೇಡಿ ಎಂದು ಹೇಳಿದ್ದಾರೆ.

ಸರ್ಕಾರವು ಸಿದ್ದೌಷಧ ಕೊರೊನಾ ಆರೈಕೆ ಕೇಂದ್ರಗಳನ್ನು ಸ್ಥಾಪಿಸುತ್ತಿದೆ ಎಂದು ಹೇಳಿದ ಅವರು, ಈ ಕೇಂದ್ರಗಳಲ್ಲಿ ನೀಡಲಾಗುವ ಚಿಕಿತ್ಸೆಯು ಇತರ ವೈದ್ಯಕೀಯ ಮಾದರಿಯ ಹಾಗೂ ಸರ್ಕಾರಿ ವೈದ್ಯಕೀಯ ತಂಡವು ರೂಪಿಸಿರುವ ಮಾರ್ಗಸೂಚಿಗಳ ಪ್ರಕಾರ ವೈದ್ಯರ ಮೇಲ್ವಿಚಾರಣೆಯಲ್ಲಿ ನಡೆಯುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಭಾರತದಲ್ಲಿ ಕೊರೊನಾ ಇಳಿಮುಖ’- ಅಂಕಿ ಅಂಶ ವಿಶ್ವಾಸಾರ್ಹವಲ್ಲವೆಂದ WHO ವಿಜ್ಞಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...