Homeಮುಖಪುಟಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

- Advertisement -
- Advertisement -

ಹೊಸ ಕೃಷಿ ಕಾನೂನಿನ ವಿಷಯದಲ್ಲಿ ಕೇಂದ್ರ ಮತ್ತು ರೈತರ ನಡುವಿನ ಸಂಘರ್ಷ ಮುಂದುವರೆದಿದೆ. ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟಗಳು ರಾಜ್ಯದಾದ್ಯಂತ ಭಾರಿ ಟೀಕೆ ಮತ್ತು ಅಸಮಾಧಾನವನ್ನು ಎದುರಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಜೆಪಿ ಪಕ್ಷಗಳ ಕಾರ್ಯಕರ್ತರು, ನಾಯಕರು ಹಳ್ಳಿಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿ ಹೋರ್ಡಿಂಗ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಳ್ಳಲಾರಂಭಿಸಿದೆ.

ರಾಜ್ಯದ ಹಲವಾರು ಜಿಲ್ಲೆಗಳ ಹಳ್ಳಿಗಳಿಗೆ ಬಿಜೆಪಿ-ಜೆಜೆಪಿ ಮುಖಂಡರನ್ನು ಸಾಮಾಜಿಕ ಕಾರ್ಯಕ್ರಮಗಳಿಗೆ ಆಹ್ವಾನಿಸುವುದನ್ನು ನಿಲ್ಲಿಸಿದ್ದಾರೆ. ಹಲವಾರು ಸ್ಥಳಗಳಲ್ಲಿ ಸಂಪೂರ್ಣ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಅಂಬಾಲಾ, ಕುರುಕ್ಷೇತ್ರ, ಕರ್ನಾಲ್, ಸಿರ್ಸಾ, ಜಿಂದ್, ಫತೇಹಾಬಾದ್, ಪಾಣಿಪತ್, ಸೋನಿಪತ್, ಜಜ್ಜರ್ ಮತ್ತು ರೋಹ್ಟಕ್ ಸೇರಿದಂತೆ ಹಲವಾರು ಜಿಲ್ಲೆಗಳ ಹಳ್ಳಿಗಳು ಆಡಳಿತಾರೂಢ ಮೈತ್ರಿಕೂಟದ ನಾಯರಿಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳನ್ನು ಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚಾರ್ಖಿ ದಾದ್ರಿ ಜಿಲ್ಲೆಯ ಸಮಸ್ಪುರ್ ಗ್ರಾಮದ ಪ್ರವೇಶ ಕೇಂದ್ರದಲ್ಲಿ “ಸರ್ವಜಾತಿಯ ಫೋಗತ್ ಖಾಪ್ 19” ಹಾಕಿದ ಪೋಸ್ಟರ್ ಹೀಗಿದೆ: “ಆಡಳಿತಾರೂಢ ಬಿಜೆಪಿ ಮತ್ತು ಜೆಜೆಪಿಗೆ ಗ್ರಾಮಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ”.

ಇದನ್ನೂ ಓದಿ:ರಿಹಾನ್ನಾ, ಗ್ರೇಟಾ ಯಾರೆಂದು ಗೊತ್ತಿಲ್ಲ, ಅವರು ಹೋರಾಟ ಬೆಂಬಲಿಸಿದರೆ ತಪ್ಪೇನಿದೆ-ಟಿಕಾಯತ್‌

ರೋಹ್ಟಕ್‌ನ ಭೆನಿ ಚಂದರ್ಪಾಲ್ ಗ್ರಾಮದ ಪೋಸ್ಟರ್‌ ಒಂದು ಬಿಜೆಪಿ-ಜೆಜೆಪಿ ನಾಯಕರನ್ನು ಬಹಿಷ್ಕರಿಸುವುದಾಗಿ ಘೋಷಿಸುತ್ತದಲ್ಲದೆ, ಎಚ್ಚರಿಕೆಯನ್ನೂ ನೀಡುತ್ತದೆ. ಅದರಲ್ಲಿ, “ಬಿಜೆಪಿ ಹಾಗೂ ಜೆಜೆಪಿಗರು ಗ್ರಾಮಕ್ಕೆ ಪ್ರವೇಶಿಸಿದರೆ ಅವರ ಜೀವ ಮತ್ತು ಆಸ್ತಿಪಾಸ್ತಿಗೆ ಅವದೇ ಜವಾಬ್ದಾರರಾಗಿರುತ್ತಾರೆ” ಎಂದು ಬರೆದಿದೆ.

ರಾಜ್ಯದ ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಮತ್ತು ಅವರ ಮೊಮ್ಮಗ ರಂಜಿತ್ ಸಿಂಗ್ ಅವರ ತವರೂರಾದ  ನಾನಕ್ಪುರ ಮತ್ತು ಸಿರ್ಸಾದಲ್ಲಿನ ಹಲವಾರು ಹಳ್ಳಿಗಳಲ್ಲಿ ಇಬ್ಬರಿಗೂ ಪ್ರವೇಶವನ್ನು ನಿಷೇಧಿಸಿದ್ದಾರೆ. ಬಿಜೆಪಿ ಅಥವಾ ಜೆಜೆಪಿಯ ಯಾರಾದರು ನಾಯಕರು ಗ್ರಾಮಕ್ಕೆ ಪ್ರವೇಶಿಸಿದರೆ, ಸರ್ಕಾರ ರೈತರ ಮೇಲೆ ಲಾಠಿಚಾರ್ಜ್ ಮಾಡಿದಂತೆ ಗ್ರಾಮಸ್ಥರು ಲಾಠಿಚಾರ್ಜ್ ಮಾಡುತ್ತಾರೆ ಎಂದು ಎಚ್ಚರಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಕ್ಷೇತ್ರದ ಹಳ್ಳಿಗಳಾದ ಜೈಸಿಂಗ್‌ಪುರ, ಡೇರಾ ಗಾಮಾ, ಖಿಜ್ರಾಬಾದ್ ಮತ್ತು ಕರ್ನಾಲ್ ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಇದೇ ರೀತಿಯ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...