Homeಮುಖಪುಟಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

- Advertisement -
- Advertisement -

ಹೊಸ ಕೃಷಿ ಕಾನೂನಿನ ವಿಷಯದಲ್ಲಿ ಕೇಂದ್ರ ಮತ್ತು ರೈತರ ನಡುವಿನ ಸಂಘರ್ಷ ಮುಂದುವರೆದಿದೆ. ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟಗಳು ರಾಜ್ಯದಾದ್ಯಂತ ಭಾರಿ ಟೀಕೆ ಮತ್ತು ಅಸಮಾಧಾನವನ್ನು ಎದುರಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಜೆಪಿ ಪಕ್ಷಗಳ ಕಾರ್ಯಕರ್ತರು, ನಾಯಕರು ಹಳ್ಳಿಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿ ಹೋರ್ಡಿಂಗ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಳ್ಳಲಾರಂಭಿಸಿದೆ.

ರಾಜ್ಯದ ಹಲವಾರು ಜಿಲ್ಲೆಗಳ ಹಳ್ಳಿಗಳಿಗೆ ಬಿಜೆಪಿ-ಜೆಜೆಪಿ ಮುಖಂಡರನ್ನು ಸಾಮಾಜಿಕ ಕಾರ್ಯಕ್ರಮಗಳಿಗೆ ಆಹ್ವಾನಿಸುವುದನ್ನು ನಿಲ್ಲಿಸಿದ್ದಾರೆ. ಹಲವಾರು ಸ್ಥಳಗಳಲ್ಲಿ ಸಂಪೂರ್ಣ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಅಂಬಾಲಾ, ಕುರುಕ್ಷೇತ್ರ, ಕರ್ನಾಲ್, ಸಿರ್ಸಾ, ಜಿಂದ್, ಫತೇಹಾಬಾದ್, ಪಾಣಿಪತ್, ಸೋನಿಪತ್, ಜಜ್ಜರ್ ಮತ್ತು ರೋಹ್ಟಕ್ ಸೇರಿದಂತೆ ಹಲವಾರು ಜಿಲ್ಲೆಗಳ ಹಳ್ಳಿಗಳು ಆಡಳಿತಾರೂಢ ಮೈತ್ರಿಕೂಟದ ನಾಯರಿಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳನ್ನು ಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚಾರ್ಖಿ ದಾದ್ರಿ ಜಿಲ್ಲೆಯ ಸಮಸ್ಪುರ್ ಗ್ರಾಮದ ಪ್ರವೇಶ ಕೇಂದ್ರದಲ್ಲಿ “ಸರ್ವಜಾತಿಯ ಫೋಗತ್ ಖಾಪ್ 19” ಹಾಕಿದ ಪೋಸ್ಟರ್ ಹೀಗಿದೆ: “ಆಡಳಿತಾರೂಢ ಬಿಜೆಪಿ ಮತ್ತು ಜೆಜೆಪಿಗೆ ಗ್ರಾಮಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ”.

ಇದನ್ನೂ ಓದಿ:ರಿಹಾನ್ನಾ, ಗ್ರೇಟಾ ಯಾರೆಂದು ಗೊತ್ತಿಲ್ಲ, ಅವರು ಹೋರಾಟ ಬೆಂಬಲಿಸಿದರೆ ತಪ್ಪೇನಿದೆ-ಟಿಕಾಯತ್‌

ರೋಹ್ಟಕ್‌ನ ಭೆನಿ ಚಂದರ್ಪಾಲ್ ಗ್ರಾಮದ ಪೋಸ್ಟರ್‌ ಒಂದು ಬಿಜೆಪಿ-ಜೆಜೆಪಿ ನಾಯಕರನ್ನು ಬಹಿಷ್ಕರಿಸುವುದಾಗಿ ಘೋಷಿಸುತ್ತದಲ್ಲದೆ, ಎಚ್ಚರಿಕೆಯನ್ನೂ ನೀಡುತ್ತದೆ. ಅದರಲ್ಲಿ, “ಬಿಜೆಪಿ ಹಾಗೂ ಜೆಜೆಪಿಗರು ಗ್ರಾಮಕ್ಕೆ ಪ್ರವೇಶಿಸಿದರೆ ಅವರ ಜೀವ ಮತ್ತು ಆಸ್ತಿಪಾಸ್ತಿಗೆ ಅವದೇ ಜವಾಬ್ದಾರರಾಗಿರುತ್ತಾರೆ” ಎಂದು ಬರೆದಿದೆ.

ರಾಜ್ಯದ ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಮತ್ತು ಅವರ ಮೊಮ್ಮಗ ರಂಜಿತ್ ಸಿಂಗ್ ಅವರ ತವರೂರಾದ  ನಾನಕ್ಪುರ ಮತ್ತು ಸಿರ್ಸಾದಲ್ಲಿನ ಹಲವಾರು ಹಳ್ಳಿಗಳಲ್ಲಿ ಇಬ್ಬರಿಗೂ ಪ್ರವೇಶವನ್ನು ನಿಷೇಧಿಸಿದ್ದಾರೆ. ಬಿಜೆಪಿ ಅಥವಾ ಜೆಜೆಪಿಯ ಯಾರಾದರು ನಾಯಕರು ಗ್ರಾಮಕ್ಕೆ ಪ್ರವೇಶಿಸಿದರೆ, ಸರ್ಕಾರ ರೈತರ ಮೇಲೆ ಲಾಠಿಚಾರ್ಜ್ ಮಾಡಿದಂತೆ ಗ್ರಾಮಸ್ಥರು ಲಾಠಿಚಾರ್ಜ್ ಮಾಡುತ್ತಾರೆ ಎಂದು ಎಚ್ಚರಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಕ್ಷೇತ್ರದ ಹಳ್ಳಿಗಳಾದ ಜೈಸಿಂಗ್‌ಪುರ, ಡೇರಾ ಗಾಮಾ, ಖಿಜ್ರಾಬಾದ್ ಮತ್ತು ಕರ್ನಾಲ್ ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಇದೇ ರೀತಿಯ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...