Homeಮುಖಪುಟಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

- Advertisement -
- Advertisement -

ಹೊಸ ಕೃಷಿ ಕಾನೂನಿನ ವಿಷಯದಲ್ಲಿ ಕೇಂದ್ರ ಮತ್ತು ರೈತರ ನಡುವಿನ ಸಂಘರ್ಷ ಮುಂದುವರೆದಿದೆ. ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟಗಳು ರಾಜ್ಯದಾದ್ಯಂತ ಭಾರಿ ಟೀಕೆ ಮತ್ತು ಅಸಮಾಧಾನವನ್ನು ಎದುರಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಜೆಪಿ ಪಕ್ಷಗಳ ಕಾರ್ಯಕರ್ತರು, ನಾಯಕರು ಹಳ್ಳಿಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿ ಹೋರ್ಡಿಂಗ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಳ್ಳಲಾರಂಭಿಸಿದೆ.

ರಾಜ್ಯದ ಹಲವಾರು ಜಿಲ್ಲೆಗಳ ಹಳ್ಳಿಗಳಿಗೆ ಬಿಜೆಪಿ-ಜೆಜೆಪಿ ಮುಖಂಡರನ್ನು ಸಾಮಾಜಿಕ ಕಾರ್ಯಕ್ರಮಗಳಿಗೆ ಆಹ್ವಾನಿಸುವುದನ್ನು ನಿಲ್ಲಿಸಿದ್ದಾರೆ. ಹಲವಾರು ಸ್ಥಳಗಳಲ್ಲಿ ಸಂಪೂರ್ಣ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಅಂಬಾಲಾ, ಕುರುಕ್ಷೇತ್ರ, ಕರ್ನಾಲ್, ಸಿರ್ಸಾ, ಜಿಂದ್, ಫತೇಹಾಬಾದ್, ಪಾಣಿಪತ್, ಸೋನಿಪತ್, ಜಜ್ಜರ್ ಮತ್ತು ರೋಹ್ಟಕ್ ಸೇರಿದಂತೆ ಹಲವಾರು ಜಿಲ್ಲೆಗಳ ಹಳ್ಳಿಗಳು ಆಡಳಿತಾರೂಢ ಮೈತ್ರಿಕೂಟದ ನಾಯರಿಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳನ್ನು ಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚಾರ್ಖಿ ದಾದ್ರಿ ಜಿಲ್ಲೆಯ ಸಮಸ್ಪುರ್ ಗ್ರಾಮದ ಪ್ರವೇಶ ಕೇಂದ್ರದಲ್ಲಿ “ಸರ್ವಜಾತಿಯ ಫೋಗತ್ ಖಾಪ್ 19” ಹಾಕಿದ ಪೋಸ್ಟರ್ ಹೀಗಿದೆ: “ಆಡಳಿತಾರೂಢ ಬಿಜೆಪಿ ಮತ್ತು ಜೆಜೆಪಿಗೆ ಗ್ರಾಮಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ”.

ಇದನ್ನೂ ಓದಿ:ರಿಹಾನ್ನಾ, ಗ್ರೇಟಾ ಯಾರೆಂದು ಗೊತ್ತಿಲ್ಲ, ಅವರು ಹೋರಾಟ ಬೆಂಬಲಿಸಿದರೆ ತಪ್ಪೇನಿದೆ-ಟಿಕಾಯತ್‌

ರೋಹ್ಟಕ್‌ನ ಭೆನಿ ಚಂದರ್ಪಾಲ್ ಗ್ರಾಮದ ಪೋಸ್ಟರ್‌ ಒಂದು ಬಿಜೆಪಿ-ಜೆಜೆಪಿ ನಾಯಕರನ್ನು ಬಹಿಷ್ಕರಿಸುವುದಾಗಿ ಘೋಷಿಸುತ್ತದಲ್ಲದೆ, ಎಚ್ಚರಿಕೆಯನ್ನೂ ನೀಡುತ್ತದೆ. ಅದರಲ್ಲಿ, “ಬಿಜೆಪಿ ಹಾಗೂ ಜೆಜೆಪಿಗರು ಗ್ರಾಮಕ್ಕೆ ಪ್ರವೇಶಿಸಿದರೆ ಅವರ ಜೀವ ಮತ್ತು ಆಸ್ತಿಪಾಸ್ತಿಗೆ ಅವದೇ ಜವಾಬ್ದಾರರಾಗಿರುತ್ತಾರೆ” ಎಂದು ಬರೆದಿದೆ.

ರಾಜ್ಯದ ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಮತ್ತು ಅವರ ಮೊಮ್ಮಗ ರಂಜಿತ್ ಸಿಂಗ್ ಅವರ ತವರೂರಾದ  ನಾನಕ್ಪುರ ಮತ್ತು ಸಿರ್ಸಾದಲ್ಲಿನ ಹಲವಾರು ಹಳ್ಳಿಗಳಲ್ಲಿ ಇಬ್ಬರಿಗೂ ಪ್ರವೇಶವನ್ನು ನಿಷೇಧಿಸಿದ್ದಾರೆ. ಬಿಜೆಪಿ ಅಥವಾ ಜೆಜೆಪಿಯ ಯಾರಾದರು ನಾಯಕರು ಗ್ರಾಮಕ್ಕೆ ಪ್ರವೇಶಿಸಿದರೆ, ಸರ್ಕಾರ ರೈತರ ಮೇಲೆ ಲಾಠಿಚಾರ್ಜ್ ಮಾಡಿದಂತೆ ಗ್ರಾಮಸ್ಥರು ಲಾಠಿಚಾರ್ಜ್ ಮಾಡುತ್ತಾರೆ ಎಂದು ಎಚ್ಚರಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಕ್ಷೇತ್ರದ ಹಳ್ಳಿಗಳಾದ ಜೈಸಿಂಗ್‌ಪುರ, ಡೇರಾ ಗಾಮಾ, ಖಿಜ್ರಾಬಾದ್ ಮತ್ತು ಕರ್ನಾಲ್ ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಇದೇ ರೀತಿಯ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...