Homeಮುಖಪುಟಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

ಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

- Advertisement -
- Advertisement -

ಚುನಾವಣಾ ಹೊಸ್ತಿಲ್ಲಲ್ಲೇ ಚುನಾವಣಾ ಆಯುಕ್ತ ಗೋಯೆಲ್ ರಾಜೀನಾಮೆ ದೇಶದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಭಾರತ ಸರಕಾರದ ವಿದ್ಯುತ್ ಮತ್ತು ಹಣಕಾಸು ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಭಾರತದ ಚುನಾವಣಾ ಆಯೋಗದ (ಇಸಿಐ) ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರವನ್ನು ಬರೆದಿದ್ದು, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಎತ್ತಿಹಿಡಿಯಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದಾರೆ.

ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುತ್ತಿದೆ ಮತ್ತು ತನ್ನ ಪರವಾಗಿ ಚುನವಣಾ ಆಯೋಗವನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ ಶರ್ಮಾ, ಚುನಾವಣಾ ಆಯುಕ್ತ ಸ್ಥಾನದಿಂದ ಅರುಣ್ ಗೋಯೆಲ್ ಹಠಾತ್ ನಿರ್ಗಮನದ ಬಗ್ಗೆ ಪ್ರಶ್ನಿಸಿದ್ದಾರೆ. ಶರ್ಮಾ ಅವರು ರಾಷ್ಟ್ರಪತಿಗಳಿಗೆ ಈ ಕುರಿತು ಬಹಿರಂಗ ಪತ್ರವನ್ನು ಬರೆದಿದ್ದು, ನನ್ನ ದೃಷ್ಟಿಯಲ್ಲಿ,  ಗೋಯೆಲ್ ಅವರ ಹಠಾತ್ ಮತ್ತು ವಿವರಣೆ ನೀಡದ ನಿರ್ಗಮನವು ಈ ಕೆಳಗಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ..

1.ಚುನಾವಣಾ ಪ್ರಕ್ರಿಯೆಯಲ್ಲಿ ರಾಜಕಾರಣಿಗಳು ಮಧ್ಯಪ್ರವೇಶಿಸುವ ಮೂಲಕ ಪಾವಿತ್ರ್ಯತೆಯನ್ನು ಹಾಳುಮಾಡುವ  ವಿಚಾರದಲ್ಲಿ ಗೋಯೆಲ್ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

2.ಇವಿಎಂಗಳ ಬಳಕೆಯ ಪರಿಣಾಮಕಾರಿತ್ವದ ಬಗ್ಗೆ ಗೋಯೆಲ್ ಅನುಮಾನ ವ್ಯಕ್ತಪಡಿಸಿದ್ದಾರೆಯೇ?

3. ಚುನಾವಣಾ ಬಾಂಡ್‌ ಕುರಿತ ವಿವರಗಳನ್ನು ಬಹಿರಂಗಪಡಿಸದಂತೆ ಎಸ್‌ಬಿಐಗೆ ರಾಜಕಾರಣಿಗಳು ಒತ್ತಡ ಹೇರಿರುವ ಬಗ್ಗೆ ಅವರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆಯೇ?

5. ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು BEL, ECIL ಮತ್ತು SBI ಮಂಡಳಿಗಳಿಂದ ಬಿಜೆಪಿಯ ನಾಮನಿರ್ದೇಶಿತರನ್ನು ಹಿಂತೆಗೆದುಕೊಳ್ಳಬೇಕೆಂದು ಗೋಯೆಲ್ ಪ್ರಸ್ತಾಪಿಸಿದ್ದಾರೆಯೇ?

6.ಗೋಯೆಲ್ ಅವರು ರಾಜಕೀಯ ಕಾರ್ಯಕಾರಿಣಿಗಳನ್ನು ಅಸಮಾಧಾನಗೊಳಿಸುವಂತಹ ಯಾವುದೇ ವಿಷಯದ ಬಗ್ಗೆ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

7.ಆಡಳಿತ ಪಕ್ಷದ ಕುತಂತ್ರಗಳಿಗೆ ದಾರಿ ಮಾಡಿಕೊಡಲು ಅಧಿಕಾರದಲ್ಲಿರುವವರು ಗೋಯೆಲ್ ಅವರಿಗೆ ರಾಜೀನಾಮೆಯನ್ನು ನೀಡುವಂತೆ ಒತ್ತಾಯಿಸಿದ್ದಾರೆಯೇ? ಎಂದು ಶರ್ಮಾ ಅವರು ಪ್ರಶ್ನೆಯನ್ನು ಎತ್ತಿದ್ದಾರೆ.

ಲೋಕಸಭೆ ಚುನಾವಣೆಯ ಘೋಷಣೆಗೆ ಕೆಲವೇ ದಿನಗಳ ಮೊದಲು ಅರುಣ್ ಗೋಯೆಲ್ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಇದು ಜನರಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು. ಗೋಯಲ್‌ ರಾಜೀನಾಮೆ ಹಿನ್ನೆಲೆ ಚುನಾವಣಾ ಆಯೋಗದಲ್ಲಿ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕರು ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದರು.

ಈ ಮೊದಲು ಶರ್ಮಾ ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮತ್ತು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಬೋರ್ಡ್‌ಗಳಲ್ಲಿ ಬಿಜೆಪಿಯ ಪ್ರತಿನಿಧಿಗಳ ಆಯ್ಕೆಯನ್ನು ಪ್ರಶ್ನಿಸಿದ್ದರು. BEL ಮತ್ತು ECIL ಇವಿಎಂ ತಯಾರಿಯನ್ನು ಮಾಡುತ್ತದೆ. ಇಂತಹ ಸಂಸ್ಥೆಗಳಿಗೆ ಬಿಜೆಪಿ ತನ್ನ ನಾಯಕರನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸುವುದು ಅದರ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದ್ದರು.

ಇವಿಎಂಗಳ ದೋಷಗಳ ಬಗ್ಗೆ ಅನೇಕರು ವ್ಯಕ್ತಪಡಿಸಿದ ಕಳವಳಗಳನ್ನು ಇಸಿಐ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದೆ ಎಂದು ಹೇಳಿದ ಶರ್ಮಾ ಚುನಾವಣಾ ಬಾಂಡ್‌ ವಿಚಾರದಲ್ಲಿ ಕೂಡ ರಾಷ್ಟ್ರಪತಿಗಳ ಗಮನವನ್ನು ಸೆಳೆದಿದ್ದಾರೆ. ಎಸ್‌ಬಿಐ ಮಂಡಳಿಯಲ್ಲಿ ಬಿಜೆಪಿ ಪ್ರತಿನಿಧಿಗಳು ಇದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು ಒಂದು ಮಹತ್ವದ ತೀರ್ಪಿನಲ್ಲಿ, ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ ಮತ್ತು ದಾನಿಗಳು ಮತ್ತು ಪಕ್ಷದ ನಿಧಿಯ ಮೂಲಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಎಸ್‌ಬಿಐಗೆ ನಿರ್ದೇಶನ ನೀಡಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ವಿವರಗಳನ್ನು ಒದಗಿಸಲು ಜುಲೈ 30ರವರೆಗೆ ವಿಸ್ತರಣೆಯನ್ನು ಕೋರಿದೆ. ಮೂಲಭೂತವಾಗಿ, ಲೋಕಸಭೆ ಚುನಾವಣೆಯ ನಂತರವೇ ಆದೇಶಗಳನ್ನು ಅನುಸರಿಸಲು ಎಸ್‌ಬಿಐ ಒಪ್ಪಿಕೊಂಡಿದೆ. ಅಧಿಕಾರ ಶಾಹಿಗಳು ಎಸ್‌ಬಿಐಗೆ ಜೂನ್ ಅಂತ್ಯದವರೆಗೆ ಚುನಾವಣಾ ಬಾಂಡ್‌ ಬಿಡುಗಡೆಯಲ್ಲಿ ವಿಳಂಬ ಮಾಡುವಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಇಸಿಐ ಮೇಲೆ ಬಿಜೆಪಿ ಸಂಪೂರ್ಣ ಹಿಡಿತ ಸಾಧಿಸಲು ಮತ್ತು ಚುನಾವಣೆಗಳನ್ನು ದುರ್ಬಲಗೊಳಿಸುವ ಕುರಿತು ಕಳವಳಗಳನ್ನು ಶರ್ಮಾ ಎತ್ತಿ ತೋರಿಸಿದ್ದಾರೆ. ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಅಭ್ಯರ್ಥಿಗಳ ಆಯ್ಕೆಯಲ್ಲಿನ ಅಪಾರದರ್ಶಕತೆಯೂ ಇದರಲ್ಲಿ ಸೇರಿದೆ. ಚುನಾವಣಾ ಆಯುಕ್ತರ ನೇಮಕಾತಿಗೆ ಅಸ್ತಿತ್ವದಲ್ಲಿರುವ ಕಾರ್ಯವಿಧಾನವು ಪಾರದರ್ಶಕ ಮತ್ತು ವಸ್ತುನಿಷ್ಠವಾಗಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟವಾಗಿ ಹೇಳಿದೆ ಎಂದು ಮಾಜಿ ಐಎಎಸ್ ಅಧಿಕಾರಿ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...