Homeಮುಖಪುಟಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

ಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

- Advertisement -
- Advertisement -

ಚುನಾವಣಾ ಹೊಸ್ತಿಲ್ಲಲ್ಲೇ ಚುನಾವಣಾ ಆಯುಕ್ತ ಗೋಯೆಲ್ ರಾಜೀನಾಮೆ ದೇಶದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಭಾರತ ಸರಕಾರದ ವಿದ್ಯುತ್ ಮತ್ತು ಹಣಕಾಸು ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಭಾರತದ ಚುನಾವಣಾ ಆಯೋಗದ (ಇಸಿಐ) ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರವನ್ನು ಬರೆದಿದ್ದು, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಎತ್ತಿಹಿಡಿಯಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದಾರೆ.

ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುತ್ತಿದೆ ಮತ್ತು ತನ್ನ ಪರವಾಗಿ ಚುನವಣಾ ಆಯೋಗವನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ ಶರ್ಮಾ, ಚುನಾವಣಾ ಆಯುಕ್ತ ಸ್ಥಾನದಿಂದ ಅರುಣ್ ಗೋಯೆಲ್ ಹಠಾತ್ ನಿರ್ಗಮನದ ಬಗ್ಗೆ ಪ್ರಶ್ನಿಸಿದ್ದಾರೆ. ಶರ್ಮಾ ಅವರು ರಾಷ್ಟ್ರಪತಿಗಳಿಗೆ ಈ ಕುರಿತು ಬಹಿರಂಗ ಪತ್ರವನ್ನು ಬರೆದಿದ್ದು, ನನ್ನ ದೃಷ್ಟಿಯಲ್ಲಿ,  ಗೋಯೆಲ್ ಅವರ ಹಠಾತ್ ಮತ್ತು ವಿವರಣೆ ನೀಡದ ನಿರ್ಗಮನವು ಈ ಕೆಳಗಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ..

1.ಚುನಾವಣಾ ಪ್ರಕ್ರಿಯೆಯಲ್ಲಿ ರಾಜಕಾರಣಿಗಳು ಮಧ್ಯಪ್ರವೇಶಿಸುವ ಮೂಲಕ ಪಾವಿತ್ರ್ಯತೆಯನ್ನು ಹಾಳುಮಾಡುವ  ವಿಚಾರದಲ್ಲಿ ಗೋಯೆಲ್ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

2.ಇವಿಎಂಗಳ ಬಳಕೆಯ ಪರಿಣಾಮಕಾರಿತ್ವದ ಬಗ್ಗೆ ಗೋಯೆಲ್ ಅನುಮಾನ ವ್ಯಕ್ತಪಡಿಸಿದ್ದಾರೆಯೇ?

3. ಚುನಾವಣಾ ಬಾಂಡ್‌ ಕುರಿತ ವಿವರಗಳನ್ನು ಬಹಿರಂಗಪಡಿಸದಂತೆ ಎಸ್‌ಬಿಐಗೆ ರಾಜಕಾರಣಿಗಳು ಒತ್ತಡ ಹೇರಿರುವ ಬಗ್ಗೆ ಅವರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆಯೇ?

5. ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು BEL, ECIL ಮತ್ತು SBI ಮಂಡಳಿಗಳಿಂದ ಬಿಜೆಪಿಯ ನಾಮನಿರ್ದೇಶಿತರನ್ನು ಹಿಂತೆಗೆದುಕೊಳ್ಳಬೇಕೆಂದು ಗೋಯೆಲ್ ಪ್ರಸ್ತಾಪಿಸಿದ್ದಾರೆಯೇ?

6.ಗೋಯೆಲ್ ಅವರು ರಾಜಕೀಯ ಕಾರ್ಯಕಾರಿಣಿಗಳನ್ನು ಅಸಮಾಧಾನಗೊಳಿಸುವಂತಹ ಯಾವುದೇ ವಿಷಯದ ಬಗ್ಗೆ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

7.ಆಡಳಿತ ಪಕ್ಷದ ಕುತಂತ್ರಗಳಿಗೆ ದಾರಿ ಮಾಡಿಕೊಡಲು ಅಧಿಕಾರದಲ್ಲಿರುವವರು ಗೋಯೆಲ್ ಅವರಿಗೆ ರಾಜೀನಾಮೆಯನ್ನು ನೀಡುವಂತೆ ಒತ್ತಾಯಿಸಿದ್ದಾರೆಯೇ? ಎಂದು ಶರ್ಮಾ ಅವರು ಪ್ರಶ್ನೆಯನ್ನು ಎತ್ತಿದ್ದಾರೆ.

ಲೋಕಸಭೆ ಚುನಾವಣೆಯ ಘೋಷಣೆಗೆ ಕೆಲವೇ ದಿನಗಳ ಮೊದಲು ಅರುಣ್ ಗೋಯೆಲ್ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಇದು ಜನರಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು. ಗೋಯಲ್‌ ರಾಜೀನಾಮೆ ಹಿನ್ನೆಲೆ ಚುನಾವಣಾ ಆಯೋಗದಲ್ಲಿ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕರು ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದರು.

ಈ ಮೊದಲು ಶರ್ಮಾ ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮತ್ತು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಬೋರ್ಡ್‌ಗಳಲ್ಲಿ ಬಿಜೆಪಿಯ ಪ್ರತಿನಿಧಿಗಳ ಆಯ್ಕೆಯನ್ನು ಪ್ರಶ್ನಿಸಿದ್ದರು. BEL ಮತ್ತು ECIL ಇವಿಎಂ ತಯಾರಿಯನ್ನು ಮಾಡುತ್ತದೆ. ಇಂತಹ ಸಂಸ್ಥೆಗಳಿಗೆ ಬಿಜೆಪಿ ತನ್ನ ನಾಯಕರನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸುವುದು ಅದರ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದ್ದರು.

ಇವಿಎಂಗಳ ದೋಷಗಳ ಬಗ್ಗೆ ಅನೇಕರು ವ್ಯಕ್ತಪಡಿಸಿದ ಕಳವಳಗಳನ್ನು ಇಸಿಐ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದೆ ಎಂದು ಹೇಳಿದ ಶರ್ಮಾ ಚುನಾವಣಾ ಬಾಂಡ್‌ ವಿಚಾರದಲ್ಲಿ ಕೂಡ ರಾಷ್ಟ್ರಪತಿಗಳ ಗಮನವನ್ನು ಸೆಳೆದಿದ್ದಾರೆ. ಎಸ್‌ಬಿಐ ಮಂಡಳಿಯಲ್ಲಿ ಬಿಜೆಪಿ ಪ್ರತಿನಿಧಿಗಳು ಇದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು ಒಂದು ಮಹತ್ವದ ತೀರ್ಪಿನಲ್ಲಿ, ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ ಮತ್ತು ದಾನಿಗಳು ಮತ್ತು ಪಕ್ಷದ ನಿಧಿಯ ಮೂಲಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಎಸ್‌ಬಿಐಗೆ ನಿರ್ದೇಶನ ನೀಡಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ವಿವರಗಳನ್ನು ಒದಗಿಸಲು ಜುಲೈ 30ರವರೆಗೆ ವಿಸ್ತರಣೆಯನ್ನು ಕೋರಿದೆ. ಮೂಲಭೂತವಾಗಿ, ಲೋಕಸಭೆ ಚುನಾವಣೆಯ ನಂತರವೇ ಆದೇಶಗಳನ್ನು ಅನುಸರಿಸಲು ಎಸ್‌ಬಿಐ ಒಪ್ಪಿಕೊಂಡಿದೆ. ಅಧಿಕಾರ ಶಾಹಿಗಳು ಎಸ್‌ಬಿಐಗೆ ಜೂನ್ ಅಂತ್ಯದವರೆಗೆ ಚುನಾವಣಾ ಬಾಂಡ್‌ ಬಿಡುಗಡೆಯಲ್ಲಿ ವಿಳಂಬ ಮಾಡುವಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಇಸಿಐ ಮೇಲೆ ಬಿಜೆಪಿ ಸಂಪೂರ್ಣ ಹಿಡಿತ ಸಾಧಿಸಲು ಮತ್ತು ಚುನಾವಣೆಗಳನ್ನು ದುರ್ಬಲಗೊಳಿಸುವ ಕುರಿತು ಕಳವಳಗಳನ್ನು ಶರ್ಮಾ ಎತ್ತಿ ತೋರಿಸಿದ್ದಾರೆ. ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಅಭ್ಯರ್ಥಿಗಳ ಆಯ್ಕೆಯಲ್ಲಿನ ಅಪಾರದರ್ಶಕತೆಯೂ ಇದರಲ್ಲಿ ಸೇರಿದೆ. ಚುನಾವಣಾ ಆಯುಕ್ತರ ನೇಮಕಾತಿಗೆ ಅಸ್ತಿತ್ವದಲ್ಲಿರುವ ಕಾರ್ಯವಿಧಾನವು ಪಾರದರ್ಶಕ ಮತ್ತು ವಸ್ತುನಿಷ್ಠವಾಗಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟವಾಗಿ ಹೇಳಿದೆ ಎಂದು ಮಾಜಿ ಐಎಎಸ್ ಅಧಿಕಾರಿ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...