Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...