Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...