Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...