Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....