Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...