Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...