Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...