Homeಕರೋನಾ ತಲ್ಲಣಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ತೀವ್ರ ರೀತಿಯಲ್ಲಿ ಹರಡುತ್ತಿದೆ. ಕೊರೊನಾ ಹರಡದಂತೆ ರಾಜ್ಯ ಸರ್ಕಾರ ಈಗಾಗಲೆ ವೀಕೆಂಡ್ ಕರ್ಫ್ಯೂ ಹೆಸರಲ್ಲಿ ಅಘೋಷಿತ ಲಾಕ್‌ಡೌನ್‌ ಹೇರಿದೆ. ಶುಕ್ರವಾರದವರೆಗೂ ಕಟ್ಟು ನಿಟ್ಟಿನ ಮಾರ್ಗಸೂಚಿಗಳೊಂದಿಗೆ ನೈಟ್‌ ಕರ್ಫ್ಯೂ ಕೂಡಾ ಹೇರಲಾಗಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಮಾಸ್ಕ್‌ ಧರಿಸದೆ ರಾತ್ರಿ ಹೊತ್ತಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ರಾತ್ರಿ ಉಡುಪಿಯ ಅಮೃತ್‌ ಗಾರ್ಡನ್‌‌ನಲ್ಲಿ ಹೆಚ್ಚುವರಿ ಎಸ್‌.ಪಿ. ಕುಮಾರಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ವಿಡಿಯೊ ಹಾಗೂ ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳೆದ್ದಿತ್ತು. ಮಾಸ್ಕ್‌, ಕೊರೊನಾ ಮಾರ್ಗಸೂಚಿ, ನೈಟ್‌ಕರ್ಫ್ಯೂ ಎಲ್ಲವೂ ಸಾಮಾನ್ಯರಿಗೆ ಮಾತ್ರವೆ, ಅದು ಜಿಲ್ಲಾಧಿಕಾರಿಗೆ ಅನ್ವಯಿಸುವುದಿಲ್ಲವೆ ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ:  ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರಶ್ನಿಸಿದ್ದ ಪತ್ರಕರ್ತ ಶಶಿಧರ್‌ ಹೆಮ್ಮಾಡಿ, “ತಡರಾತ್ರಿ ಮನೆಗೆ ತಲುಪುತ್ತಿದ್ದ ಬಡಮನೆಗಳ ಹೆಣ್ಣು ಮಕ್ಕಳನ್ನು ಅವರು ಬಸ್‌ನಲ್ಲಿ ನಿಂತು ಪಯಣಿಸುತ್ತಾ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬೈದು ಬಸ್ಸಿನಿಂದ ಇಳಿಸಿದ್ದರು. ಇಂದು ನಾಳೆ, ನಾಡಿದ್ದು ನಡೆಯಬೇಕಾಗಿದ್ದ ನೂರಾರು ಮೆಹಂದಿ, ಮದುವೆ ಮನೆಗಳ ಸಂಭ್ರಮಕ್ಕೆ ಕಲ್ಲು ಹಾಕಿದ್ದಾರೆ. ಮದುವೆ ಮನೆಗೆ ಬರುವ ಅತಿಥಿಗಳ ಆಧಾರ್ ಕಾರ್ಡ್ ಅನ್ನು ಕೇಳುತ್ತಾರೆ.

ಆದರೆ ಶುಕ್ರವಾರ ಸಂಜೆ ನಡೆದ ಪೊಲೀಸ್ ಅಧಿಕಾರಿಯೋರ್ವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡ ಹಾಕದೆ ನಗುತ್ತಾ ನಿಂತಿದ್ದಾರೆ. ಕಾನೂನು, ಶಿಕ್ಷೆ, ಬೈಗುಳ, ಒದೆ ಎಲ್ಲ ಸಾಮಾನ್ಯ ಜನರಿಗೆ ಮಾತ್ರ ಅಲ್ಲವೇ ಜಿಲ್ಲಾಧಿಕಾರಿಗಳೇ? ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ಅವರೇ ನಿಮಗೆ ನಾಚಿಕೆ ಆಗಬೇಕು. ಅಂದ ಹಾಗೆ ಈ ಮದುವೆಗೆ ಹೋಗುವ ಅತಿಥಿಗಳ ಆಧಾರ್ ಕಾರ್ಡ್ ನೀಡಿದ ಪಾಸ್ ಪಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ಹೆಸರು ಇತ್ತೆ? ಉತ್ತರಿಸಲೇಬೇಕು ಡಿಸಿ ಸಾಹೇಬರು” ಎಂದು ಹೇಳಿದ್ದರು.

ಇದನ್ನೂ ಓದಿ: ಪಿಎಂ-ಸಿಎಂ ಸಭೆ ಟಿವಿಯಲ್ಲಿ ಪ್ರಸಾರ: ಆಕ್ಷೇಪಿಸಿದ ಮೋದಿ, ವಿಷಾದಿಸಿದ ಕೇಜ್ರಿವಾಲ್!

ಸರ್ಕಾರದ ಕೊರೊನಾ ಮಾರ್ಗಸೂಚಿಯಂತೆ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗಷ್ಟೇ ಅವಕಾಶ. ಆದರೆ ಈ ಕಾರ್ಯಕ್ರಮದಲ್ಲಿ ಅದು ಪಾಲನೆ ಆಗಿದೆಯೆ ಎಂದು ಕೂಡಾ ಶಶಿಧರ್‌ ಹೆಮ್ಮಾಡಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಮಹೆಂದಿ ಕಾರ್ಯಕ್ರಮದ ವಿಡಿಯೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿದ್ದಾರೆ.

ಅದರಲ್ಲಿ, “ಇದು ನಿನ್ನೆ ಉಡುಪಿ ಜಿಲ್ಲಾಧಿಕಾರಿಗಳು, ದೈಹಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೇ ಹಾಜರಾದ ASP ಅವರ ಮಗಳ ಮದುವೆಯ ಒಂದು ದೃಶ್ಯ. ಈ ಒಂದು ವಿಡಿಯೊದಲ್ಲೇ ನಾನು ಲೆಕ್ಕ ಹಾಕಿದ ಹಾಗೆ 24 ಜನರಿದ್ದಾರೆ. ಮಾಸ್ಕ್ ಧರಿಸಿದ್ದು ಒಬ್ಬ ಪುಣ್ಯಾತ್ಮ ಮಾತ್ರ. ಮತ್ತೆ ಯಾರಿಗೂ ಮಾಸ್ಕ್ ಇಲ್ಲ. ಸಾಮಾಜಿಕ ಅಂತರವಿಲ್ಲ. ಬಾಗಿಲಿಂದ ಒಳ ಬರುವ ಈ ವಿಡಿಯೋದಲ್ಲೇ 24 ಜನರಿದ್ದಾರೆ ಎಂದರೆ ಇನ್ನು ಒಳಗೆ ಎಷ್ಟು ಜನರಿರಬಹುದು ಎಂದು ಊಹಿಸಿ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಸೋಂಕಿತರಿಗೆ ಉಚಿತ ಊಟ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾದ ಮೂವರು ಬಾಲ್ಯಸ್ನೇಹಿತರು!

“ನಮಗೆ ASP ಮಗಳ ಮದುವೆಯನ್ನು ಸಂಭ್ರಮದಿಂದ ಮಾಡಿದ್ದಾರೆ ಎಂಬ ಆಕ್ಷೇಪವಿಲ್ಲ. ಅವರ ಮಗಳ ಮದುವೆಯ ಬಗ್ಗೆ ಸಾವಿರಾರು ಕನಸು ಕಂಡಿರುತ್ತಾರೆ. ಅವರ ಮಗಳ ಮದುವೆ ಚೆನ್ನಾಗಿಯೇ ನಡೆಯಲಿ. ಆದರೆ ಕಾನೂನು ಮಾಡುವ, ಪಾಲಿಸದಿದ್ದರೆ ಶಿಕ್ಷೆ ಕೊಡುವ ಇವರುಗಳು ಕನಿಷ್ಟ ಪಕ್ಷ ದೈಹಿಕ ಅಂತರ, ಮಾಸ್ಕ್ ನಿಯಮ ಪಾಲಿಸಲಿ. ಜೊತೆಗೆ ಜನಸಾಮಾನ್ಯರ ಮನೆಯ ಮದುವೆಗಳನ್ನೂ ಒಂದಷ್ಟು ನಿಯಮಗಳೊಂದಿಗೆ, ಶಿಸ್ತುಬದ್ದವಾಗಿ ಸಂಭ್ರಮದಿಂದ ನಡೆಯಲು ಬಿಡಲಿ. ಪಾಸು, ಆಧಾರ್ ಕಾರ್ಡು, ಮಣ್ಣು ಮಸಿ ಎಂಬ ತುಘಲಕ್ ದರ್ಬಾರ್ ಅನ್ನು ಇಲಾಖೆಗಳು ನಿಲ್ಲಿಸಲಿ. ನಮಗೂ ನಮ್ಮನೆ ಮಕ್ಕಳ ಬಗ್ಗೆ ಕನಸುಗಳಿರುತ್ತವೆ ಸ್ವಾಮಿ. ತಿಂಗಳುಗಳಿಂದ ಸಿದ್ಧತೆ ನಡೆಸಿದ್ದೇವೆ. ಮದುವೆ ಮನೆ ಎಂದು ಸಂಭ್ರಮಪಟ್ಟಿದ್ದೇವೆ. ಖರ್ಚು ಮಾಡಿದ್ದೇವೆ. ನೆಮ್ಮದಿಯಿಂದ, ಖುಷಿಯಿಂದ ನಮ್ಮ ಸಮಾರಂಭಗಳು ನಡೆಯಲು ಬಿಡಿ. ಕೋವಿಡ್ ನಿಯಮ ಪಾಲಿಸುವ ಹೊಣೆ ನಿಮಗಿಂತ ಜಾಸ್ತಿ ನಮಗಿದೆ” ಎಂದು ಶಶಿಧರ್‌ ಹೆಮ್ಮಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌

ಅವರಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಈ ಬಗ್ಗೆ ಪ್ರಶ್ನಿಸಿದ್ದು, ಜಿಲ್ಲಾಧಿಕಾರಿಯ ನಡೆಯನ್ನು ಟೀಕಿಸಿದ್ದಾರೆ. ಈ ಘಟನೆಯ ಬಗ್ಗೆ ವಾತಾಭಾರತಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್‌, “ಮದುವೆ ಕಾರ್ಯಕ್ರಮವು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಅವರ ಕುಟುಂಬದ ಆಪ್ತರಷ್ಟೇ ಸೇರಿದ್ದರು. ಅದು ಸಾರ್ವಜನಿಕ ಸ್ಥಳ ಅಲ್ಲ. ಆದುದರಿಂದ ಅಲ್ಲಿ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ. ಅಲ್ಲದೆ ಶುಕ್ರವಾರ ರಾತ್ರಿ 8.40 ಕ್ಕೆ ಆ ಕಾರ್ಯಕ್ರಮಕ್ಕೆ ಹೋಗಿ 8.50ಕ್ಕೆ ಕರ್ಫ್ಯೂಗಿಂತ ಮೊದಲೇ ಮನೆ ಸೇರಿದ್ದೇನೆ. ಮಧುಮಗಳ ಕೋರಿಕೆ ಮೇರೆಗೆ ಫೋಟೋಗಾಗಿ ಒಂದು ನಿಮಿಷ ಮಾತ್ರವೇ ಮಾಸ್ಕ್ ತೆಗೆದಿದ್ದೇನೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ತಲ್ಲಣ: #ModiOxygenDo, भाषणबाज_मोदी, #oxygenbedslekkakodi ಟ್ವಿಟರ್‌ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...