Homeಮುಖಪುಟನೀಟ್‌‌ ಸೀಟು ಹಂಚಿಕೆಯ ವಿಚಾರದಲ್ಲಿ ‘ಮತ್ತೆ ಮತ್ತೆ’ ಸುಳ್ಳು ಹೇಳಿತೇ ವಿಶ್ವವಾಣಿ?

ನೀಟ್‌‌ ಸೀಟು ಹಂಚಿಕೆಯ ವಿಚಾರದಲ್ಲಿ ‘ಮತ್ತೆ ಮತ್ತೆ’ ಸುಳ್ಳು ಹೇಳಿತೇ ವಿಶ್ವವಾಣಿ?

- Advertisement -
- Advertisement -

ನೀಟ್‌ ಟಾಪರ್‌‌ಗೆ ಸೀಟು ಸಿಗಲಿಲ್ಲ ಎಂದು ಸುಳ್ಳು ಸುದ್ದಿ ಬರೆದು, ಸೀಟು ಹಂಚಿಕೆ ಮತ್ತು ಮೀಸಲಾತಿ ಬಗ್ಗೆ ಓದುಗರ ದಾರಿ ತಪ್ಪಿಸಲು ಪ್ರಯತ್ನಿಸಿದ್ದ ಕನ್ನಡ ದಿನ ಪತ್ರಿಕೆ ‘ವಿಶ್ವವಾಣಿ’ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್‌ ಮತ್ತೇ ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಜನವರಿ 29ರ ಶನಿವಾರದಂದು ‘‘ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ‘ವಿಶ್ವವಾಣಿ’ ಸುದ್ದಿಯೊಂದನ್ನು ಪ್ರಸಾರ ಮಾಡಿತ್ತು. ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್‌, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು, ತಮ್ಮ ಪತ್ರಿಕೆಯ ವರದಿಯ ಚಿತ್ರವನ್ನು ಪೋಸ್ಟ್‌ ಮಾಡಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ವಾಸ್ತವದಲ್ಲಿ, ವಿಶ್ವವಾಣಿ ಪ್ರಕಟಿಸಿದ್ದ ಸುದ್ದಿಯಾಲಿ, ವಿಶ್ವೇಶ್ವರ ಭಟ್ ಅವರ ಟ್ವೀಟ್‌ ಆಗಲಿ, ಯಾವುದೂ ನಿಜವಾಗಿರಲಿಲ್ಲ. ಸುದ್ದಿಯಲ್ಲಿ ಹೇಳಿರುವಂತೆ ಗಗನ್‌ ಕುಬೇರ್‌ ಎನ್ನುವ ವ್ಯಕ್ತಿ ದೇಶಕ್ಕೆ ಮೊದಲನೇ ರ್‍ಯಾಂಕ್ ಪಡೆದಿರಲಿಲ್ಲ, ಈ ಬಗ್ಗೆ ಗಗನ್‌ ಅವರೇ ಸ್ಪಷ್ಟೀಕರಣ ನೀಡಿದ್ದರು.

ಇದನ್ನೂ ಓದಿ: ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ಇಷ್ಟೇ ಅಲ್ಲದೆ, ಪತ್ರಿಕೆಯ ಇಡೀ ಸುದ್ದಿಯಲ್ಲಿ ಮತ್ತು ವಿಶ್ವೇಶ್ವರ ಭಟ್ ಅವರ ಪ್ರತಿಪಾದನೆಯಲ್ಲಿ ನೀಟ್‌ ಸೀಟ್‌ ಹಂಚಿಕೆಯ ಬಗ್ಗೆ ತಪ್ಪು ಮಾಹಿತಿ ಮತ್ತು ಮೀಸಲಾತಿ ಬಗ್ಗೆಗಿನ ಅಸಹನೆ ಮಾತ್ರವೇ ಇತ್ತು. ಈ ಬಗ್ಗೆ ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಕೂಡಾ ಮಾಡಿದೆ. ಅದನ್ನು ಇಲ್ಲಿ ಓದಬಹುದು.

ಇದರ ನಂತರ, ಜನವರಿ 31ರ ಸೋಮವಾರದಂದು ವಿಶ್ವವಾಣಿ ಮತ್ತೇ ವರದಿ ಮಾಡಿ ಸೀಟು ಹಂಚಿಕೆಯ ಬಗೆಗಿನ ತಪ್ಪಾದ ಮಾಹಿತಿಯನ್ನು ಓದುಗರಿಗೆ ನೀಡಿದೆ. “ನೀಟ್‌ನಲ್ಲಿ ಎರಡನೇ ರ್‍ಯಾಂಕ್ ಪಡೆದ ಅರ್ಜುನ್‌ ಎಂಬ ವ್ಯಕ್ತಿ, ತನಗೆ ಬೇಕಾದ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ ಎಂದು ಹೇಳಿದ್ದಾರೆ” ಎಂದು ಪ್ರತಿಪಾದಿಸಿ ಪತ್ರಿಕೆ ಸುದ್ದಿ ಪ್ರಕಟಿಸಿದೆ.

ಈ ಸುದ್ದಿಯಲ್ಲಿ ವಿಶ್ವವಾಣಿ, “ಸೀಟು ಹಂಚಿಕೆ ಎಡವಟ್ಟು, ಸಾಮಾನ್ಯರಿಗೆ ಇಕ್ಕಟ್ಟು” ಎಂಬ ಹೆಡ್‌ಲೈನ್‌ ಕೊಟ್ಟು, ಉಪಶೀರ್ಷಿಕೆಯಲ್ಲಿ, “ನೀಟ್‌ನಲ್ಲಿ 2ನೇ ರ್‍ಯಾಂಕ್‌ ಪಡೆದರೂ ದೆಹಲಿ ವಿದ್ಯಾರ್ಥಿಗೆ ಸಿಗಲಿಲ್ಲ ಇಷ್ಟಪಟ್ಟ ಕಾಲೇಜು, ಸರ್ಕಾರಿ ಕಾಲೇಜಿನಲ್ಲಿ ಸಾಮಾನ್ಯ ವಿದ್ಯಾರ್ಥಿಗಳಿಗೆ ಸಿಗೋಲ್ಲ ಅವಕಾಶ” ಎಂದು ಬರೆದಿದೆ.

(ಆರ್ಕೈವ್‌ಗೆ ಇಲ್ಲಿ ಮತ್ತು ಇಲ್ಲಿ ನೋಡಿ)

ವಿಶ್ವವಾಣಿಯ ಈ ವರದಿ ಕೂಡಾ ತಪ್ಪು ಮಾಹಿತಿಯಿಂದ ಕೂಡಿದ್ದು, ಮುಖ್ಯವಾಗಿ ಸರ್ಕಾರಿ ಕಾಲೇಜುಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳಿಗೆ ಅವಕಾಶ ಸಿಗುವುದಿಲ್ಲ ಎಂಬ ಉಪಶೀರ್ಷಿಕೆಯು ಸುಳ್ಳಾಗಿದೆ. ಸರ್ಕಾರಿ ಸೀಟುಗಳಲ್ಲಿ ಸಾಮಾನ್ಯ ವರ್ಗಕ್ಕೆ ಎಂದು ಇಂತಿಷ್ಟು ಸೀಟುಗಳು ಇದ್ದೇ ಇರುತ್ತದೆ. ಇದರ ಜೊತೆಗೆ ಮೇಲ್ಜಾತಿಗಳ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ 10% ಮೀಸಲಾತಿಯಿದೆ.

ಹಾಗೆ ನೋಡಿದರೆ, ಸಾಮಾನ್ಯ ವರ್ಗದ ವಿದ್ಯಾರ್ಥಿ ಮಾತ್ರವಲ್ಲ, ಯಾವುದೇ ಕೆಟಗೆರಿ ವಿದ್ಯಾರ್ಥಿಗಳಿಗೂ ಇಂತಹದ್ದೇ ಕಾಲೇಜಿನಲ್ಲಿ ನಮಗೆ ಸರ್ಕಾರಿ ಸೀಟು ಬೇಕೆಂದರೆ ಸಿಗುವುದಿಲ್ಲ. ಈಗಾಗಲೇ ಹಂಚಿಕೆಯಾಗಿರುವ ಕಾಲೇಜಿನಲ್ಲಿ ಅವರು ತಮ್ಮ ಸೀಟುಗಳಿಗೆ ಅರ್ಜಿ ಹಾಕಬಹುದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಅಲ್ಲದೆ, ಈ ರೀತಿಯ ಮೀಸಲು ಕ್ಯಾಟಗರಿಗಳು ಯಾವಾಗಲೂ ಅದೇ ರೀತಿ ಇರುವುದಿಲ್ಲ. ವರ್ಷ ವರ್ಷವೂ ಬೇರೆ ಬೇರೆ ಕಾಲೇಜಿಗೆ ಬದಲಾಗುತ್ತಲೇ ಇರುತ್ತದೆ. ಉದಾಹರಣಗೆ ಹೇಳಬಹುದಾದರೆ, ಈ ವರ್ಷ ಗದಗ ಕಾಲೇಜಿಗೆ ಒಬಿಸಿ, ಎಸ್‌ಟಿ ಮತ್ತು ಸರ್ಕಾರಿ ಸೇವೆಯ ಸಾಮಾನ್ಯ ವರ್ಗಕ್ಕೆ ಇದ್ದರೆ, ಮುಂದಿನ ವರ್ಷ ಈ ಕಾಂಬಿನೇಷನ್‌ ಬದಲಾಗಿರುತ್ತದೆ. ಒಂದು ವೇಳೆ ಹಾಗೆ ಇದ್ದರೆ, ಒಂದು ಕಾಲೇಜಿಗೆ ಒಂದು ವರ್ಗದ ವಿದ್ಯಾರ್ಥಿಗಳ ಪ್ರವೇಶ ನಿರಾಕರಿಸದಂತಾಗುತ್ತದೆ. ಹಾಗಾಗಿ ಇದು ಬದಲಾಗುತ್ತಲೇ ಇರುತ್ತದೆ.

ಸುಳ್ಳು ಸುದ್ದಿಯ ತಪ್ಪನ್ನು ‘ಗಗನ್’ ಮೇಲೆ ಹೊರಿಸಿದ ವಿಶ್ವವಾಣಿ!

ಜನವರಿ 29ರ ಶನಿವಾರದಂದು ಪ್ರಕಟವಾಗಿದ್ದ ಸುದ್ದಿಯ ಸುಳ್ಳನ್ನು ವಿಶ್ವವಾಣಿಯು ಸುದ್ದಿಯ ಕೇಂದ್ರವಾಗಿದ್ದ ಗಗನ್‌ ಮೇಲೆ ಹೊರಿಸಿದೆ. ಪತ್ರಿಕೆಯು, ಸೋಮವಾರ ಪ್ರಕಟಿಸಿದ ವರದಿಯಲ್ಲಿ, “ರಾಜ್ಯದ ಗಗನ್ ಕುಬೇರ್‌ ವಿಷಯದಲ್ಲಿ ಆತ ಮೊದಲ ರ್‍ಯಾಂಕ್‌ ಪಡದೇ ಇಲ್ಲ. ಹೀಗಾಗಿ ಆತನ ತಪ್ಪಿದೆ ಎನ್ನುವ ಮಾತನ್ನು ಅನೇಕರು ಹೇಳಿದ್ದರು” ಎಂದು ಬರೆದಿದೆ.

ವಾಸ್ತವದಲ್ಲಿ, ಗಗನ್‌ ಕುಬೇರ್‌ ಅವರಿಗೆ ನೀಟ್‌ ಸೀಟ್‌ ಹಂಚಿಕೆಯ ಬಗ್ಗೆ ಸ್ಪಷ್ಟವಾದ ಅರಿವಿಲ್ಲ ಮತ್ತು ಮೀಸಲಾತಿ ಬಗ್ಗೆ ಅಸಮಾಧಾನವಿದೆ ಎಂಬುವುದನ್ನು ಬಿಟ್ಟರೆ, ಅವರು ಹಂಚಿಕೊಂಡಿರುವ ವಿಡಿಯೊದಲ್ಲಿ ‘ನಾನು ಮೊದಲ ರ್‍ಯಾಂಕ್ ಪಡೆದಿದ್ದೇನೆ’ ಎಂದು ಹೇಳಿಯೇ ಇಲ್ಲ.

ಅವರು ಸೀಟು ಹಂಚಿಕೆಯ ಬಗ್ಗೆ ಮಾತನಾಡುತ್ತಾ, ‘ನಾನು ಭಾರತ ಮಟ್ಟದಲ್ಲಿ ಒಂದನೇ ರ್‍ಯಾಂಕ್ ಪಡೆದರೂ, ನನಗೆ ಸೀಟು ಸಿಗುವುದಿಲ್ಲ’ ಎಂದು ಹೇಳಿದ್ದರು. ಆದರೆ ಪತ್ರಿಕೆಯು ಮೀಸಲಾತಿ ವಿರೋಧಿ ವರದಿ ಬರೆಯುವ ಭರದಲ್ಲಿ, ‘ನಾನು ಭಾರತ ಮಟ್ಟದಲ್ಲಿ ಒಂದನೇ ರ್‍ಯಾಂಕ್ ಪಡೆದರೂ, ನನಗೆ ಸೀಟು ಸಿಗುವುದಿಲ್ಲ’ ಎಂದು ಗಗನ್ ಅವರು ಉದಾಹರಣೆಯಾಗಿ ಹೇಳಿದ್ದ ಮಾತನ್ನು “ದೇಶಕ್ಕೆ ಮೊದಲ ರ್‍ಯಾಂಕ್” ಎಂದು ತಪ್ಪಾಗಿ ಅರ್ಥೈಸಿಕೊಂಡು ವರದಿ ಮಾಡಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಈ ಬಗ್ಗೆ ಪತ್ರಿಕೆಯು ಇನ್ನೂ ತಪ್ಪೊಪ್ಪಿಕೊಂಡಿರುವ ಬಗೆಗಿನ ಮಾಹಿತಿ ನಾನುಗೌರಿ.ಕಾಂಗೆ ಸಿಕ್ಕಿಲ್ಲ. ಮಾಹಿತಿ ಸಿಕ್ಕ ಕೂಡಲೇ ಈ ಬಗ್ಗೆ ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು. ಇಷ್ಟೇ ಅಲ್ಲದೆ, ವಿಶ್ವೇಶ್ವರ ಭಟ್ ಅವರು ಈ ತಪ್ಪು ಮಾಹಿತಿ ಇರುವ ತಮ್ಮ ಟ್ವೀಟ್ ಅನ್ನು ಕೂಡಾ ಇದುವರೆಗೂ ಡಿಲೀಟ್ ಮಾಡಿಲ್ಲ.

ಮತ್ತೆ ತಮ್ಮ ತಪ್ಪನ್ನು ಸಮರ್ಥಿಸಿಕೊಂಡ ವಿಶ್ವವಾಣಿ ಮತ್ತು ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್‌!

ಈ ಎಲ್ಲದರ ನಡುವೆ, ವೈದ್ಯಕೀಯ ಶಿಕ್ಷಣ ಇಲಾಖೆಯು ಸೀಟ್‌ ಮ್ಯಾಟ್ರಿಕ್ಸ್‌‌ನಲ್ಲಿ ರೋಸ್ಟರ್‌‌ ಅನ್ನು ಪುನರ್‌ ನಿಗದಿಪಡಿಸಿರುವುದರಿಂದ 2021ನೇ ಪಿಜಿ ವೈದ್ಯಕೀಯ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಸೋಮವಾರ ರದ್ದು ಪಡೆಸಿ, ಹಿಂಪಡೆದಿತ್ತು.

ಇದನ್ನು ಆಧಾರವಾಗಿಟ್ಟುಕೊಂಡು ಮತ್ತೆ ಟ್ವೀಟ್ ಮಾಡಿರುವ ವಿಶ್ವೇಶ್ವರ ಭಟ್‌, ‘‘ನಮ್ಮ ವರದಿಯ ಆಶಯ ಮತ್ತು ಕಳಕಳಿಯನ್ನು ಅರಿಯದ ಕೆಲವು ಅವಿವೇಕಿಗಳು, ವಿಶ್ವವಾಣಿ ಸುಳ್ಳು ವರದಿ ಮಾಡಿದೆ ಎಂದು ಅರಚಿಕೊಂಡಿದ್ದರು. ಇಂದು ವೈದ್ಯಕೀಯ ಶಿಕ್ಷಣ ಇಲಾಖೆ ಪಿಜಿ ವೈದ್ಯಕೀಯ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ರದ್ದುಪಡಿಸಿದೆ. ಈಗ ಏನಂತಾರೋ ?!” ಎಂದು ಟ್ವೀಟ್ ಮಾಡಿದ್ದಾರೆ. ಜೊತೆಗೆ ಅವರ ಪತ್ರಿಕೆಯು ಈ ಬಗ್ಗೆ ಸುದ್ದಿ ಕೂಡಾ ಮಾಡಿದೆ.

ಪತ್ರಿಕೆಯ ಆರ್ಕೃವ್‌ ಲಿಂಕ್ ಇಲ್ಲಿದೆ.
ವಿಶ್ವೇಶ್ವರ ಭಟ್‌ ಟ್ವೀಟ್ ಆರ್ಕೈವ್‌‌ಗೆ ಇಲ್ಲಿ ಕ್ಲಿಕ್ ಮಾಡಿ

ವಾಸ್ತವದಲ್ಲಿ ವಿಶ್ವವಾಣಿ ಪತ್ರಿಕೆಯ ಸುದ್ದಿಗೂ, ಸೀಟು ಹಂಚಿಕೆ ರದ್ದು ಮಾಡಿರುವ ಸರ್ಕಾರದ ಆದೇಶಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆರಿಯರ್‌ ಗೈಡನ್ಸ್‌ ಎಕ್ಸ್‌ಪರ್ಟ್ ಯು.ಎಚ್‌. ಉಮ್ಮರ್‌ ಅವರು ಹೇಳಿದ್ದಾರೆ.

“ಕೆಲವು ಕಾಲೇಜುಗಳಲ್ಲಿ ಹೆಚ್ಚಿನ ಸೀಟುಗಳು ಸೇರ್ಪಡೆಯಾಗಿವೆ. ಜೊತೆಗೆ ಮೊದಲ ಸುತ್ತಿನ ಆಪ್ಷನ್ ಎಂಟ್ರಿಯಲ್ಲಿ ಹಲವು ಎಡವಟ್ಟುಗಳಾಗಿವೆ. ಇಲ್ಲದ ಕೋರ್ಸ್ ಮತ್ತು ಫೀಸ್ ಅದರಲ್ಲಿ ಕಾಣಿಸುತ್ತಿದ್ದವು. ಇದು ಸೀಟ್ ಮ್ಯಾಟ್ರಿಕ್ಸ್‌‌ಗೆ ತಾಳೆಯಾಗಿತ್ತಿರಲಿಲ್ಲ. ಅದಕ್ಕಾಗಿ ಈ ಹಿಂದಿನ ಸೀಟು ಹಂಚಿಕೆ ರದ್ದಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

“ಗಗನ್ ಕುಬೇರ್‌ ಮತ್ತು ವಿಶ್ವವಾಣಿ ವರದಿಗೂ, ಸೀಟು ಹಂಚಿಕೆ ರದ್ದಾಗಿರುವ ಈ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ. ಗದಗ ಮೆಡಿಕಲ್ ಕಾಲೇಜಿನ ಹಳೇ ಮತ್ತು ಹೊಸ ಸೀಟ್ ಮ್ಯಾಟ್ರಿಕ್ಸ್‌ನಲ್ಲಿ ಯಾವುದೇ ವ್ಯತ್ಯಾಸವಿಲ್ಲ” ಎಂದು ಉಮ್ಮರ್‌ ಹೇಳಿದ್ದಾರೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೂಡಾ ವೆಬ್‌ಸೈಟ್‌ನಲ್ಲಿ ಅದೇ ರೀತಿ ಹೇಳಿಕೊಂಡಿದೆ. “ಚಾಮರಾಜನಗರ, ಕಾರವಾರ ಮತ್ತು ಇಎಸ್‌ಐ, ಬೆಂಗಳೂರಿನ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹೊಸ ಸೀಟುಗಳನ್ನು ಸೇರಿಸಲಾಗಿದೆ” ಎಂದು ಪ್ರಾಧಿಕಾರ ಹೇಳಿದೆ. ಆದರೆ ಗದಗ ಕಾಲೇಜಿನಲ್ಲಿ ಯಾವುದೆ ಸೀಟು ಬದಲಾವಣೆ ಬಗ್ಗೆ ಮತ್ತು ಮೀಸಲಾತಿ ಕ್ಯಾಟಗರಿ ಬದಲಾವಣೆ ಬಗ್ಗೆ ಇದರಲ್ಲಿ ಮಾಹಿತಿಯಿಲ್ಲ.

ಒಟ್ಟಿನಲ್ಲಿ ಹೇಳಬಹುದಾದರೆ, ವಿಶ್ವವಾಣಿ ಮತ್ತು ಅದರ ಸಂಪಾದಕರಾದ ವಿಶ್ವೇಶ್ವರ ಭಟ್‌ ಅವರು ಮೀಸಲಾತಿ ಬಗೆಗಿನ ಅಸಮಾಧಾನವನ್ನು ವರದಿಯಲ್ಲಿ ಮತ್ತು ಟ್ವೀಟ್‌ನಲ್ಲಿ ಹೇಳಿಕೊಂಡು ತಮ್ಮ ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಗದಗಿನ ಕಾಲೇಜಿನಲ್ಲಿ ಯಾವುದೆ ಸೀಟನ್ನು ಸೇರಿಸಲಾಗಿಲ್ಲ. ಸರ್ಕಾರಿ ಸೀಟು ಹಂಚಿಕೆ ಈ ಹಿಂದೆ ಇದ್ದಂತೆ, ತಮ್ಮ ಕ್ಯಾಟಗರಿ ಇರುವ ಕಾಲೇಜನ್ನು ನೋಡಿಕೊಂಡೇ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಈಗಲೂ ಸಲ್ಲಿಸಬೇಕಾಗುತ್ತದೆ.

ವಿಶ್ವೇಶ್ವರ ಭಟ್‌ ಅವರ ದಾರಿ ತಪ್ಪಿಸುವ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಮಂಗಳೂರಿನ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು, “ನಿಮ್ಮ ಸುಳ್ಳು ಸುಳ್ಳೇ, ಸಮರ್ಥನೆಗೆ ಸಾವಿರ ಪ್ರಯತ್ನ ಪಟ್ಟರೂ ಸುಳ್ಳೇ. ಇದು ಕೆಇಎ ಪ್ರಕಟಣೆ. ಹೊಸ ಪಟ್ಟಿ ಮಾಡಿದ ಬಳಿಕವೂ ಗದಗದ ಅರಿವಳಿಕೆ ವಿಭಾಗ ಹಾಗೂ ನರಮಾನಸಿಕ ವಿಭಾಗದ ಈ ಬಾರಿಯ ಪಿಜಿ ಸೀಟು ಹಂಚಿಕೆ ಬದಲಾಗುವುದಿಲ್ಲ, ನಿಮ್ಮ ಸುಳ್ಳು ವರದಿಗೆ ಬೆಲೆ ಬರುವುದೂ ಇಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನಿಮೇಷನ್‌ ವಿಡಿಯೊ ಆಧಾರದಲ್ಲಿ ರೈತರ ಮೇಲೆ ಪ್ರಧಾನಿ ಕೊಲೆ ಸಂಚು ಆರೋಪ ಹೊರಿಸಿದ ‘ನ್ಯೂಸ್‌ ಫಸ್ಟ್‌ ಕನ್ನಡ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...