Homeಮುಖಪುಟರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್‌ ಮಷಿನ್‌ಗಳು..!

"ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ"

- Advertisement -
- Advertisement -

ದೇಶದ ಐತಿಹಾಸಿಕ ಹೋರಾಟದಲ್ಲಿ ನಿರತರಾಗಿರುವ ರೈತರ ಜೊತೆಗೆ ಇಡೀ ದೇಶವೇ ನಿಂತಿದೆ. ಇಂತಹ ಒಂದು ಹೋರಾಟದಲ್ಲಿ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ. ಕಳೆದ 50 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಠಿಕಾಣಿ ಹೂಡಿರುವ ರೈತರ ಬಟ್ಟೆ ಸ್ವಚ್ಛಗೊಳಿಸಲು ಸುಮಾರು 500ಕ್ಕೂ ಹೆಚ್ಚು ವಾಷಿಂಗ್‌ ಮಷಿನ್‌ಗಳು ಕಾರ್ಯನಿರ್ವಹಿಸುತ್ತಿವೆ.

ಪ್ರತಿಭಟನಾ ಸ್ಥಳದಲ್ಲಿ ಖಾಲ್ಸಾ ಏಡ್‌ ಸೇರಿದಂತೆ ಹಲವು ಸಂಘ ಸಂಸ್ಥೆಗಳು, ರೈತರು ಮತ್ತು ಬೆಂಬಲಿಗರು ಇಲ್ಲಿ ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿದ್ದಾರೆ. ತಮ್ಮ ಕೈಯಲ್ಲಿ ಆದಷ್ಟು, ತಮ್ಮ ಶಕ್ತಿಗೆ ಮೀರಿದಷ್ಟು ಮಷಿನ್‌ಗಳನ್ನು ಇಲ್ಲಿಡುವ ಪ್ರಯತ್ನ ಮಾಡಿದ್ದಾರೆ.

‘ಖಾಲ್ಸಾ ಏಡ್’ ಸಂಸ್ಥೆ‌ ಟಿಕ್ರಿ ಗಡಿಯೊಂದರಲ್ಲೇ 10 ಮಷಿನ್‌ಗಳನ್ನು ಇಟ್ಟಿದೆ. ಬೇರೆ ಬೇರೆ ಗಡಿಗಳಲ್ಲಿ ಕನಿಷ್ಠ ಆರು ವಾಷಿಂಗ್‌ ಮಷಿನ್‌ಗಳನ್ನು ಇದೊಂದೇ ಸಂಸ್ಥೆ ನೀಡಿದೆ. ಇದೆ ರೀತಿ ಪಂಜಾಬ್‌ನಿಂದ ಬಂದ ಇಬ್ಬರು ಯುವಕರ ತಂಡ ಸಿಂಘು ಗಡಿಯ ಆರಂಭದಲ್ಲೇ ಎರಡು ಮಷಿನ್‌ಗಳ ಮೂಲಕ ರೈತರ ಬಟ್ಟೆ ಒಗೆದು, ಒಣಗಿಸಿ ಕೊಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಭಕ್ತಕುಳಾವಿಗಳ ಬೆಂಬಲ ಬೆಲೆ: ರಾಜರಾಂ ತಲ್ಲೂರು ಬರಹ

ಎಲ್ಲಾ ‘ಗುರು ಕಾ ಲಂಗರ್‌’ಗಳಲ್ಲಿ ಎರಡೆರಡು ವಾಷಿಂಗ್‌ ಮಷಿನ್‌ಗಳನ್ನು ಇಡಲಾಗಿದೆ. ಈ ಮೂಲಕ ಲಂಗರ್‌ ಸೇವೆ ಮತ್ತು ಬಟ್ಟೆ ತೊಳೆದುಕೊಡುವ ಸೇವೆಯನ್ನು ಮಾಡಲಾಗುತ್ತಿದೆ.

ಪಂಜಾಬ್‌ನ ಲೂದಿಯಾನ ಮೂಲದ ಪ್ರಿನ್ಸ್‌ ಪಾಲ್‌ ಸಿಂಗ್‌ ಎಂಬುವರು ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಸಿಂಘು ಗಡಿಯಲ್ಲಿ ಇಡುವ ಮೂಲಕ ರೈತರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ದೆಹಲಿ ಚಲೋಗೆ ಸಾಥ್‌ ನೀಡಲು ಬಂದಿದ್ದ ಪ್ರಿನ್ಸ್‌ ಪಾಲ್‌ ಸಿಂಗ್‌ ಕೆಲ ದಿನಗಳು ಇಲ್ಲಿಯೇ ಟೆಂಟ್‌ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ವಾಷಿಂಗ್‌ ಮಷಿನ್‌ಗಳನ್ನು ಇಟ್ಟಿರುವ ಹಿಂದಿನ ಕಥೆಯನ್ನು ನಾನುಗೌರಿ.ಕಾಂ ಜೊತೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ…

“ನಾವು ಇಲ್ಲಿಂದ 350 ಕಿಲೊಮೀಟರ್ ದೂರದಲ್ಲಿರುವ ಲೂದಿಯಾನದಿಂದ ಬಂದಿದ್ದೇವೆ. ಮೊದಲು ಇಲ್ಲಿಗೆ ಬಂದು ಟೆಂಟ್‌ ಹಾಕಿಕೊಂಡಿದ್ದ ಸಂದರ್ಭದಲ್ಲಿ ಬಟ್ಟೆ ಕೊಳೆಯಾಗಿತ್ತು. ಅವುಗಳನ್ನು ವಾಶ್‌ ಮಾಡಿಸಲು 350 ಕಿಲೋಮೀಟರ್‌ ದೂರ ಮತ್ತೆ ಪ್ರಯಾಣಿಸಬೇಕಾಯಿತು. ಸ್ವತಃ ಕಷ್ಟಕ್ಕೆ ಒಳಗಾದ ಮೇಲೆ ನನಗೆ ರೈತರ ಕಷ್ಟ ಅನುಭವಕ್ಕೆ ಬಂತು. ನಾನು ಮತ್ತೆ ಊರಿಗೆ ಹೋಗಿ ಅಲ್ಲಿಂದ ನಾಲ್ಕು ವಾಷಿಂಗ್‌ ಮಷಿನ್‌ಗಳನ್ನು ಕೊಂಡು ತಂದು ಇಲ್ಲಿ ಇಟ್ಟಿದ್ದೇನೆ” ಎನ್ನುತ್ತಾರೆ.

“ಮೊದಲಿಗೆ ನಾನೊಬ್ಬನೇ ಇದ್ದೆ. ಈಗ ಇಲ್ಲಿನ ಸ್ಥಳೀಯ ಪಂಕ್ಚರ್‌ ಅಂಗಡಿಯಲ್ಲಿ ಕೆಲಸ ಮಾಡುವ ಯುವಕರು ಸಹಾಯಕ್ಕೆ ಬಂದಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಇರುವ ಯುವಕರು ಸಾಥ್‌ ನೀಡುತ್ತಿದ್ದಾರೆ. ಪಕ್ಕದಲ್ಲಿರುವ ಮನೆ ಮಾಲೀಕ ಬಟ್ಟೆ ಒಗೆಯಲು ಬೇಕಾದ ನೀರು ಮತ್ತು ವಿದ್ಯುತ್‌ ಶಕ್ತಿ ವ್ಯವಸ್ಥೆಯನ್ನು ಉಚಿತವಾಗಿ ನೀಡಿದ್ದಾರೆ” ಎಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಕೃತಜ್ಞತೆಯಿಲ್ಲದ ಕಾರಣಕ್ಕೆ ಯಡಿಯೂರಪ್ಪ ಹೆಚ್‌‌.ವಿಶ್ವನಾಥ್‌‌ರನ್ನು ಮಂತ್ರಿ ಮಾಡಿಲ್ಲ: ಸಿದ್ದರಾಮಯ್ಯ

“ನಮ್ಮಗಳ ಜೊತೆಗೆ ಇಲ್ಲಿ ಹಲವು ಸಂಘಟನೆಗಳು ವಾಷಿಂಗ್‌ ಮಷಿನ್‌ ಹಾಕಿಕೊಂಡಿವೆ. ಅವರುಗಳನ್ನು ಹೊರತುಪಡಿಸಿ ನಮಗೆ ಪ್ರತಿದಿನ ಕನಿಷ್ಟ 300 ಜನ ರೈತರು ಬಟ್ಟೆ ನೀಡುತ್ತಾರೆ. ಬಟ್ಟೆ ವಾಶ್‌ ಮಾಡಿಕೊಡಲು 20 ನಿಮಿಷ ಸಮಯ ಕೇಳುತ್ತೇವೆ. ನಂತರ ಬಂದು ಕಲೆಕ್ಟ್‌ ಮಾಡಿಕೊಳ್ಳಲು ತಿಳಿಸಲಾಗುತ್ತದೆ. ಇದೊಂದು ಸೇವೆ ಎಂದು ನಾವು ಪರಿಗಣಿಸಿದ್ದೇವೆ. ನಮ್ಮ ರೈತರ ಕಷ್ಟಕ್ಕೆ ನಾವು ನಿಲ್ಲಬೇಕು. ಇದು ದೇಶದ ಎಲ್ಲಾ ರೈತರ ಸಮಸ್ಯೆ. ಕೇಂದ್ರ ಸರ್ಕಾರ ಮೂರು ಕರಾಳ ಕಾನೂನುಗಳನ್ನು ವಾಪಸ್‌ ಪಡೆಯುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ನಾನು ಇಲ್ಲಿ ಸೇವೆ ಸಲ್ಲಿಸುತ್ತಲೇ ಇರುತ್ತೇನೆ” ಎಂದಿದ್ದಾರೆ ಪ್ರಿನ್ಸ್‌ ಪಾಲ್‌ ಸಿಂಗ್.

ಇದೇ ರೀತಿ ಹಲವು ವಾಷಿಂಗ್‌ ಮಷಿನ್ ಟೆಂಟ್‌ಗಳನ್ನು ಹಾಕಿರುವ ಜನ ಕೂಡ ಪ್ರತಿಭಟನೆ ಅಂತ್ಯವಾಗುವವರೆಗೂ ನಾವು ಸೇವೆ ಸಲ್ಲಿಸುತ್ತೇವೆ ಎನ್ನುತ್ತಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...